AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಭಾರೀ ಮಳೆ, ಮಕ್ಕಳು ಸೇರಿ 21 ಜನ ಸಾವು

ಡೊಮಿನಿಕನ್ ರಿಪಬ್ಲಿಕ್  (Dominican Republic) ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೊಮಿನಿಕನ್ ರಿಪಬ್ಲಿಕ್​​ನಲ್ಲಿ​​​ ಭಾರೀ ಮಳೆ, ಮಕ್ಕಳು ಸೇರಿ 21 ಜನ ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Nov 20, 2023 | 11:29 AM

Share

ಡೊಮಿನಿಕನ್ ರಿಪಬ್ಲಿಕ್  (Dominican Republic) ದೇಶದಲ್ಲಿ ಭಾರೀ ಮಳೆಗೆ ಮಕ್ಕಳು ಸೇರಿ 21 ಜನ ಸಾವನ್ನಪ್ಪಿದ್ದಾರೆ. ಮಳೆಯಿಂದ ಡೊಮಿನಿಕನ್ ರಿಪಬ್ಲಿಕ್​​ ನಗರಗಳು ಮುಳುಗುವ ಹಂತಕ್ಕೆ ಬಂದಿದೆ. ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಥವ್ಯಸ್ಥವಾಗಿದೆ. ಮಳೆಯಿಂದ ನಗರದ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆರಿಬಿಯನ್​​ದಲ್ಲಿ ಅನೇಕ ಮನೆಗಳು ನೆಲಸಮಗೊಂಡಿದ್ದು, ಈ ಬಗ್ಗೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಅವರು ವರದಿಯನ್ನು ತರಿಸಿಕೊಂಡಿದ್ದಾರೆ. ಇಂತಹ ಘಟನೆ ನಮ್ಮ ದೇಶದ ಇತಿಹಾಸದಲ್ಲೇ ಮೊದಲು ಎಂದು ಹೇಳಿದ್ದಾರೆ.

ಇನ್ನು ಹವಾಮಾನ ತಂಬಾ ಹದಗೆಟ್ಟಿದ್ದು, ಇದನ್ನು ನಂಬಲು ಸಾಧ್ಯವಿಲ್ಲ, ಮಳೆಯಿಂದ ಅನೇಕ ಮೂಲಸೌಕರ್ಯಗಳು ಹಾನಿಯಾಗಿದೆ ಎಂದು ಹೇಳಿದ್ದಾರೆ. ಮಳೆ ಮುನ್ನಚ್ಚರಿಕೆ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದ್ದು, ಇನ್ನು ಅನೇಕ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಳೆಯಿಂದ ಗುಡ್ಡಾಗಾಡು ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು-ಬಂಡೆಗಳು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಕೆಲವೊಂದು ಕಡೆ ಮನೆ ಗೋಡೆಗಳು ಕುಸಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಎಲ್ಲದ ಬಗ್ಗೆ ತನಿಖೆ ನಡೆಸುವಂತೆ ಡೊಮಿನಿಕನ್ ರಿಪಬ್ಲಿಕ್ ಸಚಿವಾಲಯ ಆದೇಶ ನೀಡಿದೆ.

ಇದನ್ನೂ ಓದಿ: ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಲ್ಲಿ ಖಾಸಗಿ ವಿಮಾನ ಪತನ, 9 ಜನ ದುರ್ಮರಣ

ಈಗಾಗಲೇ ತುರ್ತು ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ದೇಶಾದ್ಯಂತ ಸುಮಾರು 13,000 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 32 ಪ್ರಾಂತ್ಯಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ಕೆಲವೊಂದು ಪ್ರದೇಶಗಳಲ್ಲಿ ಮಳೆಯಿಂದ ವಿದ್ಯುತ್​​​ ಮತ್ತು ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿದೆ. ಇದರ ಜತೆಗೆ ಶಾಲೆಗಳ ಬಗ್ಗೆ ಹಾಗೂ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧ್ಯಕ್ಷ ಲೂಯಿಸ್ ಅಬಿನಾಡರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:29 am, Mon, 20 November 23

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು