AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು, ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ; ಮೋದಿಗೆ ಅಧ್ಯಕ್ಷರ ಕೃತಜ್ಞತೆ

ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯನ್ ದೇಶದ ಅಧ್ಯಕ್ಷ ರುಮೆನ್ ರಾದೇವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು, ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ; ಮೋದಿಗೆ ಅಧ್ಯಕ್ಷರ ಕೃತಜ್ಞತೆ
ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು, ಸಿಬ್ಬಂದಿ ರಕ್ಷಿಸಿದ ಭಾರತೀಯ ನೌಕಾಪಡೆ; ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಬಲ್ಗೇರಿಯದ ಅಧ್ಯಕ್ಷ ರುಮೆನ್ ರಾದೇವ್
Follow us
TV9 Web
| Updated By: Rakesh Nayak Manchi

Updated on: Mar 18, 2024 | 11:13 PM

ಸೋಫಿಯಾ, ಮಾ.18: ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯ (Bulgaria) ದೇಶದ ಅಧ್ಯಕ್ಷ ರುಮೆನ್ ರಾದೇವ್ (Rumen Radev) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಬಲ್ಗೇರಿಯದ ಅಧ್ಯಕ್ಷ ರುಮೆನ್ ರಾದೇವ್, 7 ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು “ರುಯೆನ್” ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತದ ನೌಕಾಪಡೆಯ ಕೆಚ್ಚೆದೆಯ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ.

ರುಮೆನ್ ರಾದೇವ್ ಎಕ್ಸ್ ಪೋಸ್ಟ್

ಭಾರತೀಯ ನೌಕಾಪಡೆಯು ಸತತ 40-ಗಂಟೆಗಳ ಕಾಲ ಕಾರ್ಯಾಚರಣೆಯಲ್ಲಿ ಹಡಗು ರುಯೆನ್ ಅನ್ನು ರಕ್ಷಿಸುವ ಮೂಲಕ ವಾಣಿಜ್ಯ ಹಡಗುಗಳನ್ನು ಹೈಜಾಕ್ ಮಾಡುವ ಸೊಮಾಲಿ ಕಡಲ್ಗಳ್ಳರ ಯೋಜನೆಗಳನ್ನು ವಿಫಲಗೊಳಿಸಿತು. ಐಎನ್​ಎಸ್ ಕೊಲ್ಕತ್ತ, ಕಳೆದ 40 ಗಂಟೆಗಳಲ್ಲಿ, ಸಂಘಟಿತ ಕ್ರಮಗಳ ಮೂಲಕ ಯಶಸ್ವಿಯಾಗಿ ಎಲ್ಲಾ 17 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಭಾರತೀಯ ನೌಕಾಪಡೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಬಲ್ಗೇರಿಯನ್ ಒಡೆತನದ ಆದರೆ ಮಾಲ್ಟೀಸ್-ಧ್ವಜದ ಬೃಹತ್ ಸರಕು ಹಡಗನ್ನು ಡಿಸೆಂಬರ್‌ನಲ್ಲಿ ಸೊಮಾಲಿ ಕಡಲ್ಗಳ್ಳರು ಅಪಹರಿಸಲಾಗಿತ್ತು. ನಂತರ, ರುಯೆನ್ ಸೋಮಾಲಿಯಾದ ಐಲ್ ಕರಾವಳಿಯಲ್ಲಿ ಇರಿಸಲಾಗಿತ್ತು.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ