AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ismail Haniyeh Death: ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

Ismail Haniyeh Death: ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ
ಇಸ್ಮಾಯಿಲ್
ನಯನಾ ರಾಜೀವ್
|

Updated on:Jul 31, 2024 | 9:14 AM

Share

ಇರಾನ್​ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್​ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು ದೃಢಪಡಿಸಿವೆ.

ಇಸ್ಮಾಯಿಲ್ ಹನಿಯಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹಮಾಸ್, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಇಸ್ಮಾಯಿಲ್ ಹನಿಯಾ ಅವರ ಸಾವನ್ನು ದೃಢೀಕರಿಸುವ ಹೇಳಿಕೆಯನ್ನು ಹಮಾಸ್ ಸಹ ಬಿಡುಗಡೆ ಮಾಡಿದೆ ಮತ್ತು ಇಸ್ರೇಲ್ ಹತ್ಯೆಯ ಆರೋಪವನ್ನೂ ಮಾಡಿದೆ. ಆದರೆ, ಈ ಬಗ್ಗೆ ಇಸ್ರೇಲ್ ಯಾವುದೇ ಹೇಳಿಕೆ ನೀಡಿಲ್ಲ.

ಮಂಗಳವಾರ ಮುಂಜಾನೆ, ಇಸ್ಮಾಯಿಲ್ ಹನಿಯಾ ಅವರು ಇರಾನ್‌ನ ನೂತನ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಇಸ್ರೇಲಿ ಭದ್ರತಾ ಪಡೆಗಳಿಂದ ಹನಿಯಾ ಅವರ ಮೂವರು ಮಕ್ಕಳು ಕೂಡ ಕೊಲ್ಲಲ್ಪಟ್ಟಿದ್ದರು. ಹನಿಯಾರ ಮೂವರು ಮಕ್ಕಳಾದ ಅಮೀರ್, ಹಜೆಮ್ ಹಾಗೂ ಮೊಹಮ್ಮದ್ ಗಾಜಾದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಹೊರಟಿದ್ದರು ಎಂದು ಇಸ್ರೇಲ್ ಸೇನೆ ಹೇಳಿತ್ತು.

ಮತ್ತಷ್ಟು ಓದಿ: ಗಾಜಾದಲ್ಲಿ ಹಮಾಸ್​ ಸೇನಾ ಕಮಾಂಡರ್​ನ ಗುರಿಯಾಗಿಸಿಕೊಂಡು ಇಸ್ರೇಲ್​ ದಾಳಿ, 90 ಮಂದಿ ಸಾವು

ಹಮಾಸ್ ಹಾಗೂ ಇಸ್ರೇಲ್​ ನಡುವಿನ ಯುದ್ಧವು 2023ರ ಅಕ್ಟೋಬರ್ 3ರಿಂದಲೂ ನಡೆಯುತ್ತಿದೆ. ಹಮಾಸ್ 250 ನಾಗರಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. 150 ಒತ್ತೆಯಾಳುಗಳು ಇನ್ನೂ ಅವರ ವಶದಲ್ಲಿದ್ದಾರೆ. ಇಸ್ರೇಲಿ ದಾಳಿಯಲ್ಲಿ ಇದುವರೆಗೆ 39ಕ್ಕೂ ಹೆಚ್ಚು ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:59 am, Wed, 31 July 24

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ