Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

Israel Hamas Conflict: ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
Follow us
| Updated By: ನಯನಾ ರಾಜೀವ್

Updated on: Nov 26, 2023 | 8:34 AM

ಹಮಾಸ್(Hamas) ಇಂದು 17 ಒತ್ತೆಯಾಳುಗಳ ಎರಡನೇ ಗುಂಪನ್ನು ಬಿಡುಗಡೆ ಮಾಡಿದೆ. ಇದರಲ್ಲಿ 13 ಇಸ್ರೇಲಿ ಮತ್ತು ನಾಲ್ಕು ಥಾಯ್ ಪ್ರಜೆಗಳು ಸೇರಿದ್ದಾರೆ. ಅವರು ಭಾನುವಾರ ಯಶಸ್ವಿಯಾಗಿ ಇಸ್ರೇಲ್​ಗೆ ಆಗಮಿಸಿದ್ದಾರೆ. ಒಪ್ಪಂದದ ನಿಯಮಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿಕೊಂಡಿದ್ದರಿಂದ ಒತ್ತೆಯಾಳುಗಳ ಬಿಡುಗಡೆ ಹಲವು ಗಂಟೆಗಳ ಕಾಲ ವಿಳಂಬವಾಯಿತು.

ಒತ್ತೆಯಾಳು ಬಿಡುಗಡೆಯು ಕತಾರ್ ಮತ್ತು ಈಜಿಪ್ಟ್​ ಮಧ್ಯಸ್ಥಿಕೆಯ ನಿರ್ಣಾಯಕ ಒಪ್ಪಂದದ ಭಾಗವಾಗಿದೆ. ನಾಲ್ಕು ದಿನಗಳಲ್ಲಿ 150 ಪ್ಯಾಲೆಸ್ತೀನಿಯನ್ ಕೈದಿಗಳಿಗೆ ಒಟ್ಟು 50 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಬಿಡುಗಡೆಯಾದ 13 ಇಸ್ರೇಲಿಗಳಲ್ಲಿ 6 ಮಹಿಳೆಯರು ಮತ್ತು ಏಳು ಮಕ್ಕಳು ಮತ್ತು ಯುವಕರಿದ್ದಾರೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಕಚೇರಿ ತಿಳಿಸಿದೆ.

ಶುಕ್ರವಾರ ಹಮಾಸ್, ಇಸ್ರೇಲಿ ಜೈಲುಗಳಿಂದ 39 ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಯುವಕರಿಗೆ ಪ್ರತಿಯಾಗಿ ಮಕ್ಕಳು ಮತ್ತು ವೃದ್ಧರು ಸೇರಿದಂತೆ 13 ಒತ್ತೆಯಾಳುಗಳ ಮೊದಲ ಬ್ಯಾಚ್​ ಅನ್ನು ಬಿಡುಗಡೆ ಮಾಡಿತು.

ಹಮಾಸ್ ಸಶಸ್ತ್ರ ವಿಭಾಗವು ನಿಗದಿತ ಎರಡನೇ ಸುತ್ತಿನ ಒತ್ತೆಯಾಳುಗಳ ಬಿಡುಗಡೆ ವಿಳಂಬಗೊಳಿಸಿದಾಗ ಒಪ್ಪಂದದ ಹಳಿ ತಪ್ಪಿದ್ದು, ತೀವ್ರ ಕಳವಳ ಉಂಟಾಗಿತ್ತು.

ಮತ್ತಷ್ಟು ಓದಿ: ನಾಲ್ಕು ದಿನಗಳ ಕದನ ವಿರಾಮ; 13 ಇಸ್ರೇಲಿ, 12 ಥಾಯ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾದಲ್ಲಿ ದಾಳಿ ಆರಂಭಿಸಿತ್ತು. ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಅಷ್ಟೇ ಅಲ್ಲದೆ ಯುದ್ಧವನ್ನು ನಾವು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ಇದಾದ ಬಳಿಕ ಕತಾರ್ ಮಧ್ಯಸ್ಥಿಕೆಯಲ್ಲಿ 4 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ ನೀಡಿತ್ತು. ಅದರ ಭಾಗವಾಗಿ ಇದೀಗ ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ.

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು