AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor Live : ಪಹಲ್ಗಾಮ್ ದಾಳಿಗೆ ಭಾರತದ ಪ್ರತೀಕಾರ, ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಮಾಹಿತಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)​ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್(Operation Sindoor) ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಭಾರತದ ನಡೆಸಿದ ದಾಳಿಯ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ. ದೇಶದ ಮೂರು ಸೇನೆಗಳು ಜಂಟಿ ಕಾರ್ಯಾಚರಣೆಯಲ್ಲಿ 9 ಸ್ಥಳಗಳ ಮೇಲೆ ದಾಳಿ ಮಾಡಿದ್ದವು.

Operation Sindoor Live : ಪಹಲ್ಗಾಮ್ ದಾಳಿಗೆ ಭಾರತದ ಪ್ರತೀಕಾರ, ಇಲ್ಲಿಯವರೆಗೆ ಏನೇನಾಯ್ತು? ಇಲ್ಲಿದೆ ಮಾಹಿತಿ
ಪಾಕಿಸ್ತಾನ
Follow us
ನಯನಾ ರಾಜೀವ್
|

Updated on:May 07, 2025 | 12:35 PM

ಇಸ್ಲಾಮಾಬಾದ್ ಮೇ 07: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)​ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್(Operation Sindoor) ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಭಾರತದ ನಡೆಸಿದ ದಾಳಿಯ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ. ದೇಶದ ಮೂರು ಸೇನೆಗಳು ಜಂಟಿ ಕಾರ್ಯಾಚರಣೆಯಲ್ಲಿ 9 ಸ್ಥಳಗಳ ಮೇಲೆ ದಾಳಿ ಮಾಡಿದ್ದವು. ಇದೀಗ ಭಾರತೀಯ ಸೇನೆಯು ಸುದ್ದಿಗೋಷ್ಠಿ ನಡೆಸಿ ಕೆಲವು ಮಾಹಿತಿ ನೀಡಿದೆ.

ಭಾರತದ ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರ್ ಮೇಲೆ ನಿಗಾ ಇಟ್ಟಿದ್ದರು.

ಲೈವ್​ ನೋಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ
Image
ಕೇವಲ ಎಚ್ಚರಿಕೆ ನೀಡೋದ್ರಲ್ಲೇ ನಿರತವಾದ ಪಾಕ್, ದಾಳಿ ಮಾಡಿ ತೋರಿಸಿದ ಭಾರತ
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು
Image
ಆಪರೇಷನ್ ಸಿಂಧೂರ್: ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ
Image
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಆಪರೇಷನ್ ಸಿಂಧೂರ್ ಆರಂಭವಾದಾಗಿನಿಂದ ಏನೇನಾಯ್ತು?

  • ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿರುವ ಕುರಿತು ಮಾಹಿತಿ ಬೆಳಗಿನ ಜಾವ ಸುಮಾರು 1 ಗಂಟೆ ಸುಮಾರಿಗೆ ಹೊರಬಂದಿದೆ.
  • ಮಂಗಳವಾರ ಮಧ್ಯರಾತ್ರಿಯ ನಂತರ ಮುಜಫರಾಬಾದ್ ನಗರದ ಸುತ್ತಮುತ್ತಲಿನ ಪರ್ವತಗಳ ಬಳಿ ಹಲವಾರು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಹಲವಾರು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟದ ನಂತರ ನಗರದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿತು.
  • ಇದಾದ ಸ್ವಲ್ಪ ಸಮಯದ ನಂತರ, ಪಾಕಿಸ್ತಾನ ಸೇನೆಯಿಂದ ಒಂದು ಹೇಳಿಕೆ ಬಂದಿತು. ಭಾರತದ ಕ್ರಮಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಅವರು ಹೇಳಿದರು.
  • ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಾರತ ದಾಳಿ ನಡೆಸಿದೆ ಎಂಬ ಅಧಿಕೃತ ಮಾಹಿತಿ ಬಂದಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಯಿತು. ಒಟ್ಟು 9 ಸ್ಥಳಗಳ ಮೇಲೆ ದಾಳಿ ನಡೆಸಲಾಯಿತು.
  • 1.45 ಪಾಕಿಸ್ತಾನದ ಡಾನ್ ನ್ಯೂಸ್ ವರದಿಯ ಪ್ರಕಾರ, ಕೋಟ್ಲಿ, ಬಹವಾಲ್ಪುರ್ ಮತ್ತು ಮುಜಫರಾಬಾದ್‌ನಲ್ಲಿ ಭಾರತ ಕ್ಷಿಪಣಿ ದಾಳಿ ನಡೆಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.
  • 4.13 ದಾಳಿಗಳಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೂರು ಪಡೆಗಳನ್ನು ಬಳಸಲಾಯಿತು. ಇದರಲ್ಲಿ ನಿಖರವಾದ ದಾಳಿ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಬಳಸಲಾಗಿತ್ತು.
  • 4.32: ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನದ ಎನ್‌ಎಸ್‌ಎ ಮತ್ತು ಐಎಸ್‌ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅಸಿಮ್ ಮಲಿಕ್ ಅವರೊಂದಿಗೆ ಭಾರತದ ದಾಳಿಯ ಕುರಿತು ಮಾತನಾಡಿದರು.
  • 4.35: ಭಾರತದ ದಾಳಿಯ ನಂತರ ಪಾಕಿಸ್ತಾನಕ್ಕೆ ಹೋಗುವ ಹಲವು ವಿಮಾನಗಳು ರದ್ದಾಗಿವೆ.
  • 5.04 – ದಾಳಿಗೊಳಗಾದ ಒಂಬತ್ತು ಸ್ಥಳಗಳಲ್ಲಿ ನಾಲ್ಕು ಪಾಕಿಸ್ತಾನದಲ್ಲಿವೆ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿವೆ. ಪಾಕಿಸ್ತಾನದಲ್ಲಿರುವ ಸೇನಾ ನೆಲೆಗಳಲ್ಲಿ ಬಹವಾಲ್ಪುರ್, ಮುರಿಡ್ಕೆ ಮತ್ತು ಸಿಯಾಲ್ಕೋಟ್ ಸೇರಿವೆ.
  • 5.27: ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕ್ ರುಬಿಯೊ ಹೇಳಿದ್ದಾರೆ. ಇದು ಬೇಗ ಮುಗಿಯಲಿ ಎಂದು ಅಮೆರಿಕ ಆಶಿಸುತ್ತದೆ.
  • 5.45: ಕತಾರ್ ಏರ್ವೇಸ್ ಪಾಕಿಸ್ತಾನಕ್ಕೆ ಹೋಗುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ.
  • 6.00- ಪೂಂಚ್-ರಾಜೌರಿ ವಲಯದ ಭಿಂಬರ್ ಗಾಲಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಫಿರಂಗಿಗಳಿಂದ ಗುಂಡು ಹಾರಿಸಿದೆ.
  • 6.08- ಆಪರೇಷನ್ ಸಿಂಧೂರ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಭಾರತೀಯ ಪೈಲಟ್‌ಗಳು ಮತ್ತು ಯುದ್ಧ ವಿಮಾನಗಳು ಸುರಕ್ಷಿತವಾಗಿ ನೆಲೆಗೆ ಮರಳಿದವು.
  • 6.14- ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ಮುಚ್ಚಿತು.

ಮತ್ತಷ್ಟು ಓದಿ: ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಮಸೂದ್ ಅಜರ್, ಹಫೀಜ್ ಸಯೀದ್ ಸಾವು?

ಗುರಿಯಾಗಿಸಿಕೊಂಡ ಭಯೋತ್ಪಾದಕ ಅಡಗುತಾಣಗಳು

  • ಬಹವಾಲ್ಪುರವು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯಾಗಿರುವ ಅಂತಾರಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿದೆ.
  • ಮುರಿಡ್ಕೆ ಸಾಂಬಾ ಎದುರಿನ ಗಡಿಯ ಒಳಗೆ 30 ಕಿ.ಮೀ ದೂರದಲ್ಲಿರುವ ಲಷ್ಕರ್-ಎ-ತೊಯ್ಬಾ ನೆಲೆ. 26/11 ಮುಂಬೈ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದಿದ್ದಾರೆ.
  • ಗುಲ್ಪುರ್, ಪೂಂಚ್-ರಾಜೌರಿಯಿಂದ ಎಲ್‌ಒಸಿ ಒಳಗೆ 35 ಕಿ.ಮೀ ದೂರದಲ್ಲಿದೆ. ಏಪ್ರಿಲ್ 20, 2023 ರಂದು ಪೂಂಚ್‌ನಲ್ಲಿ ನಡೆದ ದಾಳಿ ಮತ್ತು ಜೂನ್ 2024 ರಲ್ಲಿ ಪ್ರಯಾಣಿಕರ ಬಸ್ ಮೇಲಿನ ದಾಳಿಗೆ ಕಾರಣರಾದವರ ಬೇರುಗಳು ಇಲ್ಲಿವೆ.
  • ಪಿಒಜೆಕೆಯ ತಂಗ್ಧರ್ ಸೆಕ್ಟರ್ ಒಳಗೆ 30 ಕಿ.ಮೀ ದೂರದಲ್ಲಿರುವ ಲಷ್ಕರ್ ಕ್ಯಾಂಪ್ ಸವಾಯಿ.
  • ಬಿಲಾಲ್ ಕ್ಯಾಂಪ್ ಜೈಶ್-ಎ-ಮೊಹಮ್ಮದ್ ನ ಲಾಂಚ್ ಪ್ಯಾಡ್ ಆಗಿದೆ.
  • ರಾಜೌರಿಯ ಎದುರಿನ ಎಲ್‌ಒಸಿ ಒಳಗೆ 15 ಕಿ.ಮೀ ದೂರದಲ್ಲಿರುವ ಲಷ್ಕರ್ ಕೋಟ್ಲಿ ಶಿಬಿರ. ಲಷ್ಕರ್ ನ ಬಾಂಬ್ ದಾಳಿ ತರಬೇತಿ ಕೇಂದ್ರ, 50 ಭಯೋತ್ಪಾದಕರಿಗೆ ಅವಕಾಶವಿತ್ತು.
  • ಬರ್ನಾಲಾ ಕ್ಯಾಂಪ್ ರಾಜೌರಿಯ ಎದುರು ನಿಯಂತ್ರಣ ರೇಖೆಯೊಳಗೆ 10 ಕಿ.ಮೀ
  • ಸರ್ಜಲ್ ಕ್ಯಾಂಪ್ ಜೈಶ್ ಕ್ಯಾಂಪ್, ಸಾಂಬಾ-ಕಥುವಾ ಎದುರಿನ ಅಂತಾರಾಷ್ಟ್ರೀಯ ಗಡಿಯ ಒಳಗೆ 8 ಕಿ.ಮೀ. ದೂರದಲ್ಲಿದೆ.
  • ಮೆಹ್ಮೂನಾ ಕ್ಯಾಂಪ್, ಅಂತಾರಾಷ್ಟ್ರೀಯ ಗಡಿಯ ಒಳಗೆ 15 ಕಿ.ಮೀ. ದೂರದ, ಸಿಯಾಲ್‌ಕೋಟ್ ಬಳಿ, ಹಿಜ್ಬುಲ್ ಮುಜಾಹಿದ್ದೀನ್‌ನ ತರಬೇತಿ ಕೇಂದ್ರ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:36 am, Wed, 7 May 25