AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ: ಇಸ್ರೇಲ್​ಗೆ ಹಮಾಸ್ ಎಚ್ಚರಿಕೆ

ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ ಎಂದು ಹಮಾಸ್(Hamas) ಭಯೋತ್ಪಾದನಾ ಸಂಘಟನೆ ಹೇಳಿದೆ. ಇಸ್ರೇಲ್​ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ: ಇಸ್ರೇಲ್​ಗೆ ಹಮಾಸ್ ಎಚ್ಚರಿಕೆ
ಇಸ್ರೇಲ್Image Credit source: Forbes
ನಯನಾ ರಾಜೀವ್
|

Updated on: Oct 17, 2023 | 8:12 AM

Share

ನಮ್ಮನ್ನು ಹೆದರಿಸುವ ಪ್ರಯತ್ನ ಮಾಡಬೇಡಿ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ ಎಂದು ಹಮಾಸ್(Hamas) ಭಯೋತ್ಪಾದನಾ ಸಂಘಟನೆ ಹೇಳಿದೆ. ಇಸ್ರೇಲ್​ ಗಾಜಾ ಪಟ್ಟಿಯ ಮೇಲೆ ವಾಯು, ಸಮುದ್ರ ಹಾಗೂ ನೆಲದ ಮೂಲಕ ಮೂರು ಮಾರ್ಗದಲ್ಲಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಮಾಸ್​ನ ಮಿಲಿಟರಿ ವಕ್ತಾರ ಅಬು ಒಬೇಡೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್​ ಭಯೋತ್ಪಾದಕ ಸಂಘಟನೆ ಹಮಾಸ್ ನಡುವೆ ಆರಂಭವಾದ ರಕ್ತಸಿಕ್ತ ಸಂಘರ್ಷ ಮುಂದುವರೆದಿದೆ. ಎರಡೂ ಕಡೆಯಿಂದ ಸುಮಾರು ನಾಲ್ಕು ಸಾವಿರ ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ ಇರಾನ್ ವಿದೇಶಾಂಗ ಸಚಿವಾಲಯವು ಇಸ್ರೇಲ್​ನ ಗಾಜಾ ಪಟ್ಟಿಯ ಮೇಲಿನ ವಾಯುದಾಳಿಯನ್ನು ನಿಲ್ಲಿಸಿದರೆ, ಒತ್ತೆಯಾಳಾಗಿದ್ದ ಸುಮಾರು 200 ಜನರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧವಾಗಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿದೆ. ಆದರೆ ಇರಾನ್​ನ ಈ ಹೇಳಿಕೆಗೆ ಹಮಾಸ್​ ಯಾವುದೇ ಪ್ರತಕ್ರಿಯೆಯನ್ನು ನೀಡಿಲ್ಲ.

ಯುದ್ಧದ ಸಮಯದಲ್ಲಿ ಒತ್ತೆಯಾಳುಗಳಾಗಿದ್ದ ಎಲ್ಲಾ ಇಸ್ರೇಲಿ ನಾಗರಿಕರನ್ನು ಬಿಡುಗಡೆ ಮಾಡಲು ಹಮಾಸ್ ಸಿದ್ಧತೆ ನಡೆಸುತ್ತಿದೆ ಎಂದು ನಾಸರ್ ಕನಾನಿ ಹೇಳಿದ್ದಾರೆ. ಆದಾಗ್ಯೂ ಸಮಸ್ಯೆ ಏನೆಂದರೆ ಗಾಜಾದ ವಿವಿಧ ಭಾಗಗಳ ಮೇಲೆ ಇಸ್ರೇಲ್ ನಿರಂತರ ದಾಳಿಯನ್ನು ನಿಲ್ಲಿಸಿದರೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಹಮಾಸ್ ಸಿದ್ಧವಾಗಿದೆ.

ಮತ್ತಷ್ಟು ಓದಿ: ಹಮಾಸ್ ಉಗ್ರರು ಇಸ್ರೇಲ್​ನಲ್ಲಿ ಮನೆಗಳಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ವಿಡಿಯೋ ವೈರಲ್

ಅದೇ ಸಮಯದಲ್ಲಿ,ಇರಾನ್​ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ, ಹಮಾಸ್​ ಅನ್ನು ಉಲ್ಲೇಖಿಸಿ ಮಾತನಾಡಿ,ಈ ಯುದ್ಧವನ್ನು ಮುಂದುವರೆಸಲು ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಇಸ್ರೇಲ್​ ಅನ್ನು ಎದುರಿಸಲು ಸಾಕಷ್ಟು ಮಿಲಿಟರಿ ಸಾಮರ್ಥ್ಯವನ್ನು ಹಿಂದಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಗಾಜಾದಲ್ಲಿ ಇಂತಹ ಹಿಂಸಾತ್ಮಕ ಪ್ರವೃತ್ತಿ ಮುಂದುವರೆದರೆ ಇರಾನ್ ಕೂಡ ಯುದ್ಧಕ್ಕೆ ಧುಮುಕುತ್ತದೆ ಎಂದು ಇರಾನ್ ಇಸ್ರೇಲ್​ಗೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್​ ಮೇಲೆ ದಾಳಿ ನಡೆಸಿತ್ತು, ಎರಡೂ ಕಡೆಗಳು ಸೇರಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ