AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು

ಹಮಾಸ್ ಅಕ್ಟೋಬರ್ 7 ರಂದು ಸುಮಾರು 240 ಜನರನ್ನು ಒತ್ತೆಯಾಳಾಗಿರಿಸಿತ್ತು, ಅದರ ಭಯೋತ್ಪಾದಕರು ಇಸ್ರೇಲ್ ನಗರಗಳಿಗೆ ನುಗ್ಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1400 ಜನರನ್ನು ಕೊಂದರು. ಈ ಗುಂಪು ಇಬ್ಬರು ಅಮೆರಿಕನ್ ನಾಗರಿಕರು ಸೇರಿದಂತೆ ನಾಲ್ಕು ನಾಗರಿಕರನ್ನು ಬಿಡುಗಡೆ ಮಾಡಿದೆ. ಇಸ್ರೇಲಿ ಪಡೆಗಳು ಹಮಾಸ್‌ನ ಸೆರೆಯಿಂದ ಒಬ್ಬ ಸೈನಿಕನನ್ನು ರಕ್ಷಿಸಿವೆ.

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು
ವೈಮಾನಿಕ ದಾಳಿImage Credit source: AFP
ರಶ್ಮಿ ಕಲ್ಲಕಟ್ಟ
|

Updated on:Nov 01, 2023 | 4:03 PM

Share

ಗಾಜಾ ನವೆಂಬರ್ 01: ಇಸ್ರೇಲ್ (Israel) ಮಂಗಳವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ (Gaza) ನಗರದ ಸಮೀಪವಿರುವ ನಿರಾಶ್ರಿತರ ಶಿಬಿರದಲ್ಲಿ ಅಪಾರ್ಟ್‌ಮೆಂಟ್ ಕಟ್ಟಡಗಳನ್ನು ನೆಲಸಮವಾಗಿದೆ. ಹಿರಿಯ ಹಮಾಸ್ (hamas) ಸೇನಾ ನಾಯಕನನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಉಗ್ರಗಾಮಿ ಕಮಾಂಡ್ ಸೆಂಟರ್ ಮತ್ತು ಭೂಗತ ಸುರಂಗ ಜಾಲವನ್ನು ನಾಶಪಡಿಸಿದೆ ಎಂದು ಇಸ್ರೇಲ್ ಹೇಳಿದೆ. ಮಂಗಳವಾರ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯು 7 ಒತ್ತೆಯಾಳುಗಳ ಸಾವಿಗೆ ಕಾರಣವಾಯಿತು, ಇದರಲ್ಲಿ ಮೂವರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿರುವವರು ಎಂದು ಹಮಾಸ್‌ನ ಸಶಸ್ತ್ರ ವಿಭಾಗ ಅಲ್-ಕಸ್ಸಾಮ್ ಬ್ರಿಗೇಡ್ಸ್ ಬುಧವಾರ ಹೇಳಿಕೊಂಡಿದೆ.

ಹಮಾಸ್ ಅಕ್ಟೋಬರ್ 7 ರಂದು ಸುಮಾರು 240 ಜನರನ್ನು ಒತ್ತೆಯಾಳಾಗಿರಿಸಿತ್ತು, ಅದರ ಭಯೋತ್ಪಾದಕರು ಇಸ್ರೇಲ್ ನಗರಗಳಿಗೆ ನುಗ್ಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1400 ಜನರನ್ನು ಕೊಂದರು. ಈ ಗುಂಪು ಇಬ್ಬರು ಅಮೆರಿಕನ್ ನಾಗರಿಕರು ಸೇರಿದಂತೆ ನಾಲ್ಕು ನಾಗರಿಕರನ್ನು ಬಿಡುಗಡೆ ಮಾಡಿದೆ. ಇಸ್ರೇಲಿ ಪಡೆಗಳು ಹಮಾಸ್‌ನ ಸೆರೆಯಿಂದ ಒಬ್ಬ ಸೈನಿಕನನ್ನು ರಕ್ಷಿಸಿವೆ.

ವೈಮಾನಿಕ ದಾಳಿಯಿಂದ ಹಮಾಸ್ ಕಮಾಂಡರ್ ಅನ್ನು ನಿರ್ಮೂಲನೆ ಮಾಡಿದೆ ಎಂದು ಇಸ್ರೇಲ್ ಬುಧವಾರ ಹೇಳಿಕೊಂಡಿದೆ. ಆದಾಗ್ಯೂ, ಹಮಾಸ್ ತನ್ನ ಯಾವುದೇ ಮಿಲಿಟರಿ ನಾಯಕರು ದಾಳಿಯಲ್ಲಿ ಸಾವಿಗೀಡಾಗಿಲ್ಲ ಎಂದಿದೆ.ಸಿತು. ದಾಳಿಯಲ್ಲಿ 50 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಹೇಳಿದ್ದಾರೆ.

ಏತನ್ಮಧ್ಯೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ, ಗಾಜಾ ಪಟ್ಟಿಯೊಳಗಿನ ನೆಲದ ಹೋರಾಟದಲ್ಲಿ “ನೋವಿನ ನಷ್ಟ” ಹೊರತಾಗಿಯೂ ಹಮಾಸ್ ವಿರುದ್ಧ ದೇಶದ ಯುದ್ಧವು ಮುಂದುವರಿಯುತ್ತದೆ ಎಂದು ಹೇಳಿದರು.

ಜಬಲಿಯಾ ಶಿಬಿರದಲ್ಲಿ ನಡೆದ ದಾಳಿಯ ಸಂಖ್ಯೆ ತಕ್ಷಣವೇ ತಿಳಿದುಬಂದಿಲ್ಲ. ಅಪಘಾತಕ್ಕೀಡಾದ ಹತ್ತಿರದ ಆಸ್ಪತ್ರೆಯ ನಿರ್ದೇಶಕ ಡಾ. ಅಟೆಫ್ ಅಲ್-ಕಹ್ಲೋಟ್, ನೂರಾರು ಜನರು ಗಾಯಗೊಂಡಿದ್ದಾರೆ ಅಥವಾ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದು ನಿಖರವಾದ ಅಂಕಿಅಂಶಗಳನ್ನು ನೀಡಲಿಲ್ಲ.

ಇದನ್ನೂ ಓದಿ: ದೆಹಲಿ: ಗಾಜಾದಲ್ಲಿ ನಡೆಯುತ್ತಿರುವ ನರಮೇಧ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐಎಂ ಧರಣಿ, ಪಿಣರಾಯಿ ವಿಜಯನ್ ಭಾಗಿ

ಉತ್ತರ ಗಾಜಾದ ಪ್ರಮುಖ ಹಮಾಸ್ ಕಮಾಂಡರ್ ಸೇರಿದಂತೆ ಹತ್ತಾರು ಉಗ್ರರು ಹತರಾಗಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಇಸ್ರೇಲ್ ಆಕ್ರಮಣಕಾರಿಯಾಗಿ ದಾಳಿಯನ್ನು ಸಮರ್ಥಿಸಿಕೊಂಡಿತು, ಮಿಲಿಟರಿ ವಕ್ತಾರ ಜೊನಾಥನ್ ಕಾನ್ರಿಕಸ್ವಿಶಾಲವಾದ ಭೂಗತ ಹಮಾಸ್ ಸಂಕೀರ್ಣವನ್ನು ನಾಶಪಡಿಸಿದ ಕಾರಣ ಅಪಾರ್ಟ್ಮೆಂಟ್ ಕಟ್ಟಡಗಳು ಕುಸಿದವು ಎಂದು ಹೇಳಿದ್ದಾರೆ. ಉತ್ತರ ಗಾಜಾದಲ್ಲಿ ನಡೆದ ಹೋರಾಟದಲ್ಲಿ ಇಬ್ಬರು ಸೈನಿಕರು ಸಾವಿಗೀಡಾಗಿದ್ದಾರೆ ಎಂದು ಇಸ್ರೇಲ್ ಹೇಳಿದೆ.

ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಕಟ್ಟಡಗಳು ಮತ್ತು ಭಾಗಶಃ ಕುಸಿದುಬಿದ್ದ ಇತರ ಕಟ್ಟಡಗಳ ನಡುವೆ ಬದುಕುಳಿದವರಿಗಾಗಿ ರಕ್ಷಣಾ ಕಾರ್ಯಕರ್ತರು ಹುಡಕಾಡುತ್ತಿದ್ದಾರೆ.

ನಾಗರಿಕ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಂಡಿರುವ” ಹಮಾಸ್ ಮೂಲಸೌಕರ್ಯಗಳ ಮೇಲೆ ಜಬಾಲಿಯಾದಲ್ಲಿ ವ್ಯಾಪಕವಾದ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Wed, 1 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?