AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ; ಮೋದಿ ಜೊತೆ ಮಾತುಕತೆ ಬಳಿಕ ಎಲಾನ್ ಮಸ್ಕ್ ಮಾಹಿತಿ

ಬಿಲಿಯನೇರ್ ಉದ್ಯಮಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತರಾದ ಎಲಾನ್ ಮಸ್ಕ್ ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ನಡೆಸಿದ ನಂತರ ಎಲಾನ್ ಮಸ್ಕ್ ಎಕ್ಸ್ ಪೋಸ್ಟ್‌ನಲ್ಲಿ ಈ ಬಗ್ಗೆ ದೃಢಪಡಿಸಿದ್ದಾರೆ. "ಪ್ರಧಾನಿ ಮೋದಿ ಜೊತೆ ಮಾತನಾಡಿದ್ದು ಗೌರವದ ಸಂಗತಿ. ಈ ವರ್ಷ ನಾನು ಭಾರತಕ್ಕೆ ಭೇಟಿ ನೀಡುತ್ತೇನೆ" ಎಂದು ಎಲಾನ್ ಮಸ್ಕ್ ಹೇಳಿದ್ದಾರೆ.

ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ; ಮೋದಿ ಜೊತೆ ಮಾತುಕತೆ ಬಳಿಕ ಎಲಾನ್ ಮಸ್ಕ್ ಮಾಹಿತಿ
Elon Musk Pm Modi
ಸುಷ್ಮಾ ಚಕ್ರೆ
|

Updated on: Apr 19, 2025 | 4:32 PM

Share

ವಾಷಿಂಗ್ಟನ್, ಏಪ್ರಿಲ್ 19: ಟೆಸ್ಲಾ ಸಿಇಒ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಉದ್ಯಮಿ ಎಲಾನ್ ಮಸ್ಕ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಫೋನ್​ನಲ್ಲಿ ಮಾತನಾಡಿದ್ದು ಗೌರವದ ಸಂಗತಿ ಎಂದು ಕೀಡ ಅವರು ಹೇಳಿದ್ದಾರೆ. ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿಯ ಸಮಯದಲ್ಲಿ ಅವರು ಹಿಂದೆ ಚರ್ಚಿಸಿದ ವಿಷಯಗಳ ಕುರಿತು ಪ್ರಧಾನಿ ಮೋದಿ ಮತ್ತು ಎಲಾನ್ ಮಸ್ಕ್ ಶುಕ್ರವಾರ ಚರ್ಚೆ ನಡೆಸಿದ್ದರು. ಬಹು ಕ್ಷೇತ್ರಗಳಲ್ಲಿ ಸಹಯೋಗದ ಅಪಾರ ಸಾಮರ್ಥ್ಯದ ಕುರಿತು ನಾವಿಬ್ಬರೂ ಚರ್ಚಿಸಿದ್ದೇವೆ ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ.

“ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ನಮ್ಮ ಸಭೆಯಲ್ಲಿ ನಾವು ಚರ್ಚಿಸಿದ ವಿಷಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಎಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ನಾವು ಚರ್ಚಿಸಿದ್ದೇವೆ. ಈ ಕ್ಷೇತ್ರಗಳಲ್ಲಿ ಅಮೆರಿಕದೊಂದಿಗೆ ನಮ್ಮ ಪಾಲುದಾರಿಕೆಯನ್ನು ಮುಂದುವರಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಚೀನಾ ಬಿಟ್ಟು ಎಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ ಟ್ರಂಪ್

ಈ ವರ್ಷದ ಫೆಬ್ರವರಿಯ ಆರಂಭದಲ್ಲಿ ಪ್ರಧಾನಿ ಮೋದಿ ಬ್ಲೇರ್ ಹೌಸ್‌ನಲ್ಲಿ ಎಲಾನ್ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ, ಪ್ರಧಾನಿ ಮೋದಿ ತಾವಿಬ್ಬರೂ ಬಾಹ್ಯಾಕಾಶ, ತಂತ್ರಜ್ಞಾನ ಮತ್ತು ನಾವೀನ್ಯತೆ ಮುಂತಾದ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಎಕ್ಸ್​ನಲ್ಲಿ ತಿಳಿಸಿದ್ದರು. ಈ ಸಭೆಯ ಸಮಯದಲ್ಲಿ ಮೋದಿ ಮತ್ತು ಎಲಾನ್ ಮಸ್ಕ್ ಸ್ಟಾರ್‌ಲಿಂಕ್ ಮತ್ತು ಟೆಸ್ಲಾದ ಭಾರತದ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿತ್ತು. ಎಲಾನ್ ಮಸ್ಕ್ ಸ್ಪೇಸ್‌ಎಕ್ಸ್ ಮತ್ತು ಇಸ್ರೋ ನಡುವಿನ ಸಂಭಾವ್ಯ ಸಹಯೋಗದ ಬಗ್ಗೆಯೂ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು.

ಟೆಸ್ಲಾ ಈಗಾಗಲೇ ಭಾರತಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಲು ಪ್ರಾರಂಭಿಸಿದೆ. ಅದಕ್ಕಾಗಿ ಸ್ಥಳಗಳು ಮತ್ತು ಉದ್ಯೋಗಿಗಳನ್ನು ಹುಡುಕುತ್ತಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 4,000 ಚದರ ಅಡಿ ಜಾಗವನ್ನು ಬಾಡಿಗೆಗೆ ಪಡೆದಿದೆ ಎಂದು ವರದಿಯಾಗಿದೆ. ಅದು ಕೆಲವು ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಬರುತ್ತದೆ. ಟೆಸ್ಲಾ ದೆಹಲಿ ಮತ್ತು ಮುಂಬೈನಲ್ಲಿ ಕೆಲವು ಹೆಚ್ಚುವರಿ ಸ್ಥಳವನ್ನು ಸಹ ಆಯ್ಕೆ ಮಾಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಷ್ಯಾದ ಯುದ್ಧಕ್ಕೆ ಚೀನಾ ಸಹಾಯ; ಉಕ್ರೇನ್​ಗೆ ಭೇಟಿ ನೀಡಿ ಎಂದ ಝೆಲೆನ್ಸ್ಕಿಗೆ ಟ್ರಂಪ್ ಹೇಳಿದ್ದೇನು?

ಭಾರತವು ಪ್ರಸ್ತುತ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ನಡೆಸುತ್ತಿದೆ. ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 90 ದಿನಗಳ ಪರಸ್ಪರ ಸುಂಕಗಳ ವಿರಾಮವನ್ನು ಘೋಷಿಸಿದ್ದಾರೆ. ಟ್ರಂಪ್ ಭಾರತದ ಮೇಲೆ ಶೇ. 26ರಷ್ಟು ಪರಸ್ಪರ ಸುಂಕವನ್ನು ವಿಧಿಸಿದ್ದರು. ಆದರೆ, ಟ್ರಂಪ್ ಚೀನಾವನ್ನು ಹೊರತುಪಡಿಸಿ ಎಲ್ಲಾ ದೇಶಗಳ ಮೇಲೆ 90 ದಿನಗಳ ವಿರಾಮವನ್ನು ಘೋಷಿಸಿದ ನಂತರ ಭಾರತದ ಮೇಲಿನ ಸುಂಕವು ಶೂನ್ಯಕ್ಕೆ ಇಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ