Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ

Hawaii Wildfire : ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ
ಕಾಡ್ಗಿಚ್ಚು Image Credit source: Jagaran
Follow us
ನಯನಾ ರಾಜೀವ್
|

Updated on: Aug 11, 2023 | 9:39 AM

ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಅರಣ್ಯದ ತುಂಬೆಲ್ಲಾ ಹಬ್ಬುತ್ತಿದೆ. ಜನರನ್ನು ಸ್ಥಳಾಂತರಿಸುವ ಸಮಯದಲ್ಲಿ ಬೆಂಕಿಗೆ ಸಿಲುಕಿ ಲಾಹೈನಾ ಪಟ್ಟಣದಲ್ಲಿ ಕನಿಷ್ಠ 53 ಮಂದಿ ಸಾವನ್ನಪ್ಪಿದ್ದಾರೆ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ.

ಕಾಡಿನಲ್ಲಿ ಭೀಕರ ಬೆಂಕಿಯಿಂದಾಗಿ 14000 ಕ್ಕೂ ಹೆಚ್ಚು ಜನರನ್ನು ಮಾಯಿ ದ್ವೀಪದಿಂದ ಸ್ಥಳಾಂತರಿಸಲಾಗಿದೆ. ಲಹೈನಾದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ ಮತ್ತು ಮಾಯಿಯಲ್ಲಿ ಸುಮಾರು 11,000 ಜನರು ಕತ್ತಲೆಯಲ್ಲಿ ವಾಸಿಸುತ್ತಿದ್ದಾರೆ. ಇದಲ್ಲದೇ ಅಲ್ಲಿನ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

1961 ರಲ್ಲಿ ಸುನಾಮಿಯು ಬಿಗ್ ಐಲ್ಯಾಂಡ್‌ನಲ್ಲಿ 61 ಜನರ ಸಾವಿಗೆ ಕಾರಣವಾಗಿತ್ತು, ಇದಿಗ ಅಂಥದ್ದೇ ನೈಸರ್ಗಿಕ ವಿಕೋಪ ಸಂಭವಿಸಿದೆ. ಬಂದರಿನಲ್ಲಿರುವ ಹಡಗುಗಳು ಸುಟ್ಟು ಕರಕಲಾಗಿವೆ, ಇಡೀ ಪಟ್ಟಣದ ತುಂಬೆಲ್ಲಾ ದಟ್ಟ ಹೊಗೆ ಆವರಿಸಿಕೊಂಡಿದೆ.

ಅಂಗಡಿ ಮುಂಗಟ್ಟುಗಳು, ಮನೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲವೂ ನಾಶವಾಗಿ ಹೋಗಿವೆ. ತುಂಬಾ ಬೇಸಿಗೆ ಇತ್ತು, ಚಂಡಮಾರುತದ ಬಲವಾದ ಚಂಡಮಾರುತದ ಗಾಳಿಯಿಂದಾಗಿ ಇಡೀ ಕಾಡಿಗೆ ಬೆಂಕಿ ಹಬ್ಬಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ