AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳಕ್ಕೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ: ಸಂಬಂಧ ಸುಧಾರಣೆ ಯತ್ನಗಳಿಗೆ ಮರುಚಾಲನೆ

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭಾರತ್ ರಾಜ್ ಪೌಡಿಯಲ್ ಅವರ ಆಹ್ವಾನದ ಮೇರೆಗೆ ಗುರುವಾರ ನೇಪಾಳಕ್ಕೆ ಶ್ರೀಂಗ್ಲಾ ಭೇಟಿ ನೀಡಿದರು.

ನೇಪಾಳಕ್ಕೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ: ಸಂಬಂಧ ಸುಧಾರಣೆ ಯತ್ನಗಳಿಗೆ ಮರುಚಾಲನೆ
ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ
preethi shettigar
| Updated By: Lakshmi Hegde|

Updated on:Nov 26, 2020 | 5:20 PM

Share

ಕಠ್ಮಂಡು: ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಸಂಬಂಧ ಸದೃಢವಾಗಿದೆ. ಭಾರತವು ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಉತ್ಸುಕವಾಗಿದೆ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಹೇಳಿದರು.

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಭಾರತ್ ರಾಜ್ ಪೌಡಿಯಲ್ ಅವರ ಆಹ್ವಾನದ ಮೇರೆಗೆ ಗುರುವಾರ ನೇಪಾಳಕ್ಕೆ ಶ್ರೀಂಗ್ಲಾ ಭೇಟಿ ನೀಡಿದರು.

ಎರಡು ದಿನಗಳ ನೇಪಾಳ ಪ್ರವಾಸದಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ಮಾತುಕತೆ ನಡೆಯಲಿದೆ. ನೇಪಾಳಕ್ಕೆ ಶ್ರೀಂಗ್ಲಾ ಅವರ ಚೊಚ್ಚಿಲ ಭೇಟಿಯಿದು. ಅವರಿಗೆ ಆತ್ಮೀಯ ಸ್ವಾಗತ ನೀಡಲಾಗಿದೆ.

ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ನಾನು ಮೊದಲೇ ಇಲ್ಲಿಗೆ ಬರಲು ಇಚ್ಛಿಸಿದ್ದೆ. ಆದರೆ ಕೋವಿಡ್-19ರ ಹಿನ್ನೆಲೆಯಲ್ಲಿ ತಡವಾಯಿತು. ವಿದೇಶಾಂಗ ಕಾರ್ಯದರ್ಶಿಯಾಗಿ ನೇಪಾಳಕ್ಕೆ ಇದು ನನ್ನ ಮೊದಲ ಭೇಟಿ. ಎರಡೂ ದೇಶಗಳ ನಡುವೆ ಉತ್ತಮ ರಾಜತಾಂತ್ರಿಕ ಸಂಬಂಧವಿದೆ. ಈ ಸಂಬಂಧವನ್ನು ನಾವು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎನ್ನುವುದರ ಬಗ್ಗೆ ಚೆಂತನೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

ಶ್ರೀಂಗ್ಲಾ ಅವರ ಮೊದಲ ಸಭೆ ನೇಪಾಳದ ವಿದೇಶಾಂಗ ಸಚಿವಾಲಯದಲ್ಲಿ ನಡೆಯಲಿದೆ. ವಿದೇಶಾಂಗ ಇಲಾಖೆ ಸಚಿವ ಪ್ರದೀಪ್ ಗಯಾವಲಿ ಅವರನ್ನೂ ಶ್ರೀಂಗ್ಲಾ ಭೇಟಿ ಮಾಡಲಿದ್ದಾರೆ. ನಂತರ ಕಠ್ಮಂಡುವಿನಲ್ಲಿ ಗಣ್ಯರೊಂದಿಗೆ ಸಭೆ ನಡೆಸಲಿದ್ದು, ಗುರುವಾರ ಶ್ರೀಂಗ್ಲಾ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಮತ್ತು ಅಧ್ಯಕ್ಷ ವಿದ್ಯಾದೇವಿ ಭಂಡಾರಿ ಅವರನ್ನು ಭೇಟಿ ಮಾಡಲಿದ್ದಾರೆ.

ಕಠ್ಮಂಡುವಿನ ಸೋಲ್ಟಿ ಕ್ರೌನ್ ಪ್ಲಾಜಾ ಹೋಟೆಲ್​ನಲ್ಲಿ ಶುಕ್ರವಾರ ಭಾರತ-ನೇಪಾಳ ಸಂಬಂಧ ಕುರಿತು ಉಪನ್ಯಾಸ ನೀಡಲಿದ್ದಾರೆ. 2015 ರ ಭೂಕಂಪದ ಕೇಂದ್ರಬಿಂದುವಾಗಿರುವ ಗೂರ್ಖಾದಲ್ಲಿ ಭಾರತೀಯ ನೆರವಿನಡಿಯಲ್ಲಿ ನಿರ್ಮಿಸಲಾದ ಮೂರು ಶಾಲೆಗಳನ್ನು ಪರಿಶೀಲಿಸಲಿದ್ದಾರೆ. ನೇಪಾಳದ ಮನಂಗ್ ಜಿಲ್ಲೆಯಲ್ಲಿ ಬೌದ್ಧ ಮಠವನ್ನು ಶ್ರೀಂಗ್ಲಾ ಉದ್ಘಾಟಿಸಲಿದ್ದಾರೆ.

ಮೇ 8 ರಂದು ಉತ್ತರಖಂಡದ ಧಾರ್ಚುಲಾದೊಂದಿಗೆ ಲಿಪುಲೆಖ್ ಪಾಸ್ ಸಂಪರ್ಕಿಸುವ 80 ಕಿ.ಮೀ ಉದ್ದ ಕಾರ್ಯಂತ್ರದ ಪ್ರಮುಖ ರಸ್ತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ನಂತರ ಉಭಯ ದೇಶಗಳ ನಡುವಿನ ಬಾಂಧವ್ಯ ಹದಗೆಟ್ಟಿತ್ತು. ಸದ್ಯ ಉಭಯ ದೇಶಗಳು ಮಾತುಕತೆಗಳ ಮೂಲಕ ಗಡಿ ಗೊಂದಲ ಪರಿಹರಿಸಿಕೊಳ್ಳಲು ಮುಂದಾಗಿವೆ.

Published On - 4:49 pm, Thu, 26 November 20

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್