AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ
ಇಸ್ರೇಲ್Image Credit source: The Times Of Israel
ನಯನಾ ರಾಜೀವ್
|

Updated on: Oct 10, 2023 | 7:51 AM

Share

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಕಳೆದ ಮೂರು ದಿನಗಳಿಂದ ಹಮಾಸ್ ಉಗ್ರರು ದಕ್ಷಿಣ ಇಸ್ರೇಲ್ ನಗರಗಳ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ, 5000 ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಹಮಾಸ್ ಉಗ್ರರು 100ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಾವು ಈ ಯುದ್ಧವನ್ನು ಬಯಸಲಿಲ್ಲ. ಇದು ಅತ್ಯಂತ ಕ್ರೂರ ಮತ್ತು ಘೋರ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲ್ಪಟ್ಟಿತು. ಆದರೆ ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಸಂಪೂರ್ಣ ಮುತ್ತಿಗೆಗೆ ಇಸ್ರೇಲ್ ಆದೇಶ: ವಿದ್ಯುತ್, ಆಹಾರ, ನೀರು, ಇಂಧನ ಕಡಿತ

ನೇತನ್ಯಾಹು ಹಮಾಸ್ ಅನ್ನು ಉಗ್ರಗಾಮಿ ಇಸ್ಲಾಮಿಕ್ ಭಯೋತ್ಪಾದಕ ಗುಂಪು ಐಸಿಸ್‌ಗೆ ಹೋಲಿಸಿದ್ದಾರೆ. ಯುಎಸ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುಕೆ ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ