AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂಲ ಚೀನಾ ಅಲ್ಲ ಎಂಬ ವಾದವನ್ನು ಒಪ್ಪುವುದು ಕಷ್ಟ ಕಷ್ಟ ಎಂದ WHO!

2019 ಡಿಸೆಂಬರ್​ನಲ್ಲಿ ಚೀನಾದ ವುಹಾನ್ ನಗರದಲ್ಲಿ ಮೊತ್ತ ಮೊದಲ ಕೊರೊನಾ ಪ್ರಕರಣ ಕಂಡುಬಂದಿತ್ತು. ಆದರೆ ಈಗ ಚೀನಾ, ತನಗಿಂತ ಮೊದಲು ಇತರೆ ದೇಶಗಳಲ್ಲಿ ಕೊರೊನಾ ವೈರಾಣು ಅಸ್ತಿತ್ವದಲ್ಲಿ ಇತ್ತು ಎಂಬ ಹೇಳಿಕೆ ನೀಡಿದೆ.

ಕೊರೊನಾ ಮೂಲ ಚೀನಾ ಅಲ್ಲ ಎಂಬ ವಾದವನ್ನು ಒಪ್ಪುವುದು ಕಷ್ಟ ಕಷ್ಟ ಎಂದ WHO!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:01 PM

Share

ಕೊರೊನಾ ವೈರಸ್ ಚೀನಾದಲ್ಲಿ ಹುಟ್ಟಿಲ್ಲ, ಕೊವಿಡ್ ಮೂಲ ಚೀನಾ ಅಲ್ಲ ಎಂಬ ಚೀನಾ ವಿಜ್ಞಾನಿಗಳ ವಾದವನ್ನು ಒಪ್ಪುವುದು ಕಷ್ಟ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಸಂಶೋಧಕರು ಚೀನಾ ವಾದ ತುಂಬಾ ಊಹಾತ್ಮಕವಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಕಳೆದ ವರ್ಷ, ಡಿಸೆಂಬರ್​ನಲ್ಲಿ ವುಹಾನ್ ನಗರದ ಆಹಾರ ಮಾರುಕಟ್ಟೆಯಲ್ಲಿ ಮೊತ್ತ ಮೊದಲ ಕೊರೊನಾ ಪ್ರಕರಣ ಕಂಡುಬಂದಿತ್ತು. ಆದರೆ ಈಗ ಚೀನಾ, ತನಗಿಂತ ಮೊದಲು ಇತರೆ ದೇಶಗಳಲ್ಲಿ ಕೊರೊನಾ ವೈರಾಣು ಅಸ್ತಿತ್ವದಲ್ಲಿ ಇತ್ತು ಎಂದು ಹೇಳಿಕೆ ನೀಡಿದೆ. ಹೊರದೇಶದಿಂದ ಆಮದು ಮಾಡಿಕೊಂಡ ಆಹಾರ ಪೊಟ್ಟಣದ ಮೂಲಕ ಕೊರೊನಾ ವೈರಸ್ ಹರಡಿದೆ ಎಂದು ತಿಳಿಸಿದೆ.

ಕೊವಿಡ್, ಚೀನಾದ ಹೊರತಾಗಿ ಇತರ ದೇಶದಲ್ಲಿ ಹುಟ್ಟಿಕೊಂಡಿರುವ ಸಾಧ್ಯತೆಯ ಬಗ್ಗೆ ಜಿನೀವಾದ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮೈಕ್ ರಯಾನ್, ಕೊರೊನಾ ವೈರಾಣು ಚೀನಾದಲ್ಲಿ ಹುಟ್ಟಿಕೊಂಡಿಲ್ಲ ಎಂದು ಹೇಳುವುದು ಕಷ್ಟ ಎಂದಿದ್ದಾರೆ. ಮೊದಲ ಪ್ರಕರಣ ಎಲ್ಲಿ ಪತ್ತೆಯಾಯಿತು ಎಂಬುದನ್ನು ಅವಲಂಬಿಸಿ ವೈರಾಣುವಿನ ಬಗ್ಗೆ ತನಿಖೆ ನಡೆಸುವುದು ವಿಧಾನ ಎಂದು ಹೇಳಿರುವ ಅವರು WHO ವುಹಾನ್​ಗೆ ಸಂಶೋಧಕರನ್ನು ಕಳಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಇದನ್ನೂ ಓದಿ ಕೊರೊನಾ ಹುಟ್ಟಿದ್ದು ಭಾರತದದಲ್ಲಿಯೇ ಅಂತೆ.. ಚೀನಾ ಸಂಶೋಧಕರ ಹೊಸ ವಾದ!

Published On - 5:05 pm, Sat, 28 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್