AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಭಾರೀ ಮಳೆ, ಮಕ್ಕಳು ಸೇರಿ 21 ಜನ ಸಾವು

ಡೊಮಿನಿಕನ್ ರಿಪಬ್ಲಿಕ್  (Dominican Republic) ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಭಾರೀ ಮಳೆ, ಮಕ್ಕಳು ಸೇರಿ 21 ಜನ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Nov 20, 2023 | 11:29 AM

Share

ಡೊಮಿನಿಕನ್ ರಿಪಬ್ಲಿಕ್  (Dominican Republic) ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆರಿಬಿಯನ್​​ದಲ್ಲಿ ಅನೇಕ ಮನೆಗಳು ನೆಲಸಮಗೊಂಡಿದ್ದು, ಈ ಬಗ್ಗೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಅವರು ವರದಿಯನ್ನು ತರಿಸಿಕೊಂಡಿದ್ದಾರೆ. ಇಂತಹ ಘಟನೆ ನಮ್ಮ ದೇಶದ ಇತಿಹಾಸದಲ್ಲೇ ಮೊದಲು ಎಂದು ಹೇಳಿದ್ದಾರೆ.

ಇನ್ನು ಹವಾಮಾನ ತಂಬಾ ಹದಗೆಟ್ಟಿದ್ದು, ಇದನ್ನು ನಂಬಲು ಸಾಧ್ಯವಿಲ್ಲ, ಮಳೆಯಿಂದ ಅನೇಕ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಹೇಳಿದ್ದಾರೆ. ಮಳೆ ಮುನ್ನಚ್ಚರಿಕೆ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದ್ದು, ಇನ್ನು ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಳೆಯಿಂದ ಗುಡ್ಡಾಗಾಡು ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು-ಬಂಡೆಗಳು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೆಲವೊಂದು ಕಡೆ ಮನೆ ಗೋಡೆಗಳು ಕುಸಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಎಲ್ಲದ ಬಗ್ಗೆ ತನಿಖೆ ನಡೆಸುವಂತೆ ಡೊಮಿನಿಕನ್ ರಿಪಬ್ಲಿಕ್ ಸಚಿವಾಲಯ ಆದೇಶ ನೀಡಿದೆ.

ಇದನ್ನೂ ಓದಿ: ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಲ್ಲಿ ಖಾಸಗಿ ವಿಮಾನ ಪತನ, 9 ಜನ ದುರ್ಮರಣ

ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ದೇಶಾದ್ಯಂತ ಸುಮಾರು 13,000 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 32 ಪ್ರಾಂತ್ಯಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ಕೆಲವೊಂದು ಪ್ರದೇಶಗಳಲ್ಲಿ ಮಳೆಯಿಂದ ವಿದ್ಯುತ್​​​ ಮತ್ತು ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿದೆ. ಇದರ ಜತೆಗೆ ಶಾಲೆಗಳ ಬಗ್ಗೆ ಹಾಗೂ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:29 am, Mon, 20 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ