AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ, 15 ಸಾವು, 30 ಜನರಿಗೆ ಗಾಯ

ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 30 ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಪ್ರಾಣಿಗಳು ಕೂಡ ಸಾವನ್ನಪ್ಪಿದೆ ಎಂದು ಹೇಳಿದೆ. ಸುಮಾರು ಹತ್ತು ಸಾವಿರ ಪ್ರಾಣಿಗಳು ಸಾವನ್ನಪ್ಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ, 15 ಸಾವು, 30 ಜನರಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: Mar 02, 2024 | 10:38 AM

Share

ಕಾಬೂಲ್ ಮಾ.2: ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ (Afghanistan) ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 30 ಜನರು ಗಾಯಗೊಂಡಿದ್ದಾರೆ ಎಂದು ವರದಿ ಹೇಳಿದೆ. ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಪ್ರಾಣಿಗಳು ಕೂಡ ಸಾವನ್ನಪ್ಪಿದೆ ಎಂದು ಹೇಳಿದೆ. ಸುಮಾರು ಹತ್ತು ಸಾವಿರ ಪ್ರಾಣಿಗಳು ಸಾವನ್ನಪ್ಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಸಾರ್-ಇ-ಪುಲ್ ನಿವಾಸಿ ಅಬ್ದುಲ್ ಖಾದಿರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಮೂರು ದಿನದಿಂದ ಹಿಮಪಾತ ಹೆಚ್ಚಾಗಿದೆ. ಜಾನುವಾರುಗಳು ಕೂಡ ಸಾವನ್ನಪ್ಪುತ್ತಿದೆ. ಇದರಿಂದ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ. ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಇದರಿಂದ ಯಾವುದೇ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ನೆರವಿನ ತುರ್ತು ಅಗತ್ಯವಿದೆ. ವಿಶೇಷವಾಗಿ ರಸ್ತೆ ತಡೆ ಮತ್ತು ಜಾನುವಾರು, ಹಾಗೂ ಜನರಿಗೆ ಇಲ್ಲಿ ಸಹಾಯ ಮಾಡಬೇಕಿದೆ ಎಂದು ಮತ್ತೊಬ್ಬ ನಿವಾಸಿ ಅಮಾನುಲ್ಲಾ ಹೇಳಿದ್ದಾರೆ. ಈಗಾಗಲೇ ಅಫ್ಘಾನಿಸ್ತಾನವು ವಿಶೇಷವಾಗಿ ಜಾನುವಾರು ಮಾಲೀಕರಿಗೆ ಪರಿಹರಿವನ್ನು ನೀಡಲು ವಿವಿಧ ಸಚಿವಾಲಯಗಳನ್ನು ಒಳಗೊಂಡ ಸಮಿತಿಯ ರಚನೆ ಮಾಡುವಂತೆ ಹೇಳಿದೆ. ಬಾಲ್ಖ್, ಜಾವ್ಜಾನ್, ಬದ್ಘಿಸ್, ಫರಿಯಾಬ್ ಮತ್ತು ಹೆರಾತ್ ಪ್ರಾಂತ್ಯಗಳಲ್ಲಿ ಜಾನುವಾರು ಮಾಲೀಕರ ಸಾಹಯ ಐವತ್ತು ಮಿಲಿಯನ್ ಅಫ್ಘಾನಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಕೃಷಿ, ನೀರಾವರಿ ಮತ್ತು ಜಾನುವಾರು ಸಚಿವಾಲಯದ ತಾಲಿಬಾನ್-ನೇಮಕ ವಕ್ತಾರ ಮಿಸ್ಬಾಹುದ್ದೀನ್ ಮುಸ್ತೀನ್ ಎಲ್ಲಾ ಪ್ರಾಂತ್ಯಗಳಲ್ಲಿ ರಚಿಸಲಾದ ಸಮಿತಿಗಳ ತ್ವರಿತ ಪ್ರತಿಕ್ರಿಯೆಯನ್ನು ಮಾಡಲಿದೆ. ಈ ಸಮಿತಿಗಳು ನಿರ್ಬಂಧಿತ ರಸ್ತೆಗಳನ್ನು ತೆರೆಯಲು, ಸಂಕಷ್ಟಕ್ಕೆ ಒಳಗಾದ ಜನರಿಗೆ ಆಹಾರ ಮತ್ತು ಮೇವನ್ನು ವಿತರಿಸಲು ಹಾಗೂ ಭಾರೀ ಹಿಮಪಾತದಲ್ಲಿ ಸಿಲುಕಿರುವವರನ್ನು ಜನರನ್ನು ರಕ್ಷಿಸುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಢಾಕಾದ ಆರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 43 ಮಂದಿ ಸಾವು, ಹಲವರಿಗೆ ಗಾಯ

ಇದನ್ನು ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿಯ ವಕ್ತಾರ ಎರ್ಫಾನುಲ್ಲಾ ಶರಫ್ಜೋಯ್ ಮಾತನಾಡಿ, ಚಳಿಗಾಲದ ಸೇವಾ ಸಿಬ್ಬಂದಿಗಳು ಈಗಾಗಲೇ ಬದ್ಗಿಸ್, ಘೋರ್, ಫರಾಹ್, ಕಂದಹಾರ್, ಹೆಲ್ಮಂಡ್, ಜಾವ್ಜಾನ್ ಮತ್ತು ನುರಿಸ್ತಾನ್‌ನಂತಹ ಪ್ರಾಂತ್ಯಗಳಲ್ಲಿ ಸಹಾಯವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು