AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದ ಅಲ್​ ಶಿಫಾ ಆಸ್ಪತ್ರೆಯಲ್ಲಿ ಸುರಂಗ ಪತ್ತೆ, ಒತ್ತೆಯಾಳುಗಳು ಅಲ್ಲೇ ಇರಬಹುದು: ಇಸ್ರೇಲ್

ಗಾಜಾದ ಅಲ್​ ಶಿಫಾ ಆಸ್ಪತ್ರೆಯಲ್ಲಿ ಹಮಾಸ್​ನ ಸುರಂಗ ಮಾರ್ಗವನ್ನು ಇಸ್ರೇಲ್ ಸೈನಿಕರು ಪತ್ತೆಹಚ್ಚಿದ್ದಾರೆ. ಆ ಸುರಂಗದಲ್ಲಿ ಒತ್ತೆಯಾಳುಗಳನ್ನು ಇರಿಸಿರಬಹುದು ಎಂದು ಅಂದಾಜಿಸಿದೆ, ಜತೆಗೆ ಸಾಕಷ್ಟು ಸಂಖ್ಯೆಯ ಬಾಂಬ್​, ಶಸ್ತ್ರಾಸ್ತ್ರಗಳು ಕೂಡ ಪತ್ತೆಯಾಗಿವೆ. ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾದ ಹೊರವಲಯದಲ್ಲಿ ಸುರಂಗ ಪ್ರವೇಶವನ್ನು ಪತ್ತೆ ಮಾಡಿರುವುದಾಗಿ ಇಸ್ರೇಲಿ ಮಿಲಿಟರಿ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಗಾಜಾದ ಅಲ್​ ಶಿಫಾ ಆಸ್ಪತ್ರೆಯಲ್ಲಿ ಸುರಂಗ ಪತ್ತೆ, ಒತ್ತೆಯಾಳುಗಳು ಅಲ್ಲೇ ಇರಬಹುದು: ಇಸ್ರೇಲ್
ಆಸ್ಪತ್ರೆ, ಶಸ್ತ್ರಾಸ್ತ್ರಗಳುImage Credit source: NDTV
ನಯನಾ ರಾಜೀವ್
|

Updated on: Nov 17, 2023 | 10:21 AM

Share

ಗಾಜಾ(Gaza)ದ ಅಲ್​ ಶಿಫಾ ಆಸ್ಪತ್ರೆಯಲ್ಲಿ ಹಮಾಸ್(Hamas)​ನ ಸುರಂಗ ಮಾರ್ಗವನ್ನು ಇಸ್ರೇಲ್ ಸೈನಿಕರು ಪತ್ತೆಹಚ್ಚಿದ್ದಾರೆ. ಆ ಸುರಂಗದಲ್ಲಿ ಒತ್ತೆಯಾಳುಗಳನ್ನು ಇರಿಸಿರಬಹುದು ಎಂದು ಅಂದಾಜಿಸಿದೆ, ಜತೆಗೆ ಸಾಕಷ್ಟು ಸಂಖ್ಯೆಯ ಬಾಂಬ್​, ಶಸ್ತ್ರಾಸ್ತ್ರಗಳು ಕೂಡ ಪತ್ತೆಯಾಗಿವೆ. ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್ ಶಿಫಾದ ಹೊರವಲಯದಲ್ಲಿ ಸುರಂಗ ಪ್ರವೇಶವನ್ನು ಪತ್ತೆ ಮಾಡಿರುವುದಾಗಿ ಇಸ್ರೇಲಿ ಮಿಲಿಟರಿ ವೀಡಿಯೊವನ್ನು ಬಿಡುಗಡೆ ಮಾಡಿದೆ.

ಮಿಲಿಟರಿ ಉದ್ದೇಶಗಳಿಗಾಗಿ ಹಮಾಸ್ ಉಗ್ರರು ಈ ಅಲ್​ ಶಿಫಾ ಆಸ್ಪತ್ರೆಯನ್ನು ಬಳಕೆ ಮಾಡುತ್ತಿದ್ದರು. ಹಮಾಸ್ ಹೋರಾಟಗಾರರು ಶಿಫಾ ಆಸ್ಪತ್ರೆಯೊಳಗೆ ಅಡಗಿಕೊಂಡು ಅಲ್ಲಿನ ರೋಗಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಇಸ್ರೇಲ್ ಶಂಕಿಸಿದೆ.

ಇದರೊಂದಿಗೆ ಹಮಾಸ್ ಆಸ್ಪತ್ರೆಯನ್ನು ಕಮಾಂಡ್ ಸೆಂಟರ್ ಆಗಿ ಪರಿವರ್ತಿಸಿದೆ ಮತ್ತು ತನ್ನ ಭಯೋತ್ಪಾದಕರನ್ನು ರಕ್ಷಿಸಲು ರೋಗಿಗಳು, ಸಿಬ್ಬಂದಿ ಮತ್ತು ನಾಗರಿಕರನ್ನು ಬಳಸುತ್ತಿದೆ ಎಂದು ಇಸ್ರೇಲ್ ಹೇಳುತ್ತದೆ.

ಹಾಗೆಯೇ ಒತ್ತೆಯಾಳುಗಳನ್ನು ಅದೇ ಆಸ್ಪತ್ರೆಯಲ್ಲೇ ಇರಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅಕ್ಟೋಬರ್ 7 ರಂದು ಹಮಾಶ್ ಉಗ್ರರು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿದ್ದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಗಾಜಾ ಪ್ರದೇಶವನ್ನು ಖಾಲಿ ಮಾಡಲು ಇಸ್ರೇಲ್​ ಕೊಟ್ಟಿದ್ದ ಗಡುವು ಮುಗಿಯುತ್ತಿದ್ದಂತೆ 10 ಲಕ್ಷ ಮಂದಿ ಪಲಾಯನ

ಅದಕ್ಕೆ ಪ್ರತಿಯಾಗಿ ಇಸ್ರೇಲ್ ಹಮಾಸ್​ನನ್ನು ಗುರಿಯಾಗಿಸಿಕೊಂಡು ಗಾಜಾ ಮೇಲೆ ದಾಳಿ ನಡೆಸುತ್ತದೆ. ಈ ದಾಳಿಗಳಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ದಾಳಿ ಆರಂಭಿಸುವುದಕ್ಕೂ ಮುನ್ನ ಅಲ್ಲಿನ ಜನತೆಗೆ ಗಾಜಾ ಬಿಟ್ಟು ಹೊರ ನಡೆಯುವಂತೆ ಇಸ್ರೇಲ್ ಸೂಚಿಸಿತ್ತು, ಹೇಳಿದ ಮೇಲೆಯೂ ಗಾಜಾ ಬಿಟ್ಟು ಹೋಗದವರನ್ನು ನಾವು ಭಯೋತ್ಪಾದಕರು ಎಂದು ಪರಿಗಣಿಸಿ, ದಾಳಿ ಮುಂದುವರೆಸುತ್ತೇವೆ ಎಂದು ಇಸ್ರೇಲ್ ಹೇಳಿತ್ತು.

ಯುದ್ಧವನ್ನು ನಾವು ಪ್ರಾರಂಭಿಸಿಲ್ಲ, ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ, ಹಮಾಸ್​ನನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವ ಮಾತಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!