AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ

ಗಾಜಾ ಪಟ್ಟಿಯನ್ನು 16 ವರ್ಷಗಳಿಂದ ಆಳ್ವಿಕೆ ನಡೆಸಿದೆ. ಆದರೆ ಇದೀಗ ಇಸ್ರೇಲ್​​ ವಶವಾಗಿದೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹೇಳಿದ್ದಾರೆ. ಹಮಾಸ್​​ ಗಾಜಾ ಪಟ್ಟಿ ಅಧಿಕಾರಿವನ್ನು ಕಳೆದುಕೊಂಡಿದೆ. ಉಗ್ರರರು ದಕ್ಷಿಣದ ಕಡೆ ಪಲಾಯವಾಗುತ್ತಿದ್ದಾರೆ. ನಾಗರಿಕರು ಹಮಾಸ್​​​​ ನೆಲೆಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ವಿಡಿಯೋವೊಂದು ಬಿಡುಗಡೆ ಮಾಡಿದ್ದಾರೆ.

ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ
ಸಾಂದರ್ಭಿಕ ಚಿತ್ರ (ಟಿವಿ9 ಕನ್ನಡ ಫೋಟೋ)
ಅಕ್ಷಯ್​ ಪಲ್ಲಮಜಲು​​
|

Updated on: Nov 14, 2023 | 1:03 PM

Share

ಗಾಜಾ ಪಟ್ಟಿಯನ್ನು(Gaza Strip) 16 ವರ್ಷಗಳಿಂದ ಆಳ್ವಿಕೆ ನಡೆಸಿದೆ. ಆದರೆ ಇದೀಗ ಇಸ್ರೇಲ್​​ ವಶವಾಗಿದೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹೇಳಿದ್ದಾರೆ. ಹಮಾಸ್​​ ಗಾಜಾ ಪಟ್ಟಿ ಅಧಿಕಾರಿವನ್ನು ಕಳೆದುಕೊಂಡಿದೆ. ಉಗ್ರರರು ದಕ್ಷಿಣದ ಕಡೆ ಪಲಾಯವಾಗುತ್ತಿದ್ದಾರೆ. ನಾಗರಿಕರು ಹಮಾಸ್​​​​ ನೆಲೆಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ವಿಡಿಯೋವೊಂದು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಈ ವಿಡಿಯೋವನ್ನು ಪ್ರಕಟ ಮಾಡಲಾಗಿದೆ. ಅಲ್ಲಿನ ಜನರಿಗೆ ಹಮಾಸ್​​​ ಸರ್ಕಾರದ ಬಗ್ಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್​ 6ರಂದು ಹಮಾಸ್​​​ ಇಸ್ರೇಲ್​​​ ಮೇಲೆ ದಾಳಿ ಮಾಡಿತ್ತು. ಈ ದಾಳಿಯಿಂದ 1,200 ಇಸ್ರೇಲ್​​ ನಾಗರಿಕರು ಸಾವನ್ನಪ್ಪಿದರು. ಜತೆಗೆ ಇಸ್ರೇಲ್​​​ ಸೇರಿ ಬೇರೆ ಬೇರೆ ದೇಶದ ನಾಗರಿಕರನ್ನು ಒತ್ತೆಯಾಳುಗಾಗಿ ಇಟ್ಟುಕೊಂಡಿದ್ದರು. ಇದು ಇಸ್ರೇಲ್​​​ನ 75 ವರ್ಷದ ಇತಿಹಾಸದಲ್ಲಿ ನಡೆದ ಮಾರಣಾಂತಿಕ ಘಟನೆ ಎಂದು ಯೋವ್ ಗ್ಯಾಲಂಟ್ ಹೇಳಿದ್ದಾರೆ.

ಹಮಾಸ್​​ ಪ್ರಾರಂಭಿಸಿದನ್ನು ಇಸ್ರೇಲ್​​ ಅಂತ್ಯ ಮಾಡಲು ಮುಂದಾಗಿದೆ. ಇಸ್ರೇಲ್​​​ ಹಮಾಸ್​​ಗೆ ಪ್ರತ್ಯುತ್ತರ ನೀಡಿದೆ. 4000 ಕ್ಕೂ ಹೆಚ್ಚು ಹಮಾಸ್​​​​ ಉಸಿರು ನಿಲ್ಲಿಸಿದೆ. ಹಮಾಸ್​​​ ತಾಣಗಳ ಮೇಲೆ ಇಸ್ರೇಲ್​​ ದಾಳಿ ಮಾಡಿ ಧ್ವಂಸ ಮಾಡಿದೆ. ಒತ್ತೆಯಾಳುಗಳನ್ನು ರಕ್ಷಣೆ ಮಾಡಿ ಇಸ್ರೇಲ್​​​ಗೆ ಕರೆದುಕೊಂಡು ಬಂದಿದ್ದಾರೆ. ಇದೀಗ ಹಮಾಸ್​​​ ದೊಡ್ಡ ಬಲವಾಗಿದ್ದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆ ಮೇಲೆ ಇಸ್ರೇಲ್​​ ದಾಳಿ ಮಾಡಿದೆ. ಅಲ್ಲಿರುವ ಒತ್ತೆಯಾಳುಗಳನ್ನು ಕಾಪಾಡುವ ಕೆಲಸ ಮಾಡುತ್ತಿದೆ. ಹಮಾಸ್​​ನ್ನು ಸಂಪೂರ್ಣವಾಗಿ ನಾಶ ಮಾಡುವವರೆಗೆ ದಾಳಿ ಮುಂದುವರಿಯುತ್ತದೆ ಎಂದು ಇಸ್ರೇಲ್​​ ಹೇಳಿದೆ.

ಇನ್ನು ಇಸ್ರೇಲ್​​​​ ಗಾಜಾದಲ್ಲಿರುವ ಹಮಾಸ್​​ ತಾಣಗಳ ಮೇಲೆ ದಾಳಿ ಮಾಡಿತ್ತು. ಇದಕ್ಕೂ ಮುನ್ನ ಗಾಜಾ ಪಟ್ಟಿ ನಾಗರಿಕರನ್ನು ಜಾಗ ಖಾಲಿ ಮಾಡುವಂತೆ ಎಚ್ಚರಿಕೆಯನ್ನು ನೀಡಿತ್ತು. ಇನ್ನು ಅನೇಕರು ಗಾಜಾದಲ್ಲಿರುವ ಅತಿದೊಡ್ಡ ಆಸ್ಪತ್ರೆ ಅಲ್ ಶಿಫಾದಲ್ಲಿ ಆಶ್ರಯ ಪಡೆದರು. ಆದರೆ ಅಲ್ಲಿ ಈಗಾಗಲೇ ಔಷಧಿ, ಆಹಾರ, ವಿದ್ಯುತ್​​ ಇಲ್ಲದೆ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​

ಇನ್ನು ಅನೇಕ ದೇಶಗಳು ಗಾಜಾದಲ್ಲಿ ಕದನ ವಿರಾಮ ಘೋಷಣೆ ಮಾಡುವಂತೆ ಹೇಳಿತ್ತು. ಆದರೆ ಈ ಒತ್ತಡವನ್ನು ಇಸ್ರೇಲ್​​​ ವಿರೋಧಿಸಲೇ ಬಂದಿದೆ. ಒಂದು ವೇಳೆ ಕದನ ವಿರಾಮವನ್ನು ಪರಿಗಣಿಸಬೇಕಾದರೆ ಹಮಾಸ್ ಅಕ್ಟೋಬರ್ 7 ರ ದಾಳಿಯ ಸಮಯದಲ್ಲಿ ವಶಪಡಿಸಿಕೊಂಡ 240 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಿಂದಿರುಗಿಸಬೇಕೆಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಖಡಕ್​​​ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು