AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಾಕ್​ಡೌನ್​ ಆರಂಭವಾದ ಏಪ್ರಿಲ್​ ಸಮಯದಲ್ಲಿ ಬ್ರಿಟನ್​ ವಾಸಿ ಭಾರತೀಯರು ಅತಿ ಹೆಚ್ಚು ಮಾನಸಿಕ ಒತ್ತಡ ಅನುಭವಿಸಿದ್ದಾರೆ. ಅವರಲ್ಲಿ ನಿದ್ರಾಹೀನತೆ ಕಂಡುಬಂದಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 16, 2020 | 6:28 PM

Share

ಬ್ರಿಟನ್​ ದೇಶದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಕೊವಿಡ್​ನಿಂದಾಗಿ ಮಾನಸಿಕ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಬ್ರಿಟನ್​ನ ಆಫೀಸ್ ಫಾರ್ ನ್ಯಾಶನಲ್​ ಸ್ಟ್ಯಾಟಿಸ್ಟಿಕ್ಸ್ (ONS) ಬಿಡುಗಡೆಗೊಳಿಸಿರುವ ಅಂಕಿ-ಅಂಶಗಳಿಂದ ಈ ವಿಷಯ ಬಯಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಾಕ್​ಡೌನ್​ ಆರಂಭವಾದ ಏಪ್ರಿಲ್​ ಸಮಯದಲ್ಲಿ ಬ್ರಿಟನ್​ ವಾಸಿ ಭಾರತೀಯರು ಅತಿ ಹೆಚ್ಚು ಮಾನಸಿಕ ಒತ್ತಡ ಅನುಭವಿಸಿದ್ದಾರೆ. ಅವರಲ್ಲಿ ನಿದ್ರಾಹೀನತೆ ಕಂಡುಬಂದಿದ್ದು ಬ್ರಿಟನ್​ ಪ್ರಜೆಗಳಿಗಿಂತ ಹೆಚ್ಚು ಒತ್ತಡಕ್ಕೆ ಸಿಲುಕಿದವರು ಅಲ್ಲಿನ ಭಾರತೀಯರು ಎಂದು ವರದಿಯಾಗಿದೆ.

ಒತ್ತಡಕ್ಕೆ ಮೂಲ ಕಾರಣ ಆದಾಯ ಮತ್ತು ಹಣಕಾಸು ಉಳಿತಾಯದ ವಿಚಾರ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಾಗೆ ನೋಡಿದರೆ ಲಾಕ್​ಡೌನ್​ ಪೂರ್ವದಲ್ಲಿ ಸಂಬಳ ಕಡಿತವಾದಾಗ ಆ ಸಂದರ್ಭವನ್ನು ಬ್ರಿಟನ್ನರಿಗಿಂತ ಚೆನ್ನಾಗಿ ಭಾರತೀಯರು ನಿಭಾಯಿಸಿದ್ದರು. ಹೆಚ್ಚೂ ಕಡಿಮೆ ಶೇ. 58ರಷ್ಟು ಭಾರತೀಯರು ತಮ್ಮ ಆಸ್ತಿ ಹಾಗೂ ಇತರ ಮೂಲಗಳ ಮೇಲೆ ಅವಲಂಬಿತರಾಗಿ ಕಠಿಣ ಪರಿಸ್ಥಿತಿಯನ್ನು ಸುಲಭವಾಗಿ ಎದುರಿಸಿದ್ದರು.

ಆದರೆ, ಲಾಕ್​ಡೌನ್ ನಂತರ ಭಾರತೀಯರೇ ಅತಿ ಹೆಚ್ಚು ಒತ್ತಡಕ್ಕೆ ಒಳಗಾಗಿದ್ದಾರೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ವಾಯು ಸಮಸ್ಯೆಗಳು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಯೂ ಇದೆ ಎಂದು ವಿಶ್ಲೇಷಿಸಲಾಗಿದೆ.

ಅಂಗೈಯಲ್ಲಿ ಆರೋಗ್ಯ: ಪಾಲಿಸಿ ಪಂಚ ಸೂತ್ರ, ಪಡೆಯಿರಿ ಉತ್ತಮ ಆರೋಗ್ಯ!

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ