AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nigeria: ಬಂಧೂಕುಧಾರಿಗಳಿಂದ ರೈಲ್ವೆ ನಿಲ್ದಾಣದ ಮೇಲೆ ದಾಳಿ, 30ಕ್ಕೂ ಹೆಚ್ಚು ಮಂದಿಯ ಅಪಹರಣ

ನೈಜೀರಿಯಾ(Nigeria) ದ ರೈಲು ನಿಲ್ದಾಣದ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಮೊದಲಿಗೆ ದಾಳಿಕೋರರು ಗುಂಡು ಹಾರಿಸಿದ್ದು, ಅನೇಕ ಜನರು ಗಾಯಗೊಂಡಿದ್ದು, 32 ಜನರನ್ನು ಅಪಹರಿಸಿರುವ ಮಾಹಿತಿ ಲಭ್ಯವಾಗಿದೆ.

Nigeria: ಬಂಧೂಕುಧಾರಿಗಳಿಂದ ರೈಲ್ವೆ ನಿಲ್ದಾಣದ ಮೇಲೆ ದಾಳಿ, 30ಕ್ಕೂ ಹೆಚ್ಚು ಮಂದಿಯ ಅಪಹರಣ
ನೈಜೀರಿಯಾ ರೈಲ್ವೆ ನಿಲ್ದಾಣ
TV9 Web
| Edited By: |

Updated on: Jan 09, 2023 | 8:14 AM

Share

ನೈಜೀರಿಯಾ(Nigeria) ದ ರೈಲು ನಿಲ್ದಾಣದ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಮೊದಲಿಗೆ ದಾಳಿಕೋರರು ಗುಂಡು ಹಾರಿಸಿದ್ದು, ಅನೇಕ ಜನರು ಗಾಯಗೊಂಡಿದ್ದು, 32 ಜನರನ್ನು ಅಪಹರಿಸಿರುವ ಮಾಹಿತಿ ಲಭ್ಯವಾಗಿದೆ. ನೈಜೀರಿಯಾದ ದಕ್ಷಿಣ ಇಡೊ ರಾಜ್ಯದ ರೈಲು ನಿಲ್ದಾಣದಲ್ಲಿ ಈ ದಾಳಿ ನಡೆದಿದ್ದು, ಎಕೆ-47 ರೈಫಲ್‌ಗಳಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಫೆಬ್ರವರಿಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೂ ಮುನ್ನ ನಡೆದಿರುವ ಈ ದಾಳಿ ಸರ್ಕಾರಕ್ಕೆ ನೇರ ಸವಾಲಾಗಿದೆ.

ಈ ದಾಳಿಯು ಆಫ್ರಿಕಾದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಅಭದ್ರತೆಯ ಹೊಸ ಉದಾಹರಣೆಯಾಗಿದೆ. ಸಂಜೆ 4 ಗಂಟೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಟಾಮ್ ಇಕಿಮಿ ನಿಲ್ದಾಣದ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಾಳಿ ನಡೆದಾಗ ವಾರಿಗೆ ರೈಲಿಗಾಗಿ ಜನರು ನಿಲ್ದಾಣದಲ್ಲಿ ಕಾಯುತ್ತಿದ್ದರು. ವಾರಿ ತೈಲ ಕೇಂದ್ರವಾಗಿದೆ. ಅದೇ ಸಮಯದಲ್ಲಿ, ಈ ನಿಲ್ದಾಣವು ರಾಜ್ಯದ ರಾಜಧಾನಿ ಬೆನಿನ್ ನಗರದ ಈಶಾನ್ಯಕ್ಕೆ ಸುಮಾರು 111 ಕಿಮೀ ದೂರದಲ್ಲಿದೆ ಮತ್ತು ಅನಂಬ್ರಾ ರಾಜ್ಯದ ಗಡಿಗೆ ಹತ್ತಿರದಲ್ಲಿದೆ. ಪೊಲೀಸರ ಪ್ರಕಾರ, ದಾಳಿಯಲ್ಲಿ ನಿಲ್ದಾಣದಲ್ಲಿದ್ದ ಕೆಲವರ ಮೇಲೂ ಗುಂಡು ಹಾರಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಹರಣಕಾರರು ತಮ್ಮೊಂದಿಗೆ 32 ಜನರನ್ನು ಕರೆದೊಯ್ದಿದ್ದಾರೆ, ಅವರಲ್ಲಿ ಒಬ್ಬರು ಈಗಾಗಲೇ ತಪ್ಪಿಸಿಕೊಂಡಿದ್ದಾರೆ ಎಂದು ಎಡೊ ರಾಜ್ಯ ಮಾಹಿತಿ ಅಧಿಕಾರಿ ಕ್ರಿಸ್ ಓಸಾ ನೆಹಿಖರೆ ಹೇಳಿದ್ದಾರೆ. ಸದ್ಯ ಅಪಹರಣಕ್ಕೊಳಗಾದವರನ್ನು ರಕ್ಷಿಸಲು ಸೇನೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ಆರಂಭಿಸಿದೆ. ಇದರಲ್ಲಿ ವಿಜಿಲೆನ್ಸ್ ನೆಟ್‌ವರ್ಕ್‌ನ ಸಹಾಯವನ್ನೂ ಪಡೆಯಲಾಗುತ್ತಿದೆ.

ಮುಂದಿನ ಕೆಲವೇ ಗಂಟೆಗಳಲ್ಲಿ ಅಪಹರಣಕ್ಕೊಳಗಾದ ಎಲ್ಲರನ್ನು ರಕ್ಷಿಸಲಾಗುವುದು ಎಂದು ನಾವು ಭರವಸೆ ನೀಡುತ್ತೇವೆ ಎಂದು ಅವರು ಹೇಳಿದರು.

ನೈಜೀರಿಯನ್ ರೈಲ್ವೇಸ್ ಕಾರ್ಪೊರೇಷನ್ (ಎನ್‌ಆರ್‌ಸಿ) ಮುಂದಿನ ಸೂಚನೆ ಬರುವವರೆಗೆ ನಿಲ್ದಾಣವನ್ನು ಮುಚ್ಚಲಾಗುತ್ತದೆ ಎಂದು ಹೇಳಲಾಗಿದೆ. NRC ಕಳೆದ ತಿಂಗಳು ರಾಜಧಾನಿ ಅಬುಜಾವನ್ನು ಉತ್ತರ ಕಡುನಾ ರಾಜ್ಯಕ್ಕೆ ಸಂಪರ್ಕಿಸುವ ರೈಲು ಸೇವೆಯನ್ನು ಪುನಃ ತೆರೆಯಿತು, ಅದರ ಹಳಿಗಳನ್ನು ತಿಂಗಳ ಹಿಂದೆ ಬಂದೂಕುಧಾರಿಗಳು ಸ್ಫೋಟಿಸಿದ್ದರು. ಡಜನ್​ಗಟ್ಟಲೆ ಪ್ರಯಾಣಿಕರನ್ನು ಅಪಹರಿಸಿ ಆರು ಜನರನ್ನು ಕೊಂದಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ