AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಬಿಸಿಗಾಳಿಗೆ ಕರಗಿದ ಹಿಮನದಿ; ಪ್ರವಾಹಕ್ಕೆ ಕುಸಿದು ಬಿತ್ತು ಪಾಕಿಸ್ತಾನದ ಐತಿಹಾಸಿಕ ಹಸನಾಬಾದ್ ಸೇತುವೆ

ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಶಿಶ್ಪರ್ ಪರ್ವತದ ಬಳಿ ಇರುವ ಶಿಶ್ಪರ್ ಹಿಮನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹೆಚ್ಚಿನ ತಾಪಮಾನದಿಂದಾಗಿ ಹಿಮನದಿ ಕರಗಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಉಂಟಾಗುತ್ತಿದೆ.

Watch ಬಿಸಿಗಾಳಿಗೆ ಕರಗಿದ ಹಿಮನದಿ; ಪ್ರವಾಹಕ್ಕೆ ಕುಸಿದು ಬಿತ್ತು ಪಾಕಿಸ್ತಾನದ ಐತಿಹಾಸಿಕ ಹಸನಾಬಾದ್ ಸೇತುವೆ
ಹಸನಾಬಾದ್ ಸೇತುವೆ ಕುಸಿತ
TV9 Web
| Edited By: |

Updated on:May 11, 2022 | 1:48 PM

Share

ಪಾಕಿಸ್ತಾನದ (Pakistan) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಐತಿಹಾಸಿಕ ಹಸನಾಬಾದ್ ಸೇತುವೆಯು (Hassanabad Bridge) ಹಿಮ ಸರೋವರದ ಪ್ರವಾಹದಿಂದಾಗಿ (Flood) ಶನಿವಾರ ಕುಸಿದು ಬಿದ್ದಿದೆ . ಕಾರಕೋರಂ ಹೆದ್ದಾರಿಯಲ್ಲಿನ ಸೇತುವೆಯು ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಶಿಶ್ಪರ್ ಪರ್ವತದ ಬಳಿ ಇರುವ ಶಿಶ್ಪರ್ ಹಿಮನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಹೆಚ್ಚಿನ ತಾಪಮಾನದಿಂದಾಗಿ ಹಿಮನದಿ ಕರಗಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಉಂಟಾಗುತ್ತಿದೆ. ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವಾಲಯದ ಸಚಿವೆ ಮತ್ತು ಸೆನೆಟರ್ ಶೆರ್ರಿ ರೆಹಮಾನ್ ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ, ಸೇತುವೆಯು ಕುಸಿದು ಬೀಳುತ್ತಿರುವ ದೃಶ್ಯ ಮತ್ತು ನೀರಿನ ಮಟ್ಟ ಹೆಚ್ಚುತ್ತಿರುವುದು ಕಾಣಿಸುತ್ತದೆ. ಸೇತುವೆ ಕೊಚ್ಚಿ ಹೋಗಿರುವುದರಿಂದ ಸೇತುವೆಯ ಸಮೀಪ ನಿಂತಿರುವ ಜನರನ್ನು ದೂರ ಸರಿಯುವಂತೆ ಹೇಳಲಾಗಿದೆ. ಕೆಲವು ದಿನಗಳ ಹಿಂದೆ ಹವಾಮಾನ ಬದಲಾವಣೆ ಸಚಿವಾಲಯವು ಹೆಚ್ಚಿನ ತಾಪಮಾನದಿಂದಾಗಿ ಪಾಕಿಸ್ತಾನ ಪ್ರವಾಹಕ್ಕೆ ಎಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿತ್ತು. ಕರಗುವ ಶಿಸ್ಪರ್ ಹಿಮನದಿಯಿಂದಾಗಿ ಸೇತುವೆಗಳ ಕಂಬಗಳ ಅಡಿ ಸವೆತವುಂಟಾಗಿದೆ. ಹಿಮ ಕರಗುವಿಕೆಯಿಂದಾಗುವ ಪ್ರವಾಹದಿಂದ (GLOF) ಕೆಕೆಎಚ್ ನಲ್ಲಿ ಹಸನಾಬಾದ್ ಸೇತುವೆ ಕುಸಿದಿದೆ. 48 ಗಂಟೆಗಳಲ್ಲಿ ತಾತ್ಕಾಲಿಕ ಸೇತುವೆ ಮಾಡಲಾಗುವುದು ಎಂದು ಎಫ್​​ಡಬ್ಲ್ಯುಒ ಹೇಳಿರುವುದಾಗಿ ಶೆರ್ರಿ ಹೇಳಿದ್ದಾರೆ.

ಅದೇ ಸಮಯದಲ್ಲಿ ವಿಶೇಷವಾಗಿ ಉತ್ತರದಲ್ಲಿ ಜಿಬಿ (ಗಿಲ್ಗಿಟ್-ಬಾಲ್ಟಿಸ್ತಾನ್),ಕೆಪಿ (ಖೈಬರ್ ಪಾಕ್ತುನಖಾವ)ಯಲ್ಲಿ ಪರಿಸ್ಥಿತಿ ದುರ್ಬಲವಾಗಿವೆ. ಪಾಕಿಸ್ತಾನವು ಧ್ರುವ ಪ್ರದೇಶದ ಹೊರಗೆ ಅತಿ ಹೆಚ್ಚು ಹಿಮನದಿಗಳನ್ನು ಹೊಂದಿದೆ. ಹೆಚ್ಚಿನ ಜಾಗತಿಕ ತಾಪಮಾನದಿಂದಾಗಿ ಹಿಮ ಕರಗುತ್ತಿದ್ದು, ಹೊರಸೂಸುವಿಕೆಯನ್ನು ಕಡಿಮೆ ಮಾಡಲು, ಮಾತಿನಂತೆ ನಡೆಯಲು ನಮಗೆ ಜಾಗತಿಕ ನಾಯಕರು ಬೇಕು ಎಂದು ಶೆರ್ರಿ ತಮ್ಮ ಟ್ವೀಟ್​​ನಲ್ಲಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಪ್ರವಾಹದಿಂದಾಗಿ ಸಾವಿರಾರು ಸ್ಥಳೀಯರು ಮತ್ತು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.

Published On - 1:47 pm, Wed, 11 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ