AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ನಯನಾ ಎಸ್​ಪಿ
| Updated By: ನಯನಾ ರಾಜೀವ್|

Updated on: Nov 26, 2023 | 8:34 AM

Share

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

ಒತ್ತೆಯಾಳು ಬಿಡುಗಡೆಯು ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿದೆ. ನಾಲ್ಕು ದಿನಗಳಲ್ಲಿ 150 ಪ್ಯಾಲೆಸ್ತೀನಿಯನ್ ಕೈದಿಗಳಿಗೆ ಒಟ್ಟು 50 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಬಿಡುಗಡೆಯಾದ 13 ಇಸ್ರೇಲಿಗಳಲ್ಲಿ 6 ಮಹಿಳೆಯರು ಮತ್ತು ಏಳು ಮಕ್ಕಳು ಮತ್ತು ಯುವಕರಿದ್ದಾರೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಕಚೇರಿ ತಿಳಿಸಿದೆ.

ಶುಕ್ರವಾರ ಹಮಾಸ್, ಇಸ್ರೇಲಿ ಜೈಲುಗಳಿಂದ 39 ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಯುವಕರಿಗೆ ಪ್ರತಿಯಾಗಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ 13 ಒತ್ತೆಯಾಳುಗಳ ಮೊದಲ ಬ್ಯಾಚ್​ ಅನ್ನು ಬಿಡುಗಡೆ ಮಾಡಿತು.

ಹಮಾಸ್ ಸಶಸ್ತ್ರ ವಿಭಾಗವು ನಿಗದಿತ ಎರಡನೇ ಸುತ್ತಿನ ಒತ್ತೆಯಾಳುಗಳ ಬಿಡುಗಡೆ ವಿಳಂಬಗೊಳಿಸಿದಾಗ ಒಪ್ಪಂದದ ಹಳಿ ತಪ್ಪಿದ್ದು, ತೀವ್ರ ಕಳವಳ ಉಂಟಾಗಿತ್ತು.

ಮತ್ತಷ್ಟು ಓದಿ: ನಾಲ್ಕು ದಿನಗಳ ಕದನ ವಿರಾಮ; 13 ಇಸ್ರೇಲಿ, 12 ಥಾಯ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾದಲ್ಲಿ ದಾಳಿ ಆರಂಭಿಸಿತ್ತು. ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಅಷ್ಟೇ ಅಲ್ಲದೆ ಯುದ್ಧವನ್ನು ನಾವು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ಇದಾದ ಬಳಿಕ ಕತಾರ್ ಮಧ್ಯಸ್ಥಿಕೆಯಲ್ಲಿ 4 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ನೀಡಿತ್ತು. ಅದರ ಭಾಗವಾಗಿ ಇದೀಗ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ