AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ಮತ್ತು ವ್ಲಾಡಿಮಿರ್ ಪುಟಿನ್ ಇಬ್ಬರೂ ನೆರೆಯ ಪ್ರಜಾಪ್ರಭುತ್ವಗಳನ್ನು ನಾಶಮಾಡಲು ಬಯಸುತ್ತಾರೆ: ಜೋ ಬೈಡನ್

US President Joe Biden: ಹಮಾಸ್ ಭಯೋತ್ಪಾದನೆ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದಬ್ಬಾಳಿಕೆಯು ವಿಭಿನ್ನ ಬೆದರಿಕೆಗಳನ್ನು ಪ್ರತಿನಿಧಿಸುತ್ತದೆ, ಆದರೆ ಅವರಿಬ್ಬರೂ ನೆರೆಯ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಬಯಸುತ್ತಾರೆ. ಅಂತರರಾಷ್ಟ್ರೀಯ ಆಕ್ರಮಣವು ಮುಂದುವರಿದರೆ, ಸಂಘರ್ಷ ಮತ್ತು ಅವ್ಯವಸ್ಥೆ ಪ್ರಪಂಚದ ಇತರ ಭಾಗಗಳಲ್ಲಿ ಹರಡಬಹುದು ಎಂದ ಜೋ ಬೈಡನ್.

ಹಮಾಸ್ ಮತ್ತು ವ್ಲಾಡಿಮಿರ್ ಪುಟಿನ್ ಇಬ್ಬರೂ ನೆರೆಯ ಪ್ರಜಾಪ್ರಭುತ್ವಗಳನ್ನು ನಾಶಮಾಡಲು ಬಯಸುತ್ತಾರೆ: ಜೋ ಬೈಡನ್
ಜೋ ಬೈಡನ್
ರಶ್ಮಿ ಕಲ್ಲಕಟ್ಟ
|

Updated on:Oct 20, 2023 | 8:59 AM

Share

ವಾಷಿಂಗ್ಟನ್ ಅಕ್ಟೋಬರ್ 20: ಶುಕ್ರವಾರ ಓವಲ್ ಆಫೀಸ್‌ನಿಂದ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ (US President Joe Biden) ಹಮಾಸ್ (Hamas) ಮತ್ತು ರಷ್ಯಾ (Russia) ಎರಡೂ ಪ್ರಜಾಪ್ರಭುತ್ವಗಳನ್ನು “ನಿರ್ಮೂಲನೆ” ಮಾಡಲು ಹೊರಟಿವೆ ಎಂದು ಹೇಳಿದ್ದಾರೆ. ಹಮಾಸ್ ಭಯೋತ್ಪಾದನೆ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್(Vladimir Putin) ಅವರ ದಬ್ಬಾಳಿಕೆಯು ವಿಭಿನ್ನ ಬೆದರಿಕೆಗಳನ್ನು ಪ್ರತಿನಿಧಿಸುತ್ತದೆ, ಆದರೆ ಅವರಿಬ್ಬರೂ ನೆರೆಯ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಬಯಸುತ್ತಾರೆ. ಅಂತರರಾಷ್ಟ್ರೀಯ ಆಕ್ರಮಣವು ಮುಂದುವರಿದರೆ, ಸಂಘರ್ಷ ಮತ್ತು ಅವ್ಯವಸ್ಥೆ ಪ್ರಪಂಚದ ಇತರ ಭಾಗಗಳಲ್ಲಿ ಹರಡಬಹುದು ಎಂದು ಬೈಡನ್ ಹೇಳಿದ್ದಾರೆ.

ಉಕ್ರೇನ್ ಮತ್ತು ಇಸ್ರೇಲ್‌ಗೆ ಸಹಾಯ ಮಾಡಲು ಬೃಹತ್ ಧನಸಹಾಯವನ್ನು ಅನುಮೋದಿಸಲು ಶುಕ್ರವಾರ ಕಾಂಗ್ರೆಸ್ ಅನ್ನು ಕೇಳುವುದಾಗಿ ಯುಎಸ್ ಅಧ್ಯಕ್ಷರು ಹೇಳಿದ್ದು, ಜಾಗತಿಕ ನಾಯಕನಾಗಿ ಯುನೈಟೆಡ್ ಸ್ಟೇಟ್ಸ್‌ನ ಭವಿಷ್ಯಕ್ಕಾಗಿ ಇದು ಹೂಡಿಕೆಯಾಗಿದೆ ಎಂದಿದ್ದಾರೆ.

“ಇದು ಒಂದು ಸ್ಮಾರ್ಟ್ ಹೂಡಿಕೆಯಾಗಿದ್ದು ಅದು ತಲೆಮಾರುಗಳವರೆಗೆ ಅಮೆರಿಕದ ಜನರ ಭದ್ರತೆಗಾಗಿ ಇದರಿಂದ ಲಾಭವಾಗಲಿದೆ. ಅಮೆರಿಕನ್ ನಾಯಕತ್ವವು ಜಗತ್ತನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುತ್ತದೆ. ಅಮೆರಿಕನ್ ಮೈತ್ರಿಗಳು ನಮ್ಮನ್ನು, ಅಮೆರಿಕವನ್ನು ಸುರಕ್ಷಿತವಾಗಿರಿಸುತ್ತವೆ. ಅಮೆರಿಕದ ಮೌಲ್ಯಗಳು ನಮ್ಮನ್ನು ಇತರ ರಾಷ್ಟ್ರಗಳು ಕೆಲಸ ಮಾಡಲು ಬಯಸುವ ಪಾಲುದಾರರನ್ನಾಗಿ ಮಾಡುತ್ತವೆ ಎಂದು ಅಮೆರಿಕ ಅಧ್ಯಕ್ಷರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಟೆಲ್ ಅವಿವ್ ಮತ್ತು ಹಮಾಸ್ ನಡುವಿನ ಯುದ್ಧವು ವಿಶಾಲವಾದ ಪ್ರಾದೇಶಿಕ ಸಂಘರ್ಷಕ್ಕೆ ತಿರುಗದಂತೆ ಮತ್ತು ಪ್ಯಾಲೆಸ್ತೀನಿಯಾದವರಿಗೆ ಮಾನವೀಯ ನೆರವು ವ ಉತ್ತೇಜಿಸುವ ತುರ್ತು ಕಾರ್ಯಾಚರಣೆಯಲ್ಲಿ ಇಸ್ರೇಲ್‌ಗೆ ಭೇಟಿ ನೀಡಿದ ದಿನಗಳ ನಂತರ ಬೈಡೆನ್ ರಾಷ್ಟ್ರವನ್ನುದ್ದೇಶಿಸಿ ಈ ಭಾಷಣ ಮಾಡಿದ್ದಾರೆ.

ಇದನ್ನೂ ಓದಿ: ಚೀನಾ ಶೃಂಗಸಭೆಯಲ್ಲಿ ಪುಟಿನ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ಹೊರನಡೆದ ಯುರೋಪಿಯನ್ ಪ್ರತಿನಿಧಿಗಳು

ತಮ್ಮ ಭಾಷಣದಲ್ಲಿ, ಯುಎಸ್ ಅಧ್ಯಕ್ಷರು ಗಾಜಾದಿಂದ ಒತ್ತೆಯಾಳಾಗಿಸಿಕೊಂಡಿರುವ ಅಮೆರಿಕನ್ನರ ಸುರಕ್ಷತೆಯು ತಮ್ಮ ಆದ್ಯತೆಯಾಗಿದೆ ಎಂದು ಹೇಳಿದರು. “ಅಧ್ಯಕ್ಷನಾಗಿ, ಒತ್ತೆಯಾಳುಗಳಾಗಿರುವ ಅಮೆರಿಕನ್ನರ ಸುರಕ್ಷತೆಗಿಂತ ನನಗೆ ಹೆಚ್ಚಿನ ಆದ್ಯತೆ ಇಲ್ಲ. ಇಸ್ರೇಲ್ ನಲ್ಲಿ ನಾನು ಬಲವಾದ, ದೃಢನಿರ್ಧಾರ, ಚೇತರಿಸಿಕೊಳ್ಳುವ ಮತ್ತು ಕೋಪಗೊಂಡ, ಆಘಾತದಲ್ಲಿ ಮತ್ತು ಗಂಭೀರ ನೋವಿನಲ್ಲಿರುವ ಜನರನ್ನು ನೋಡಿದೆ ಎಂದು ಬೈಡನ್ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Fri, 20 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ