Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ
ಇಸ್ರೇಲ್Image Credit source: The Times Of Israel
Follow us
ನಯನಾ ರಾಜೀವ್
|

Updated on: Oct 10, 2023 | 7:51 AM

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಕಳೆದ ಮೂರು ದಿನಗಳಿಂದ ಹಮಾಸ್ ಉಗ್ರರು ದಕ್ಷಿಣ ಇಸ್ರೇಲ್ ನಗರಗಳ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ, 5000 ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಹಮಾಸ್ ಉಗ್ರರು 100ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಾವು ಈ ಯುದ್ಧವನ್ನು ಬಯಸಲಿಲ್ಲ. ಇದು ಅತ್ಯಂತ ಕ್ರೂರ ಮತ್ತು ಘೋರ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲ್ಪಟ್ಟಿತು. ಆದರೆ ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಸಂಪೂರ್ಣ ಮುತ್ತಿಗೆಗೆ ಇಸ್ರೇಲ್ ಆದೇಶ: ವಿದ್ಯುತ್, ಆಹಾರ, ನೀರು, ಇಂಧನ ಕಡಿತ

ನೇತನ್ಯಾಹು ಹಮಾಸ್ ಅನ್ನು ಉಗ್ರಗಾಮಿ ಇಸ್ಲಾಮಿಕ್ ಭಯೋತ್ಪಾದಕ ಗುಂಪು ಐಸಿಸ್‌ಗೆ ಹೋಲಿಸಿದ್ದಾರೆ. ಯುಎಸ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುಕೆ ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ