AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳಕ್ಕೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ: ಸಂಬಂಧ ಸುಧಾರಣೆ ಯತ್ನಗಳಿಗೆ ಮರುಚಾಲನೆ

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭಾರತ್ ರಾಜ್ ಪೌಡಿಯಲ್ ಅವರ ಆಹ್ವಾನದ ಮೇರೆಗೆ ಗುರುವಾರ ನೇಪಾಳಕ್ಕೆ ಶ್ರೀಂಗ್ಲಾ ಭೇಟಿ ನೀಡಿದರು.

ನೇಪಾಳಕ್ಕೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ: ಸಂಬಂಧ ಸುಧಾರಣೆ ಯತ್ನಗಳಿಗೆ ಮರುಚಾಲನೆ
ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ
preethi shettigar
| Edited By: |

Updated on:Nov 26, 2020 | 5:20 PM

Share

ಕಠ್ಮಂಡು: ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಸಂಬಂಧ ಸದೃಢವಾಗಿದೆ. ಭಾರತವು ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಉತ್ಸುಕವಾಗಿದೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಹೇಳಿದರು.

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭಾರತ್ ರಾಜ್ ಪೌಡಿಯಲ್ ಅವರ ಆಹ್ವಾನದ ಮೇರೆಗೆ ಗುರುವಾರ ನೇಪಾಳಕ್ಕೆ ಶ್ರೀಂಗ್ಲಾ ಭೇಟಿ ನೀಡಿದರು.

ಎರಡು ದಿನಗಳ ನೇಪಾಳ ಪ್ರವಾಸದಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ಮಾತುಕತೆ ನಡೆಯಲಿದೆ. ನೇಪಾಳಕ್ಕೆ ಶ್ರೀಂಗ್ಲಾ ಅವರ ಚೊಚ್ಚಿಲ ಭೇಟಿಯಿದು. ಅವರಿಗೆ ಆತ್ಮೀಯ ಸ್ವಾಗತ ನೀಡಲಾಗಿದೆ.

ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ನಾನು ಮೊದಲೇ ಇಲ್ಲಿಗೆ ಬರಲು ಇಚ್ಛಿಸಿದ್ದೆ. ಆದರೆ ಕೋವಿಡ್-19ರ ಹಿನ್ನೆಲೆಯಲ್ಲಿ ತಡವಾಯಿತು. ವಿದೇಶಾಂಗ ಕಾರ್ಯದರ್ಶಿಯಾಗಿ ನೇಪಾಳಕ್ಕೆ ಇದು ನನ್ನ ಮೊದಲ ಭೇಟಿ. ಎರಡೂ ದೇಶಗಳ ನಡುವೆ ಉತ್ತಮ ರಾಜತಾಂತ್ರಿಕ ಸಂಬಂಧವಿದೆ. ಈ ಸಂಬಂಧವನ್ನು ನಾವು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎನ್ನುವುದರ ಬಗ್ಗೆ ಚೆಂತನೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

ಶ್ರೀಂಗ್ಲಾ ಅವರ ಮೊದಲ ಸಭೆ ನೇಪಾಳದ ವಿದೇಶಾಂಗ ಸಚಿವಾಲಯದಲ್ಲಿ ನಡೆಯಲಿದೆ. ವಿದೇಶಾಂಗ ಇಲಾಖೆ ಸಚಿವ ಪ್ರದೀಪ್ ಗಯಾವಲಿ ಅವರನ್ನೂ ಶ್ರೀಂಗ್ಲಾ ಭೇಟಿ ಮಾಡಲಿದ್ದಾರೆ. ನಂತರ ಕಠ್ಮಂಡುವಿನಲ್ಲಿ ಗಣ್ಯರೊಂದಿಗೆ ಸಭೆ ನಡೆಸಲಿದ್ದು, ಗುರುವಾರ ಶ್ರೀಂಗ್ಲಾ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಅಧ್ಯಕ್ಷ ವಿದ್ಯಾದೇವಿ ಭಂಡಾರಿ ಅವರನ್ನು ಭೇಟಿ ಮಾಡಲಿದ್ದಾರೆ.

ಕಠ್ಮಂಡುವಿನ ಸೋಲ್ಟಿ ಕ್ರೌನ್ ಪ್ಲಾಜಾ ಹೋಟೆಲ್​ನಲ್ಲಿ ಶುಕ್ರವಾರ ಭಾರತ-ನೇಪಾಳ ಸಂಬಂಧ ಕುರಿತು ಉಪನ್ಯಾಸ ನೀಡಲಿದ್ದಾರೆ. 2015 ರ ಭೂಕಂಪದ ಕೇಂದ್ರಬಿಂದುವಾಗಿರುವ ಗೂರ್ಖಾದಲ್ಲಿ ಭಾರತೀಯ ನೆರವಿನಡಿಯಲ್ಲಿ ನಿರ್ಮಿಸಲಾದ ಮೂರು ಶಾಲೆಗಳನ್ನು ಪರಿಶೀಲಿಸಲಿದ್ದಾರೆ. ನೇಪಾಳದ ಮನಂಗ್ ಜಿಲ್ಲೆಯಲ್ಲಿ ಬೌದ್ಧ ಮಠವನ್ನು ಶ್ರೀಂಗ್ಲಾ ಉದ್ಘಾಟಿಸಲಿದ್ದಾರೆ.

ಮೇ 8 ರಂದು ಉತ್ತರಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಸಂಪರ್ಕಿಸುವ 80 ಕಿ.ಮೀ ಉದ್ದ ಕಾರ್ಯಂತ್ರದ ಪ್ರಮುಖ ರಸ್ತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ನಂತರ ಉಭಯ ದೇಶಗಳ ನಡುವಿನ ಬಾಂಧವ್ಯ ಹದಗೆಟ್ಟಿತ್ತು. ಸದ್ಯ ಉಭಯ ದೇಶಗಳು ಮಾತುಕತೆಗಳ ಮೂಲಕ ಗಡಿ ಗೊಂದಲ ಪರಿಹರಿಸಿಕೊಳ್ಳಲು ಮುಂದಾಗಿವೆ.

Published On - 4:49 pm, Thu, 26 November 20

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ