AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ

ಗಾಜಾ ಪಟ್ಟಿಯನ್ನು 16 ವರ್ಷಗಳಿಂದ ಆಳ್ವಿಕೆ ನಡೆಸಿದೆ. ಆದರೆ ಇದೀಗ ಇಸ್ರೇಲ್​​ ವಶವಾಗಿದೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹೇಳಿದ್ದಾರೆ. ಹಮಾಸ್​​ ಗಾಜಾ ಪಟ್ಟಿ ಅಧಿಕಾರಿವನ್ನು ಕಳೆದುಕೊಂಡಿದೆ. ಉಗ್ರರರು ದಕ್ಷಿಣದ ಕಡೆ ಪಲಾಯವಾಗುತ್ತಿದ್ದಾರೆ. ನಾಗರಿಕರು ಹಮಾಸ್​​​​ ನೆಲೆಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ವಿಡಿಯೋವೊಂದು ಬಿಡುಗಡೆ ಮಾಡಿದ್ದಾರೆ.

ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ
ಸಾಂದರ್ಭಿಕ ಚಿತ್ರ (ಟಿವಿ9 ಕನ್ನಡ ಫೋಟೋ)
ಅಕ್ಷಯ್​ ಪಲ್ಲಮಜಲು​​
|

Updated on: Nov 14, 2023 | 1:03 PM

Share

ಗಾಜಾ ಪಟ್ಟಿಯನ್ನು(Gaza Strip) 16 ವರ್ಷಗಳಿಂದ ಆಳ್ವಿಕೆ ನಡೆಸಿದೆ. ಆದರೆ ಇದೀಗ ಇಸ್ರೇಲ್​​ ವಶವಾಗಿದೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಹೇಳಿದ್ದಾರೆ. ಹಮಾಸ್​​ ಗಾಜಾ ಪಟ್ಟಿ ಅಧಿಕಾರಿವನ್ನು ಕಳೆದುಕೊಂಡಿದೆ. ಉಗ್ರರರು ದಕ್ಷಿಣದ ಕಡೆ ಪಲಾಯವಾಗುತ್ತಿದ್ದಾರೆ. ನಾಗರಿಕರು ಹಮಾಸ್​​​​ ನೆಲೆಗಳನ್ನು ಲೂಟಿ ಮಾಡುತ್ತಿದ್ದಾರೆ ಎಂದು ವಿಡಿಯೋವೊಂದು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ಈ ವಿಡಿಯೋವನ್ನು ಪ್ರಕಟ ಮಾಡಲಾಗಿದೆ. ಅಲ್ಲಿನ ಜನರಿಗೆ ಹಮಾಸ್​​​ ಸರ್ಕಾರದ ಬಗ್ಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್​ 6ರಂದು ಹಮಾಸ್​​​ ಇಸ್ರೇಲ್​​​ ಮೇಲೆ ದಾಳಿ ಮಾಡಿತ್ತು. ಈ ದಾಳಿಯಿಂದ 1,200 ಇಸ್ರೇಲ್​​ ನಾಗರಿಕರು ಸಾವನ್ನಪ್ಪಿದರು. ಜತೆಗೆ ಇಸ್ರೇಲ್​​​ ಸೇರಿ ಬೇರೆ ಬೇರೆ ದೇಶದ ನಾಗರಿಕರನ್ನು ಒತ್ತೆಯಾಳುಗಾಗಿ ಇಟ್ಟುಕೊಂಡಿದ್ದರು. ಇದು ಇಸ್ರೇಲ್​​​ನ 75 ವರ್ಷದ ಇತಿಹಾಸದಲ್ಲಿ ನಡೆದ ಮಾರಣಾಂತಿಕ ಘಟನೆ ಎಂದು ಯೋವ್ ಗ್ಯಾಲಂಟ್ ಹೇಳಿದ್ದಾರೆ.

ಹಮಾಸ್​​ ಪ್ರಾರಂಭಿಸಿದನ್ನು ಇಸ್ರೇಲ್​​ ಅಂತ್ಯ ಮಾಡಲು ಮುಂದಾಗಿದೆ. ಇಸ್ರೇಲ್​​​ ಹಮಾಸ್​​ಗೆ ಪ್ರತ್ಯುತ್ತರ ನೀಡಿದೆ. 4000 ಕ್ಕೂ ಹೆಚ್ಚು ಹಮಾಸ್​​​​ ಉಸಿರು ನಿಲ್ಲಿಸಿದೆ. ಹಮಾಸ್​​​ ತಾಣಗಳ ಮೇಲೆ ಇಸ್ರೇಲ್​​ ದಾಳಿ ಮಾಡಿ ಧ್ವಂಸ ಮಾಡಿದೆ. ಒತ್ತೆಯಾಳುಗಳನ್ನು ರಕ್ಷಣೆ ಮಾಡಿ ಇಸ್ರೇಲ್​​​ಗೆ ಕರೆದುಕೊಂಡು ಬಂದಿದ್ದಾರೆ. ಇದೀಗ ಹಮಾಸ್​​​ ದೊಡ್ಡ ಬಲವಾಗಿದ್ದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆ ಮೇಲೆ ಇಸ್ರೇಲ್​​ ದಾಳಿ ಮಾಡಿದೆ. ಅಲ್ಲಿರುವ ಒತ್ತೆಯಾಳುಗಳನ್ನು ಕಾಪಾಡುವ ಕೆಲಸ ಮಾಡುತ್ತಿದೆ. ಹಮಾಸ್​​ನ್ನು ಸಂಪೂರ್ಣವಾಗಿ ನಾಶ ಮಾಡುವವರೆಗೆ ದಾಳಿ ಮುಂದುವರಿಯುತ್ತದೆ ಎಂದು ಇಸ್ರೇಲ್​​ ಹೇಳಿದೆ.

ಇನ್ನು ಇಸ್ರೇಲ್​​​​ ಗಾಜಾದಲ್ಲಿರುವ ಹಮಾಸ್​​ ತಾಣಗಳ ಮೇಲೆ ದಾಳಿ ಮಾಡಿತ್ತು. ಇದಕ್ಕೂ ಮುನ್ನ ಗಾಜಾ ಪಟ್ಟಿ ನಾಗರಿಕರನ್ನು ಜಾಗ ಖಾಲಿ ಮಾಡುವಂತೆ ಎಚ್ಚರಿಕೆಯನ್ನು ನೀಡಿತ್ತು. ಇನ್ನು ಅನೇಕರು ಗಾಜಾದಲ್ಲಿರುವ ಅತಿದೊಡ್ಡ ಆಸ್ಪತ್ರೆ ಅಲ್ ಶಿಫಾದಲ್ಲಿ ಆಶ್ರಯ ಪಡೆದರು. ಆದರೆ ಅಲ್ಲಿ ಈಗಾಗಲೇ ಔಷಧಿ, ಆಹಾರ, ವಿದ್ಯುತ್​​ ಇಲ್ಲದೆ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​

ಇನ್ನು ಅನೇಕ ದೇಶಗಳು ಗಾಜಾದಲ್ಲಿ ಕದನ ವಿರಾಮ ಘೋಷಣೆ ಮಾಡುವಂತೆ ಹೇಳಿತ್ತು. ಆದರೆ ಈ ಒತ್ತಡವನ್ನು ಇಸ್ರೇಲ್​​​ ವಿರೋಧಿಸಲೇ ಬಂದಿದೆ. ಒಂದು ವೇಳೆ ಕದನ ವಿರಾಮವನ್ನು ಪರಿಗಣಿಸಬೇಕಾದರೆ ಹಮಾಸ್ ಅಕ್ಟೋಬರ್ 7 ರ ದಾಳಿಯ ಸಮಯದಲ್ಲಿ ವಶಪಡಿಸಿಕೊಂಡ 240 ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ಹಿಂದಿರುಗಿಸಬೇಕೆಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಖಡಕ್​​​ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ