AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ನಯನಾ ಎಸ್​ಪಿ
| Edited By: |

Updated on: Nov 26, 2023 | 8:34 AM

Share

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

ಒತ್ತೆಯಾಳು ಬಿಡುಗಡೆಯು ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿದೆ. ನಾಲ್ಕು ದಿನಗಳಲ್ಲಿ 150 ಪ್ಯಾಲೆಸ್ತೀನಿಯನ್ ಕೈದಿಗಳಿಗೆ ಒಟ್ಟು 50 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಬಿಡುಗಡೆಯಾದ 13 ಇಸ್ರೇಲಿಗಳಲ್ಲಿ 6 ಮಹಿಳೆಯರು ಮತ್ತು ಏಳು ಮಕ್ಕಳು ಮತ್ತು ಯುವಕರಿದ್ದಾರೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಕಚೇರಿ ತಿಳಿಸಿದೆ.

ಶುಕ್ರವಾರ ಹಮಾಸ್, ಇಸ್ರೇಲಿ ಜೈಲುಗಳಿಂದ 39 ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಯುವಕರಿಗೆ ಪ್ರತಿಯಾಗಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ 13 ಒತ್ತೆಯಾಳುಗಳ ಮೊದಲ ಬ್ಯಾಚ್​ ಅನ್ನು ಬಿಡುಗಡೆ ಮಾಡಿತು.

ಹಮಾಸ್ ಸಶಸ್ತ್ರ ವಿಭಾಗವು ನಿಗದಿತ ಎರಡನೇ ಸುತ್ತಿನ ಒತ್ತೆಯಾಳುಗಳ ಬಿಡುಗಡೆ ವಿಳಂಬಗೊಳಿಸಿದಾಗ ಒಪ್ಪಂದದ ಹಳಿ ತಪ್ಪಿದ್ದು, ತೀವ್ರ ಕಳವಳ ಉಂಟಾಗಿತ್ತು.

ಮತ್ತಷ್ಟು ಓದಿ: ನಾಲ್ಕು ದಿನಗಳ ಕದನ ವಿರಾಮ; 13 ಇಸ್ರೇಲಿ, 12 ಥಾಯ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾದಲ್ಲಿ ದಾಳಿ ಆರಂಭಿಸಿತ್ತು. ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಅಷ್ಟೇ ಅಲ್ಲದೆ ಯುದ್ಧವನ್ನು ನಾವು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ಇದಾದ ಬಳಿಕ ಕತಾರ್ ಮಧ್ಯಸ್ಥಿಕೆಯಲ್ಲಿ 4 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ನೀಡಿತ್ತು. ಅದರ ಭಾಗವಾಗಿ ಇದೀಗ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ