AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಅಲೆಯಲ್ಲಿ ಹಾಂಗ್​ ಕಾಂಗ್​ ಮುಳುಗುತ್ತಿದೆ; ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಾಯಕಿ ಕ್ಯಾರಿ ಲ್ಯಾಮ್

ಹಾಂಗ್​ ಕಾಂಗ್​ನ ನಾಯಕಿ ಕ್ಯಾರಿ ಲ್ಯಾಮ್​ ಕೂಡ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಒಮಿಕ್ರಾನ್​ ಮತ್ತು ಕೊವಿಡ್​ ಅತ್ಯಂತ ಆಕ್ರಮಣಕಾರಿಯಾಗಿ ಹರಡುತ್ತಿದೆ ಎಂದು ಹೇಳಿದ್ದಾರೆ.

ಒಮಿಕ್ರಾನ್​ ಅಲೆಯಲ್ಲಿ ಹಾಂಗ್​ ಕಾಂಗ್​ ಮುಳುಗುತ್ತಿದೆ; ಆತಂಕ ವ್ಯಕ್ತಪಡಿಸಿದ ಸ್ಥಳೀಯ ನಾಯಕಿ ಕ್ಯಾರಿ ಲ್ಯಾಮ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Feb 14, 2022 | 4:45 PM

ಕೊರೊನಾ ಸೋಂಕಿನ ಪ್ರಸರಣ, ಪ್ರಮಾಣ ಚೀನಾದ ಹಾಂಗ್​ಕಾಂಗ್​ನಲ್ಲಿ(Hong Kong) ಅತ್ಯಂತ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಒಮಿಕ್ರಾನ್​ ಸೋಂಕಿನ (Omicron) ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಆಸ್ಪತ್ರೆಗಳಲ್ಲಿ ರೋಗಿಗಳು ಹೆಚ್ಚುತ್ತಿದ್ದಾರೆ. ಹೀಗಾಗಿ ಹಾಂಗ್​ಕಾಂಗ್​​ನಲ್ಲಿ ಶೂನ್ಯ ಕೊವಿಡ್​ ನೀತಿಯಲ್ಲಿ ಸಡಿಲಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಕಟ್ಟುನಿಟ್ಟಿನ ಕ್ರಮಗಳು ಮುಂದುವರಿದಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಚೀನಾದಲ್ಲಿ ಹಾಂಗ್​ಕಾಂಗ್​ ಸೇರಿ ಎಲ್ಲ ನಗರಗಳಲ್ಲೂ ಕೊವಿಡ್​ 19 ನಿಯಂತ್ರಣಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿನ ಸಂಖ್ಯೆಯಲ್ಲಿ ತುಸು ಹೆಚ್ಚಳ ಕಂಡುಬಂದರೂ ಸಾಮೂಹಿಕ ಕ್ವಾರಂಟೈನ್​, ಸೋಂಕಿತರ ಸಂಪರ್ಕಕ್ಕೆ ಬಂದವರ ಟ್ರ್ಯಾಕ್​ ಮಾಡುವುದು, ಸಾಮಾಜಿಕ ಅಂತರ ಪಾಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಕ್ರಮಗಳನ್ನೆಲ್ಲ ಕಳೆದು ಎರಡು ವರ್ಷಗಳಿಂದಲೂ ಕಟ್ಟುನಿಟ್ಟಾಗಿ ಹೇರಲಾಗಿದ್ದು, ಜನರೂ ಕೂಡ ಪಾಲಿಸುತ್ತಿದ್ದಾರೆ.

ಆದರೆ ಡಿಸೆಂಬರ್​​ನಲ್ಲಿ ಹಾಂಗ್​ಕಾಂಗ್​​ನಲ್ಲಿ ಒಮಿಕ್ರಾನ್​ ಸೋಂಕಿನ ಹೆಚ್ಚಳದ ಜತೆ ಕೊವಿಡ್​ 19 ಪ್ರಸರಣವೂ ಮಿತಿಮೀರಿದೆ. ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆಯು ಕಳೆದ ಎರಡು ವಾರಗಳ ಹಿಂದಿನಿಗಿಂತ ಈಗ 13 ಪಟ್ಟು ಹೆಚ್ಚಳವಾಗಿದೆ. ಜನವರಿ ಅಂತ್ಯದ ಹೊತ್ತಿಗೆ ದಿನದಲ್ಲಿ 100 ಕೊರೊನಾ ಕೇಸ್​ಗಳು ದಾಖಲಾಗುತ್ತಿದ್ದವು. ಆದರೆ ಇಂದು 1530 ಪ್ರಕರಣಗಳು ದಾಖಲಾಗಿವೆ ಎಂದು ಸ್ಥಳೀಯ ಮಾಧ್ಯಮಗಳೇ ವರದಿ ಮಾಡಿವೆ.

ಹಾಂಗ್​ ಕಾಂಗ್​ನ ನಾಯಕಿ ಕ್ಯಾರಿ ಲ್ಯಾಮ್​ ಕೂಡ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಒಮಿಕ್ರಾನ್​ ಮತ್ತು ಕೊವಿಡ್​ ಅತ್ಯಂತ ಆಕ್ರಮಣಕಾರಿಯಾಗಿ ಹರಡುತ್ತಿದೆ. ಇಡೀ ನಗರ ಕೊವಿಡ್ 19 ಒಮಿಕ್ರಾನ್​ ಅಲೆಯಲ್ಲಿ ಮುಳುಗುತ್ತಿದೆ. ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂದು ಚೀನಾ ಸರ್ಕಾರದ ಅಧಿಕಾರಿಗಳು, ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಹಾಂಗ್​ಕಾಂಗ್​​ನಲ್ಲಿ ಮಾರ್ಚ್​ ಅಂತ್ಯದ ವೇಳೆಗೆ 28 ಸಾವಿರ ಪ್ರಕರಣಗಳು ದಿನವೊಂದಕ್ಕೆ ಪತ್ತೆಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿ ಮುಖದ ಮೇಲೆ ‘ಅಪ್ನಾ ಟೈಮ್ ಆಯೇಗಾ’ ಅಂತ ಬರೆಯಲಾದ ಮಾಸ್ಕ್!

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ