AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಹ್ಯಾ ಸಿನ್ವಾರ್ ಹತ್ಯೆ ನಿಜ; ಹಮಾಸ್ ಸ್ಪಷ್ಟನೆ

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರ ಹತ್ಯೆಯು ಗಾಜಾದಲ್ಲಿ "ಯುದ್ಧದ ಅಂತ್ಯದ ಆರಂಭ" ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. 2023ರ ಅಕ್ಟೋಬರ್ 7ರಿಂದ ಹಮಾಸ್ ವಶದಲ್ಲಿರುವ ಉಳಿದ 97 ಒತ್ತೆಯಾಳುಗಳನ್ನು ಹಿಂದಿರುಗಿಸುವವರೆಗೆ ಯುದ್ಧವು ಕೊನೆಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯಾಹ್ಯಾ ಸಿನ್ವಾರ್ ಹತ್ಯೆ ನಿಜ; ಹಮಾಸ್ ಸ್ಪಷ್ಟನೆ
ಯಾಹ್ಯಾ ಸಿನ್ವಾರ್
ಸುಷ್ಮಾ ಚಕ್ರೆ
|

Updated on: Oct 18, 2024 | 8:36 PM

Share

ನವದೆಹಲಿ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಇಸ್ರೇಲ್ ಮಿಲಿಟರಿ ಪಡೆ ಹತ್ಯೆ ಮಾಡಿದ್ದು ಸುಳ್ಳು ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಹಮಾಸ್ ಇದೀಗ ತಮ್ಮ ನಾಯಕನ ಹತ್ಯೆಯ ಸುದ್ದಿಯನ್ನು ಒಪ್ಪಿಕೊಂಡಿದೆ. ಅಲ್ಲದೆ, ಗಾಜಾ ಪಟ್ಟಿಯ ಯುದ್ಧ ಅಂತ್ಯವಾಗುವವರೆಗೂ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ.

“ದಕ್ಷಿಣ ಗಾಜಾ ಪಟ್ಟಿಯ ಕಾರ್ಯಾಚರಣೆಯಲ್ಲಿ ಹಮಾಸ್ ಭಯೋತ್ಪಾದಕ ಸಂಘಟನೆಯ ನಾಯಕ ಯಾಹ್ಯಾ ಸಿನ್ವಾರ್‌ನನ್ನು ಹತ್ಯೆ ಮಾಡಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿತ್ತು. ಆದರೆ, ಅವರ ಸಾವನ್ನು ಹಮಾಸ್ ದೃಢಪಡಿಸಿರಲಿಲ್ಲ. ಇದೀಗ ಈ ಬಗ್ಗೆ ಹಮಾಸ್ ಸ್ಪಷ್ಟನೆ ನೀಡಿದ್ದು, ತಮ್ಮ ನಾಯಕನ ಸಾವನ್ನು ಖಚಿತಪಡಿಸಿದೆ. ಅಕ್ಟೋಬರ್ 7, 2023ರಂದು ಇಸ್ರೇಲ್ ಮೇಲಿನ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸಿನ್ವಾರ್ ಎಂದು ಹೇಳಲಾಗಿತ್ತು. ಇದಾದ ನಂತರ ಇಸ್ರೇಲ್ ಮತ್ತು ಗಾಜಾ ನಡುವಿನ ಸಂಘರ್ಷ ಉಲ್ಬಣಗೊಂಡಿತು.

ಇದನ್ನೂ ಓದಿ: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆ; ಇಸ್ರೇಲ್ ಘೋಷಣೆ

ಗಾಜಾದಲ್ಲಿ ಇಸ್ರೇಲಿ ವೈಮಾನಿಕ ದಾಳಿಯ ನಂತರ ಹಮಾಸ್ ತನ್ನ ನಾಯಕ ಯಾಹ್ಯಾ ಸಿನ್ವಾರ್ ಅವರ ಸಾವನ್ನು ದೃಢಪಡಿಸಿದೆ. ಸಿನ್ವಾರ್‌ನ ಸಾವು ಹಮಾಸ್ ಮತ್ತು ಹೆಜ್ಬೊಲ್ಲಾದ ಉನ್ನತ ಕಮಾಂಡರ್‌ಗಳ ವಿರುದ್ಧ ಇಸ್ರೇಲಿ ಆಕ್ರಮಣಗಳ ಸರಣಿಯಲ್ಲಿ ಹೊಸ ಬೆಳವಣಿಗೆಯಾಗಿದೆ. ಇದು ಉಗ್ರಗಾಮಿ ಸಂಘಟನೆಗಳಿಗೆ ದೊಡ್ಡ ಹಾನಿಯನ್ನುಂಟುಮಾಡಿದೆ.

ಹಮಾಸ್ ತನ್ನ ಪ್ರಕಟಣೆಯಲ್ಲಿ ಯಾಹ್ಯಾ ಸಿನ್ವಾರ್ ಯುದ್ಧಭೂಮಿಯಲ್ಲಿ ಇಸ್ರೇಲಿ ಪಡೆಗಳನ್ನು ಎದುರಿಸಿದ “ವೀರ ಹುತಾತ್ಮ” ಎಂದು ಹಮಾಸ್ ಶ್ಲಾಘಿಸಿದೆ. ಕದನ ವಿರಾಮ ಮತ್ತು ಗಾಜಾದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವವರೆಗೆ ಸಂಘರ್ಷದ ಸಮಯದಲ್ಲಿ ಇಸ್ರೇಲ್‌ನಿಂದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ ಎಂದು ಒತ್ತಿಹೇಳಿದೆ.

ಇದನ್ನೂ ಓದಿ: ಲೆಬನಾನ್‌: ಹಿಬ್ಜುಲ್ಲಾ ವಿರುದ್ಧದ ಯುದ್ಧದಲ್ಲಿ 8 ಇಸ್ರೇಲಿ ಸೈನಿಕರು ಸಾವು

ನಿನ್ನೆಯಷ್ಟೇ ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಸಿನ್ವಾರ್ ಹತ್ಯೆಯನ್ನು ದೃಢಪಡಿಸಿದರು ಮತ್ತು ಹಮಾಸ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯು ಮುಗಿದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಇಸ್ರೇಲಿ ಅಧಿಕಾರಿಗಳು ಮತ್ತು ಗಾಜಾ ನಿವಾಸಿಗಳ ನಡುವೆ ಸಂಘರ್ಷ ಉಲ್ಬಣಗೊಳ್ಳುವ ಸಾಧ್ಯತೆ ಹುಟ್ಟುಹಾಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ