ಅಮೆರಿಕದ ಒಕ್ಲಾಹಾಮಾದಲ್ಲಿ ಜನರ ಮೇಲೆ ಮತ್ತೆ ಗುಂಡಿನ ದಾಳಿ: ಗುಂಡು ಹಾರಿಸಿದ ದುಷ್ಕರ್ಮಿ ಸೇರಿ ನಾಲ್ವರ ಸಾವು

ಒಕ್ಲಾಹಾಮ ಸಮೀಪದ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆ ಆವರಣದಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿ ಮೂವರನ್ನು ಕೊಂದಿದ್ದಾನೆ.

ಅಮೆರಿಕದ ಒಕ್ಲಾಹಾಮಾದಲ್ಲಿ ಜನರ ಮೇಲೆ ಮತ್ತೆ ಗುಂಡಿನ ದಾಳಿ: ಗುಂಡು ಹಾರಿಸಿದ ದುಷ್ಕರ್ಮಿ ಸೇರಿ ನಾಲ್ವರ ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 02, 2022 | 7:35 AM

ವಾಷಿಂಗ್​ಟನ್: ಅಮೆರಿಕ ಒಕ್ಲಾಹಾಮಾದ ತುಲ್​ಸಾ (Amrica Oklahoma) ಎಂಬಲ್ಲಿ ಇರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆ ಆವರಣದಲ್ಲಿ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿ ಮೂವರನ್ನು ಕೊಂದಿದ್ದಾನೆ. ‘ವ್ಯಕ್ತಿಯೊಬ್ಬ ರೈಫಲ್​ನೊಂದಿಗೆ 2ನೇ ಮಹಡಿಯಲ್ಲಿ ಓಡಾಡುತ್ತಿದ್ದಾನೆ ಎಂಬ ಮಾಹಿತಿ ನಮಗೆ ಬಂದಿತ್ತು. ನಾವು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ ಗುಂಡಿನ ಹಾರಾಟ ನಡೆದಿತ್ತು’ ಎಂದು ಪೊಲೀಸ್ ಅಧಿಕಾರಿ ಕ್ಯಾಪ್ಟನ್ ರಿಚರ್ಡ್ ಮೆಲೆನ್​ಬರ್ಗ್​ ಹೇಳಿದರು.

‘ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ ಕೆಲವರು ಗುಂಡೇಟಿನಿಂದ ಸಾವನ್ನಪ್ಪಿದ್ದರು. ಹಲವರಿಗೆ ಗುಂಡು ತಗುಲಿ ಗಾಯವಾಗಿತ್ತು. ಶಂಕಿತ ದುಷ್ಕರ್ಮಿ ಹೇಗೆ ಸತ್ತ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ’ ಎಂದು ಪೊಲೀಸರು ಹೇಳಿದ್ದಾರೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 4.52ಕ್ಕೆ ಗುಂಡು ಹಾರಾಟ ನಡೆದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಜನರನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು.

ಘಟನೆ ಕುರಿತು ಅಧ್ಯಕ್ಷ ಜೋ ಬೈಡೆನ್​ ಅವರಿಗೂ ಶ್ವೇತಭವನದಲ್ಲಿ ಮಾಹಿತಿ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ನಾಗರಿಕರ ಮೇಲೆ, ಮಕ್ಕಳ ಮೇಲೆ ಗುಂಡಿನ ದಾಳಿ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬಂದೂಕು ನೀತಿಯನ್ನು ಮರುಪರಿಶೀಲಿಸಬೇಕು, ಗನ್​ ಲಾಬಿಗೆ ಆಡಳಿತ ಮಣಿಯಬಾರದು ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ.

ವಾರದಲ್ಲಿ 2ನೇ ಘಟನೆ

ಅಮೆರಿಕದ ಪೂರ್ವ ಒಕ್ಲಾಹಾಮದಲ್ಲಿ (Oklahoma) ಮೇ 30ರಂದು ಉತ್ಸವದ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಗುಂಡಿನ ದಾಳಿಗೆ ಬೆದರಿದ ಜನರು ಎಲ್ಲೆಂದರಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ. ಗುಂಡೇಟು ತಿಂದವರಲ್ಲಿ ಇಬ್ಬರು ಬಾಲಕರೂ ಸೇರಿದ್ದಾರೆ. ಏಳು ಮಂದಿಗೆ ಗಾಯಗಳಾಗಿವೆ. ಒಕ್ಲಾಹಾಮಾದ ತಾರ್​ಫ್ಟ್​ (Tarft) ಎಂಬಲ್ಲಿ ಸ್ಮರಣಾ ದಿನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಲವರ ನಡುವೆ ಮಾತಿನ ಚಕಮಕಿ, ಏರಿದ ದನಿಯ ವಾಗ್ವಾದ ನಡೆದಿದ್ದು ನಂತರ, ಮಧ್ಯರಾತ್ರಿಯ ವೇಳೆಗೆ ಗುಂಡಿನ ದಾಳಿ ನಡೆದಿದೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಒಕ್ಲಾಹಾಮ ತನಿಖಾ ದಳ ಮಾಹಿತಿ ನೀಡಿದೆ.

ಅಮೆರಿಕದ ಟೆಕ್ಸಾಸ್ ನಗರದ ಶಾಲೆಗೆ ಮೇ 25ರಂದು ನುಗ್ಗಿದ್ದ ದುಷ್ಕರ್ಮಿಯೊಬ್ಬ ಯದ್ವಾತದ್ವಾ ಗುಂಡು ಹಾರಿಸಿ, 19 ಮಕ್ಕಳೂ ಸೇರಿ 21 ಮಂದಿಯನ್ನು ಕೊಂದಿದ್ದ. ಗುಂಡಿನ ದಾಳಿ (Texas School Shooting) ನಡೆಸಿದವ ನಂತರ ಪೊಲೀಸರ ಗುಂಡಿಗೆ ಬಲಿಯಾಗಿದ್ದ. ಇನ್ನೂ 18ರ ಹರೆಯದಲ್ಲಿರುವ ಯುವಕ ಸಾಲ್ವಡೋರ್ ರಾಮೊಸ್​ ಆರೋಪಿ ಎಂದು ಪೊಲೀಸರು ಹೇಳಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 am, Thu, 2 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು