AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
Follow us
ನಯನಾ ಎಸ್​ಪಿ
| Updated By: ನಯನಾ ರಾಜೀವ್

Updated on: Nov 26, 2023 | 8:34 AM

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

ಒತ್ತೆಯಾಳು ಬಿಡುಗಡೆಯು ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿದೆ. ನಾಲ್ಕು ದಿನಗಳಲ್ಲಿ 150 ಪ್ಯಾಲೆಸ್ತೀನಿಯನ್ ಕೈದಿಗಳಿಗೆ ಒಟ್ಟು 50 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಬಿಡುಗಡೆಯಾದ 13 ಇಸ್ರೇಲಿಗಳಲ್ಲಿ 6 ಮಹಿಳೆಯರು ಮತ್ತು ಏಳು ಮಕ್ಕಳು ಮತ್ತು ಯುವಕರಿದ್ದಾರೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಕಚೇರಿ ತಿಳಿಸಿದೆ.

ಶುಕ್ರವಾರ ಹಮಾಸ್, ಇಸ್ರೇಲಿ ಜೈಲುಗಳಿಂದ 39 ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಯುವಕರಿಗೆ ಪ್ರತಿಯಾಗಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ 13 ಒತ್ತೆಯಾಳುಗಳ ಮೊದಲ ಬ್ಯಾಚ್​ ಅನ್ನು ಬಿಡುಗಡೆ ಮಾಡಿತು.

ಹಮಾಸ್ ಸಶಸ್ತ್ರ ವಿಭಾಗವು ನಿಗದಿತ ಎರಡನೇ ಸುತ್ತಿನ ಒತ್ತೆಯಾಳುಗಳ ಬಿಡುಗಡೆ ವಿಳಂಬಗೊಳಿಸಿದಾಗ ಒಪ್ಪಂದದ ಹಳಿ ತಪ್ಪಿದ್ದು, ತೀವ್ರ ಕಳವಳ ಉಂಟಾಗಿತ್ತು.

ಮತ್ತಷ್ಟು ಓದಿ: ನಾಲ್ಕು ದಿನಗಳ ಕದನ ವಿರಾಮ; 13 ಇಸ್ರೇಲಿ, 12 ಥಾಯ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾದಲ್ಲಿ ದಾಳಿ ಆರಂಭಿಸಿತ್ತು. ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಅಷ್ಟೇ ಅಲ್ಲದೆ ಯುದ್ಧವನ್ನು ನಾವು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ಇದಾದ ಬಳಿಕ ಕತಾರ್ ಮಧ್ಯಸ್ಥಿಕೆಯಲ್ಲಿ 4 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ನೀಡಿತ್ತು. ಅದರ ಭಾಗವಾಗಿ ಇದೀಗ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ