AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Helicopter Missing: ನೇಪಾಳದ ಮೌಂಟ್​ ಎವರೆಸ್ಟ್​ ಬಳಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್​ ಜತೆಗೆ ಐವರ ಶವ ಪತ್ತೆ

ನೇಪಾಳದ ಮೌಂಟ್ ಎವರೆಸ್ಟ್​ ಬಳಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್​ ಜತೆ ಐವರ ಮೃತದೇಹಗಳು ಕೂಡ ಪತ್ತೆಯಾಗಿವೆ. 

Helicopter Missing: ನೇಪಾಳದ ಮೌಂಟ್​ ಎವರೆಸ್ಟ್​ ಬಳಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್​ ಜತೆಗೆ ಐವರ ಶವ ಪತ್ತೆ
ಹೆಲಿಕಾಪ್ಟರ್Image Credit source: Deccan Herald
ನಯನಾ ರಾಜೀವ್
|

Updated on:Jul 11, 2023 | 1:49 PM

Share

ನೇಪಾಳದ ಮೌಂಟ್ ಎವರೆಸ್ಟ್​ ಬಳಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್​ ಜತೆ ಐವರ ಮೃತದೇಹಗಳು ಕೂಡ ಪತ್ತೆಯಾಗಿವೆ.

ನೇಪಾಳದ ಮೌಂಟ್ ಎವರೆಸ್ಟ್​ ಬಳಿ 6 ಜನರಿದ್ದ ಹೆಲಿಕಾಪ್ಟರ್(Helicopter)​ ನಾಪತ್ತೆಯಾಗಿದೆ. ಈ ಕುರಿತು ಅಧಿಕಾರಿ ಜ್ಞಾನೇಂದ್ರ ಭುಲ್ ಮಾಹಿತಿ ಹೆಲಿಕಾಪ್ಟರ್ ಸೋಲುಖುಂಬುವಿನಿಂದ ಕಠ್ಮಂಡುವಿಗೆ ತೆರಳುತ್ತಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಮೌಂಟ್ ಎವರೆಸ್ಟ್​ ಬಳಿ ಸಂಪರ್ಕ ಕಳೆದುಕೊಂಡಿದೆ. ನಾಪ್ತತೆಯಾದ ಹೆಲಿಕಾಪ್ಟರ್​ನಲ್ಲಿ ಐವರು ವಿದೇಶಿ ಪ್ರಜೆಗಳಿದ್ದರು ಎನ್ನಲಾಗುತ್ತಿದೆ. ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜನರಲ್ ಮ್ಯಾನೇಜರ್ ಪ್ರತಾಪ್ ಬಾಬು ತಿವಾರಿ ಮಾತನಾಡಿ, 9ಎನ್​-ಎಎಂವಿ ಹೆಲಿಕಾಪ್ಟರ್​ ಟೇಕ್ ಆಫ್ ಆದ 15 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Amazon Forest: ವಿಮಾನ ಅಪಘಾತ: 40 ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಬದುಕುಳಿದಿದ್ದು ಹೇಗೆ?

ಹೆಲಿಕಾಪ್ಟರ್ ಐವರು ವಿದೇಶಿ ಪ್ರವಾಸಿಗರನ್ನು ಹೊತ್ತು ವಿಶ್ವದ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ಗೆ ವಿಹಾರ ಮಾಡಿ ಮಂಗಳವಾರ ಬೆಳಗ್ಗೆ ರಾಜಧಾನಿ ಕಠ್ಮಂಡುವಿಗೆ ಮರಳುತ್ತಿತ್ತು. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ನ ಹಾರಾಟದ ಮಾರ್ಗವನ್ನು ಬದಲಾಯಿಸಬೇಕಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿ ಸಾಗರ್ ಕಡೆಲ್ ತಿಳಿಸಿದ್ದಾರೆ.

ಹೆಲಿಕಾಪ್ಟರ್ ನಾಪತ್ತೆಯಾಗಿರುವ ಸಮೀಪದ ಪ್ರದೇಶಗಳಲ್ಲಿ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಾರ್ಚ್‌ನಲ್ಲಿ ನೇಪಾಳದ ಸಂಖುವಾಸಭಾದಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಒಬ್ಬರು ಸಾವನ್ನಪ್ಪಿದರು ಮತ್ತು ನಾಲ್ವರು ಗಾಯಗೊಂಡಿದ್ದರು.

ಜನವರಿ 15 ರಂದು, ನೇಪಾಳದ ಪೋಖರಾ ಡೊಮೆಸ್ಟಿಕ್ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಮಾಡುವಾಗ ಯೇತಿ ಏರ್‌ಲೈನ್ಸ್‌ನ ವಿಮಾನವೊಂದು ಪತನಗೊಂಡಿತು, ಅದರಲ್ಲಿದ್ದ ಎಲ್ಲಾ 72 ಜನರು ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:43 pm, Tue, 11 July 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು