AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

ಆಗಸ್ಟ್​ 14ರಂದು ಹೈಟಿಯಲ್ಲಿ ಭೂಕಂಪ ಸಂಭವಿಸಿದ್ದು, 7.2ರಷ್ಟು ತೀವ್ರತೆ ಇತ್ತು. ಇದರಿಂದ 53 ಸಾವಿರ ಕಟ್ಟಡಗಳು ಕುಸಿದುಬಿದ್ದಿದ್ದವು. ಬುಧವಾರದ ಹೊತ್ತಿಗೆ  2,189 ಮಂದಿ ಮೃತಪಟ್ಟಿದ್ದರು.

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ
ಹೈಟಿ ಭೂಕಂಪದಿಂದಾದ ಹಾನಿಯ ದೃಶ್ಯ
TV9 Web
| Edited By: |

Updated on:Aug 23, 2021 | 12:37 PM

Share

ಕಳೆದವಾರ ಹೈಟಿ ದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,207ಕ್ಕೆ ಏರಿಕೆಯಾಗಿದ್ದು, ಇನ್ನೂ 344 ಮಂದಿ ಕಾಣೆಯಾಗಿದ್ದಾರೆ ಎಂದು ದೇಶದ ನಾಗರಿಕ ರಕ್ಷಣಾ ದಳ ಹೇಳಿದೆ.  ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ. ಹೆಚ್ಚೆಚ್ಚು ಕಾರ್ಯಾಚರಣೆ ನಡೆಸಿದಷ್ಟೂ ಶವಗಳು ಪತ್ತೆಯಾಗುತ್ತಿವೆ. ಭೂಕಂಪದಿಂದ ಸಾವಿರಾರು ಜನರು ಮನೆ ಕಳೆದುಕೊಂಡಿದ್ದಾರೆ. ಹೊತ್ತಿನ ಊಟವೂ ಇಲ್ಲದಂತಾಗಿದೆ. ಇಂಥ ನಿರಾಶ್ರಿತ ಜನರಿಗೆ ಅಲ್ಲಿನ ಡಕಾಯಿತ ಗುಂಪುಗಳೂ ಕೂಡ ಸಹಾಯ ಮಾಡಲು ಮುಂದೆ ಬರುತ್ತಿವೆ. ಈ ಡಕಾಯಿತರು ಬೇರೆ ಕಡೆಗಳಿಂದ ನೆರವಿನ ಟ್ರಕ್​​ಗಳನ್ನು ಲೂಟಿ ಹೊಡೆದು, ಭೂಕಂಪ ನಿರಾಶ್ರಿತರಿಗೆ ಸಹಾಯ ಮಾಡುತ್ತಿವೆ.  

ಆಗಸ್ಟ್​ 14ರಂದು ಹೈಟಿಯಲ್ಲಿ ಭೂಕಂಪ ಸಂಭವಿಸಿದ್ದು, 7.2ರಷ್ಟು ತೀವ್ರತೆ ಇತ್ತು. ಇದರಿಂದ 53 ಸಾವಿರ ಕಟ್ಟಡಗಳು ಕುಸಿದುಬಿದ್ದಿದ್ದವು. ಬುಧವಾರದ ಹೊತ್ತಿಗೆ  2,189 ಮಂದಿ ಮೃತಪಟ್ಟಿದ್ದರು. ಒಟ್ಟು 12,268 ಮಂದಿ ಗಾಯಗೊಂಡಿದ್ದಾರೆ. ಹೀಗೆ ಗಾಯಗೊಂಡ ಕೆಲವರೂ, ಚಿಕಿತ್ಸೆ ಫಲಿಸದೆ ಮೃತಪಡುತ್ತಿದ್ದಾರೆ. ಯುಎಸ್ ಮೂಲದ ನೆರವು ಸಂಸ್ಥೆ ಸಮರಿಟನ್ ಪರ್ಸ್ ಈಗೊಂದು ಆಸ್ಪತ್ರೆಯನ್ನು ತೆರೆದಿದೆ. ಲೆಸ್​ ಕೇಯ್ಸ್​​ನಲ್ಲಿ ಅಭಯಾರಣ್ಯಗಳೂ ಭೂಕಂಪದಿಂದ ಹಾನಿಗೊಳಗಾಗಿವೆ.

2010ರಲ್ಲಿ ಹೈಟಿ ದೇಶದಲ್ಲಿ ಭಯಂಕರ ಪ್ರಮಾಣದ ಭೂಕಂಪ ಆಗಿತ್ತು. ಆಗ 10 ಸಾವಿರಗಳಷ್ಟು ಮನೆಗಳು, ಕಟ್ಟಡಗಳು ಕುಸಿದುಬಿದ್ದಿದ್ದವು. ಇನ್ನೂ ಅಭಿವೃದ್ಧಿಶೀಲ ದೇಶವಾಗಿರುವ ಹೈಟಿ ಇನ್ನೇನು ಚೇತರಿಸಿಕೊಳ್ಳುತ್ತಿದೆ ಎನ್ನುವಷ್ಟರಲ್ಲಿ ಈ ಬಾರಿ ಮತ್ತೆ ಪ್ರಬಲ ಭೂಕಂಪಕ್ಕೆ ತತ್ತರಿಸಿದೆ. ಹೈಟಿಯಲ್ಲಿ ಸಮಸ್ಯೆಗಳು ಒಂದೆರಡಲ್ಲ. ಅಲ್ಲಿ ಕೊವಿಡ್​ 19 ಪರಿಸ್ಥಿತಿ ಇದೆ..ರಾಜಕೀಯವಾಗಿ ಹಲವು ಜಂಜಾಟಗಳಿವೆ. ಅದರಲ್ಲೂ ಕಳೆದ ತಿಂಗಳು ಹಿಂದಿನ ಅಧ್ಯಕ್ಷ ಜೊವೆನೆಲ್ ಮೊಯಿಸ್ ಹತ್ಯೆಯಾದ ಬಳಿಕ ರಾಜಕೀಯ ಅಸ್ತವ್ಯಸ್ತತೆ ಇನ್ನಷ್ಟು ಹೆಚ್ಚಾಗಿದೆ. ಸದ್ಯ ಪ್ರಧಾನಿ ಏರಿಯಲ್​ ಹೆನ್ರಿ ಹೈಟಿಯಲ್ಲಿ ಒಂದು ತಿಂಗಳ ಕಾಲದ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಇದನ್ನೂ ಓದಿ: ಕಾಬೂಲ್‌ನಿಂದ ಸಿಖ್ಖರ 3 ಪವಿತ್ರ ಗುರು ಗ್ರಂಥ ಸಾಹೀಬ್ ಭಾರತಕ್ಕೆ ತಂದ ಅಫ್ಘಾನಿಸ್ತಾನದ ಸಿಖ್ಖರು

ಆರ್ಡರ್​ ಮಾಡಿ ತರಿಸಿಕೊಂಡ ಡಾಮಿನೋಸ್​ ಪಿಜ್ಜಾದಲ್ಲಿ ಸಿಕ್ಕಿದ್ದು ನಟ್ ಬೋಲ್ಟ್; ಅಪಾಯಕಾರಿ ಎಂದು ಎಚ್ಚರಿಸಿದ ಮಹಿಳೆ!

(Haiti earthquake death toll rises to 2200)

Published On - 12:37 pm, Mon, 23 August 21

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು