AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel-Hamas Conflict: ಮತ್ತಿಬ್ಬರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಇಸ್ರೇಲ್(Israel) ಮತ್ತು ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್(Hamas) ನಡುವೆ ನಡೆಯುತ್ತಿರುವ ಯುದ್ಧ ತೀವ್ರಗೊಂಡಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಇದುವರೆಗೆ 5,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಅದೇ ಸಮಯದಲ್ಲಿ, ಇಸ್ರೇಲಿ ಸರ್ಕಾರವು ಈ ಯುದ್ಧದ ಅಂತ್ಯದಲ್ಲಿ, ಗಾಜಾ ಪಟ್ಟಿಯಲ್ಲಿ ಹಮಾಸ್ ಆಳ್ವಿಕೆ ಇರುವುದಿಲ್ಲ ಎಂದು ಹೇಳಿದೆ.

Israel-Hamas Conflict: ಮತ್ತಿಬ್ಬರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ಒತ್ತೆಯಾಳುಗಳ ಬಿಡುಗಡೆ
ನಯನಾ ರಾಜೀವ್
|

Updated on:Oct 24, 2023 | 8:39 AM

Share

ಇಸ್ರೇಲ್(Israel) ಮತ್ತು ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್(Hamas) ನಡುವೆ ನಡೆಯುತ್ತಿರುವ ಯುದ್ಧ ತೀವ್ರಗೊಂಡಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಇದುವರೆಗೆ 5,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಅದೇ ಸಮಯದಲ್ಲಿ, ಇಸ್ರೇಲಿ ಸರ್ಕಾರವು ಈ ಯುದ್ಧದ ಅಂತ್ಯದಲ್ಲಿ, ಗಾಜಾ ಪಟ್ಟಿಯಲ್ಲಿ ಹಮಾಸ್ ಆಳ್ವಿಕೆ ಇರುವುದಿಲ್ಲ ಎಂದು ಹೇಳಿದೆ.

ಅಕ್ಟೋಬರ್ 7 ರ ದಾಳಿಯ ಸಮಯದಲ್ಲಿ ಇಸ್ರೇಲ್‌ನಿಂದ ಗಾಜಾ ಪಟ್ಟಿಗೆ ಕರೆತಂದ ಇನ್ನೂ ಇಬ್ಬರು ಮಹಿಳಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ ಎಂದು ಹಮಾಸ್ ಸೋಮವಾರ ಹೇಳಿದೆ. ಕತಾರ್ ಮತ್ತು ಈಜಿಪ್ಟ್‌ನ ಮಧ್ಯಸ್ಥಿಕೆಯ ನಂತರ ಮಾನವೀಯ ಕಾರಣಗಳಿಗಾಗಿ ಇಬ್ಬರನ್ನೂ ಬಿಡುಗಡೆ ಮಾಡಲಾಗಿದೆ ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ. ಶನಿವಾರವಷ್ಟೇ ಅಮೆರಿಕದ ಇಬ್ಬರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿತ್ತು. ಬಂಡುಕೋರರು 200ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ.

ಮಹಿಳೆಯರನ್ನು ಗಾಜಾ ಮತ್ತು ಈಜಿಪ್ಟ್ ನಡುವಿನ ರಫಾ ಗಡಿಗೆ ಕರೆದೊಯ್ಯಲಾಯಿತು ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೋಮವಾರ ಯುದ್ಧ ಪೀಡಿತ ಗಾಜಾ ಪಟ್ಟಿಯಲ್ಲಿರುವ ನಾಗರಿಕರಿಗೆ ಮಾನವೀಯ ನೆರವಿಗಾಗಿ 20 ಮಿಲಿಯನ್ ಪೌಂಡ್ ಘೋಷಿಸಿದ್ದಾರೆ.

ಮತ್ತಷ್ಟು ಓದಿ: ಇಸ್ರೇಲ್​ ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್​ನ ಹಿರಿಯ ನಾಯಕ ಸಾವು

ಇಸ್ರೇಲಿ ದಾಳಿಯಿಂದಾಗಿ ಪ್ಯಾಲೆಸ್ತೀನ್ ಎನ್‌ಕ್ಲೇವ್‌ನಲ್ಲಿರುವ ತಮ್ಮ ಇನ್‌ಕ್ಯುಬೇಟರ್‌ಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡರೆ ನವಜಾತ ತೀವ್ರ ನಿಗಾ ಘಟಕದಲ್ಲಿರುವ ಅನೇಕ ಶಿಶುಗಳು ನಿಮಿಷಗಳಲ್ಲಿ ಸಾಯುತ್ತವೆ ಎಂದು ಗಾಜಾದ ನವಜಾತ ತೀವ್ರ ನಿಗಾ ಘಟಕದ ವೈದ್ಯರು ಎಚ್ಚರಿಸಿದ್ದಾರೆ.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾ ಮೇಲೆ ದಾಳಿ ನಡೆಸುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:38 am, Tue, 24 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ