AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಬಿಸಿಗಾಳಿಗೆ ಕರಗಿದ ಹಿಮನದಿ; ಪ್ರವಾಹಕ್ಕೆ ಕುಸಿದು ಬಿತ್ತು ಪಾಕಿಸ್ತಾನದ ಐತಿಹಾಸಿಕ ಹಸನಾಬಾದ್ ಸೇತುವೆ

ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಶಿಶ್ಪರ್ ಪರ್ವತದ ಬಳಿ ಇರುವ ಶಿಶ್ಪರ್ ಹಿಮನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹೆಚ್ಚಿನ ತಾಪಮಾನದಿಂದಾಗಿ ಹಿಮನದಿ ಕರಗಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಉಂಟಾಗುತ್ತಿದೆ.

Watch ಬಿಸಿಗಾಳಿಗೆ ಕರಗಿದ ಹಿಮನದಿ; ಪ್ರವಾಹಕ್ಕೆ ಕುಸಿದು ಬಿತ್ತು ಪಾಕಿಸ್ತಾನದ ಐತಿಹಾಸಿಕ ಹಸನಾಬಾದ್ ಸೇತುವೆ
ಹಸನಾಬಾದ್ ಸೇತುವೆ ಕುಸಿತ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 11, 2022 | 1:48 PM

ಪಾಕಿಸ್ತಾನದ (Pakistan) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಐತಿಹಾಸಿಕ ಹಸನಾಬಾದ್ ಸೇತುವೆಯು (Hassanabad Bridge) ಹಿಮ ಸರೋವರದ ಪ್ರವಾಹದಿಂದಾಗಿ (Flood) ಶನಿವಾರ ಕುಸಿದು ಬಿದ್ದಿದೆ . ಕಾರಕೋರಂ ಹೆದ್ದಾರಿಯಲ್ಲಿನ ಸೇತುವೆಯು ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಶಿಶ್ಪರ್ ಪರ್ವತದ ಬಳಿ ಇರುವ ಶಿಶ್ಪರ್ ಹಿಮನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹೆಚ್ಚಿನ ತಾಪಮಾನದಿಂದಾಗಿ ಹಿಮನದಿ ಕರಗಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಉಂಟಾಗುತ್ತಿದೆ. ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವಾಲಯದ ಸಚಿವೆ ಮತ್ತು ಸೆನೆಟರ್ ಶೆರ್ರಿ ರೆಹಮಾನ್ ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ, ಸೇತುವೆಯು ಕುಸಿದು ಬೀಳುತ್ತಿರುವ ದೃಶ್ಯ ಮತ್ತು ನೀರಿನ ಮಟ್ಟ ಹೆಚ್ಚುತ್ತಿರುವುದು ಕಾಣಿಸುತ್ತದೆ. ಸೇತುವೆ ಕೊಚ್ಚಿ ಹೋಗಿರುವುದರಿಂದ ಸೇತುವೆಯ ಸಮೀಪ ನಿಂತಿರುವ ಜನರನ್ನು ದೂರ ಸರಿಯುವಂತೆ ಹೇಳಲಾಗಿದೆ. ಕೆಲವು ದಿನಗಳ ಹಿಂದೆ ಹವಾಮಾನ ಬದಲಾವಣೆ ಸಚಿವಾಲಯವು ಹೆಚ್ಚಿನ ತಾಪಮಾನದಿಂದಾಗಿ ಪಾಕಿಸ್ತಾನ ಪ್ರವಾಹಕ್ಕೆ ಎಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿತ್ತು. ಕರಗುವ ಶಿಸ್ಪರ್ ಹಿಮನದಿಯಿಂದಾಗಿ ಸೇತುವೆಗಳ ಕಂಬಗಳ ಅಡಿ ಸವೆತವುಂಟಾಗಿದೆ. ಹಿಮ ಕರಗುವಿಕೆಯಿಂದಾಗುವ ಪ್ರವಾಹದಿಂದ (GLOF) ಕೆಕೆಎಚ್ ನಲ್ಲಿ ಹಸನಾಬಾದ್ ಸೇತುವೆ ಕುಸಿದಿದೆ. 48 ಗಂಟೆಗಳಲ್ಲಿ ತಾತ್ಕಾಲಿಕ ಸೇತುವೆ ಮಾಡಲಾಗುವುದು ಎಂದು ಎಫ್​​ಡಬ್ಲ್ಯುಒ ಹೇಳಿರುವುದಾಗಿ ಶೆರ್ರಿ ಹೇಳಿದ್ದಾರೆ.

ಅದೇ ಸಮಯದಲ್ಲಿ ವಿಶೇಷವಾಗಿ ಉತ್ತರದಲ್ಲಿ ಜಿಬಿ (ಗಿಲ್ಗಿಟ್-ಬಾಲ್ಟಿಸ್ತಾನ್),ಕೆಪಿ (ಖೈಬರ್ ಪಾಕ್ತುನಖಾವ)ಯಲ್ಲಿ ಪರಿಸ್ಥಿತಿ ದುರ್ಬಲವಾಗಿವೆ. ಪಾಕಿಸ್ತಾನವು ಧ್ರುವ ಪ್ರದೇಶದ ಹೊರಗೆ ಅತಿ ಹೆಚ್ಚು ಹಿಮನದಿಗಳನ್ನು ಹೊಂದಿದೆ. ಹೆಚ್ಚಿನ ಜಾಗತಿಕ ತಾಪಮಾನದಿಂದಾಗಿ ಹಿಮ ಕರಗುತ್ತಿದ್ದು, ಹೊರಸೂಸುವಿಕೆಯನ್ನು ಕಡಿಮೆ ಮಾಡಲು, ಮಾತಿನಂತೆ ನಡೆಯಲು ನಮಗೆ ಜಾಗತಿಕ ನಾಯಕರು ಬೇಕು ಎಂದು ಶೆರ್ರಿ ತಮ್ಮ ಟ್ವೀಟ್​​ನಲ್ಲಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಪ್ರವಾಹದಿಂದಾಗಿ ಸಾವಿರಾರು ಸ್ಥಳೀಯರು ಮತ್ತು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.

Published On - 1:47 pm, Wed, 11 May 22

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ