AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಾಕ್​ಡೌನ್​ ಆರಂಭವಾದ ಏಪ್ರಿಲ್​ ಸಮಯದಲ್ಲಿ ಬ್ರಿಟನ್​ ವಾಸಿ ಭಾರತೀಯರು ಅತಿ ಹೆಚ್ಚು ಮಾನಸಿಕ ಒತ್ತಡ ಅನುಭವಿಸಿದ್ದಾರೆ. ಅವರಲ್ಲಿ ನಿದ್ರಾಹೀನತೆ ಕಂಡುಬಂದಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 16, 2020 | 6:28 PM

Share

ಬ್ರಿಟನ್​ ದೇಶದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಕೊವಿಡ್​ನಿಂದಾಗಿ ಮಾನಸಿಕ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಬ್ರಿಟನ್​ನ ಆಫೀಸ್ ಫಾರ್ ನ್ಯಾಶನಲ್​ ಸ್ಟ್ಯಾಟಿಸ್ಟಿಕ್ಸ್ (ONS) ಬಿಡುಗಡೆಗೊಳಿಸಿರುವ ಅಂಕಿ-ಅಂಶಗಳಿಂದ ಈ ವಿಷಯ ಬಯಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಲಾಕ್​ಡೌನ್​ ಆರಂಭವಾದ ಏಪ್ರಿಲ್​ ಸಮಯದಲ್ಲಿ ಬ್ರಿಟನ್​ ವಾಸಿ ಭಾರತೀಯರು ಅತಿ ಹೆಚ್ಚು ಮಾನಸಿಕ ಒತ್ತಡ ಅನುಭವಿಸಿದ್ದಾರೆ. ಅವರಲ್ಲಿ ನಿದ್ರಾಹೀನತೆ ಕಂಡುಬಂದಿದ್ದು ಬ್ರಿಟನ್​ ಪ್ರಜೆಗಳಿಗಿಂತ ಹೆಚ್ಚು ಒತ್ತಡಕ್ಕೆ ಸಿಲುಕಿದವರು ಅಲ್ಲಿನ ಭಾರತೀಯರು ಎಂದು ವರದಿಯಾಗಿದೆ.

ಒತ್ತಡಕ್ಕೆ ಮೂಲ ಕಾರಣ ಆದಾಯ ಮತ್ತು ಹಣಕಾಸು ಉಳಿತಾಯದ ವಿಚಾರ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಾಗೆ ನೋಡಿದರೆ ಲಾಕ್​ಡೌನ್​ ಪೂರ್ವದಲ್ಲಿ ಸಂಬಳ ಕಡಿತವಾದಾಗ ಆ ಸಂದರ್ಭವನ್ನು ಬ್ರಿಟನ್ನರಿಗಿಂತ ಚೆನ್ನಾಗಿ ಭಾರತೀಯರು ನಿಭಾಯಿಸಿದ್ದರು. ಹೆಚ್ಚೂ ಕಡಿಮೆ ಶೇ. 58ರಷ್ಟು ಭಾರತೀಯರು ತಮ್ಮ ಆಸ್ತಿ ಹಾಗೂ ಇತರ ಮೂಲಗಳ ಮೇಲೆ ಅವಲಂಬಿತರಾಗಿ ಕಠಿಣ ಪರಿಸ್ಥಿತಿಯನ್ನು ಸುಲಭವಾಗಿ ಎದುರಿಸಿದ್ದರು.

ಆದರೆ, ಲಾಕ್​ಡೌನ್ ನಂತರ ಭಾರತೀಯರೇ ಅತಿ ಹೆಚ್ಚು ಒತ್ತಡಕ್ಕೆ ಒಳಗಾಗಿದ್ದಾರೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ, ವಾಯು ಸಮಸ್ಯೆಗಳು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಯೂ ಇದೆ ಎಂದು ವಿಶ್ಲೇಷಿಸಲಾಗಿದೆ.

ಅಂಗೈಯಲ್ಲಿ ಆರೋಗ್ಯ: ಪಾಲಿಸಿ ಪಂಚ ಸೂತ್ರ, ಪಡೆಯಿರಿ ಉತ್ತಮ ಆರೋಗ್ಯ!

Follow Us
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ