AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima: ಗುರುಪೂರ್ಣಿಮೆ ಪ್ರಯುಕ್ತ ಅಮೆರಿಕದ ಟೆಕ್ಸಾಸ್​ನಲ್ಲಿ 10 ಸಾವಿರ ಜನರಿಂದ ಭಗವದ್ಗೀತೆ ಪಠಣ

ಅಮೆರಿಕದ ಟೆಕ್ಸಾಸ್​ನಲ್ಲಿ ಗುರು ಪೂರ್ಣಿಮೆ(Guru Purnima) ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಟೆಕ್ಸಾಸ್​ನ ಅಲೆನ್ ಈಸ್ಟ್​ ಸೆಂಟರ್​ನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿಯಿಂದ ಭಗವದ್ಗೀತೆ ಪಠಣ ಕಾರ್ಯಕ್ರಮ ಜರುಗಿತು.

Guru Purnima: ಗುರುಪೂರ್ಣಿಮೆ ಪ್ರಯುಕ್ತ ಅಮೆರಿಕದ ಟೆಕ್ಸಾಸ್​ನಲ್ಲಿ 10 ಸಾವಿರ ಜನರಿಂದ ಭಗವದ್ಗೀತೆ ಪಠಣ
ಭಗವದ್ಗೀತೆ ಪಠಣImage Credit source: ANI
Follow us
ನಯನಾ ರಾಜೀವ್
|

Updated on: Jul 04, 2023 | 8:09 AM

ಅಮೆರಿಕದ ಟೆಕ್ಸಾಸ್​ನಲ್ಲಿ ಗುರು ಪೂರ್ಣಿಮೆ(Guru Purnima) ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಟೆಕ್ಸಾಸ್​ನ ಅಲೆನ್ ಈಸ್ಟ್​ ಸೆಂಟರ್​ನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿಯಿಂದ ಭಗವದ್ಗೀತೆ ಪಠಣ ಕಾರ್ಯಕ್ರಮ ಜರುಗಿತು. 4 ರಿಂದ 84 ವರ್ಷದೊಳಗಿನ 10 ಸಾವಿರಕ್ಕೂ ಅಧಿಕ ಮಂದಿ ನೆರೆದಿದ್ದರು. ಯೋಗ ಸಂಗೀತಾ ಮತ್ತು ಎಸ್​ಜಿಎಸ್​ ಗೀತಾ ಫೌಂಡೇಷನ್ ಭಗವದ್ಗೀತಾ ಪಾರಾಯಣವನ್ನು ಆಯೋಜಿಸಿತ್ತು.

ಮೈಸೂರಿನ ಅವಧೂತ ದತ್ತ ಪೀಠಂ ಆಶ್ರಮದಿಂದ ದೊರೆತ ಮಾಹಿತಿ ಪ್ರಕಾರ ಸೋಮವಾರ ಗುರು ಪೂರ್ಣಿಮೆ ನಿಮಿತ್ತ ವಿಶ್ವವಿಖ್ಯಾತ ಆಧ್ಯಾತ್ಮಿಕ ಸಂತ ಪೂಜ್ಯ ಗಣಪತಿ ಸಚ್ಚಿದಾನಂದ ಅವರ ಸಮ್ಮುಖದಲ್ಲಿ ಭಗವದ್ಗೀತೆ ಪಠಣ ಮಾಡಲಾಯಿತು.

ಮತ್ತಷ್ಟು ಓದಿ: Guru Purnima 2023: ವೇದವ್ಯಾಸರ ಜನ್ಮದಿನದಂದು ಗುರು ಪೂರ್ಣಿಮಾ ಆಚರಿಸುವುದೇಕೆ? ಗುರು ಯಾರು?

ಟೆಕ್ಸಾಸ್‌ನಲ್ಲಿ ಭಗವದ್ಗೀತೆಯನ್ನು ಪಠಿಸಿದ ಎಲ್ಲಾ 10,000 ಜನರು ತಮ್ಮ ಗುರುಗಳಾದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಳೆದ ಎಂಟು ವರ್ಷಗಳಿಂದ ಅದನ್ನು ಕಂಠಪಾಠ ಮಾಡಿದ್ದಾರೆ. ಸ್ವಾಮೀಜಿ ಅಮೆರಿಕದಲ್ಲಿ ಭಗವದ್ಗೀತೆ ಪಠಣ ಕಾರ್ಯಕ್ರಮ ಆಯೋಜಿಸಿರುವುದು ಇದೇ ಮೊದಲಲ್ಲ. ಸ್ವಾಮೀಜಿ ಕಳೆದ ಕೆಲವು ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

ಅವಧೂತ ದತ್ತ ಪೀಠವು 1966 ರಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಂದ ಸ್ಥಾಪಿಸಲ್ಪಟ್ಟ ಅಂತರರಾಷ್ಟ್ರೀಯ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಲ್ಯಾಣ ಸಂಸ್ಥೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್