AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀವೆಲ್ಲ ಸಾಯುತ್ತೀರಿ; ಬೀದಿಬೀದಿಯಲ್ಲಿ ನಿಂತ ರಷ್ಯಾ ಸೈನಿಕರಿಗೆ ಉಕ್ರೇನ್​ ನಾಗರಿಕರಿಂದ ಬೈಗುಳ

ರಷ್ಯಾ ಉಕ್ರೇನ್​ ಮೇಲೆ ದಾಳಿ ಮಾಡಿ ಇಂದು 6ನೇ ದಿನ. ರಷ್ಯಾದ ಆಕ್ರಮಣ ತಡೆಯಲು ಉಕ್ರೇನ್​ನ ನಾಗರಿಕರು ಅನೇಕರು ತಮ್ಮ ಕೈಯ್ಯಲ್ಲಾದ ಪ್ರಯತ್ನ ಮಾಡುತ್ತಲೇ ಇದ್ದಾರೆ.

Video: ನೀವೆಲ್ಲ ಸಾಯುತ್ತೀರಿ; ಬೀದಿಬೀದಿಯಲ್ಲಿ ನಿಂತ ರಷ್ಯಾ ಸೈನಿಕರಿಗೆ ಉಕ್ರೇನ್​ ನಾಗರಿಕರಿಂದ ಬೈಗುಳ
ರಷ್ಯಾ ಯೋಧರೊಂದಿಗೆ ಉಕ್ರೇನ್​ ನಾಗರಿಕನ ಸಂಭಾಷಣೆ
TV9 Web
| Edited By: |

Updated on: Mar 01, 2022 | 11:31 AM

Share

ಉಕ್ರೇನ್​​ನಿಂದ ವಾಪಸ್​ ತೆರಳುವಂತೆ ಜಗತ್ತಿನ ಹಲವು ದೇಶಗಳು ರಷ್ಯಾಕ್ಕೆ (Russia) ಆಗ್ರಹ ಮಾಡುತ್ತಿದ್ದರೂ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ, ಕಿವಿಗೊಡದೆ ಯುದ್ಧವನ್ನು ಮುಂದುವರಿಸುತ್ತಲೇ ಇದೆ ಆ ದೇಶ. ಈ ಮಧ್ಯೆ ಬೀದಿಬೀದಿಯಲ್ಲಿ ನಿಂತಿರುವ ರಷ್ಯಾ ಸೈನಿಕರನ್ನು ಉಕ್ರೇನ್​ ನಾಗರಿಕರು ಮಾತನಾಡಿಸುತ್ತಿದ್ದಾರೆ. ಇಲ್ಲೇಕೆ ಬಂದಿರಿ? ನಿಮ್ಮದೇಶದಲ್ಲಿ ನಿಮಗೆ ಮಾಡಲು ಕೆಲಸವಿಲ್ಲವಾ? ಎಂಬಿತ್ಯಾದಿ ವ್ಯಂಗ್ಯ, ಆಕ್ರೋಶ ಭರಿತ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೀಗೆ ಉಕ್ರೇನ್​ ನಾಗರಿಕರು ರಷ್ಯಾ ಸೈನಿಕರನ್ನು ಮಾತನಾಡಿಸುವ ಹಲವು ದೃಶ್ಯಗಳನ್ನು ಒಳಗೊಂಡ ವಿಡಿಯೋವೊಂದನ್ನು ಉಕ್ರೇನಿಯನ್​ ವಿದೇಶಾಂಗ ವ್ಯವಹಾರಗಳ ಇಲಾಖೆ ಶೇರ್​ ಮಾಡಿಕೊಂಡಿದೆ.

ರಷ್ಯಾ ತನ್ನ ಸೈನಿಕರನ್ನು ಉಕ್ರೇನ್​ಗೆ ಕಳಿಸುವಾಗ ಅವರಿಗೆ, ನಿಮ್ಮನ್ನು ಉಕ್ರೇನ್​​ನಲ್ಲಿ ನಾಗರಿಕರು ಹೂವುಕೊಟ್ಟು ಸ್ವಾಗತಿಸುತ್ತಾರೆ ಎಂಬ ಭರವಸೆ ನೀಡಿತ್ತು. ಉಕ್ರೇನ್​ ಸರ್ಕಾರ ಅಲ್ಲಿನ ಅನೇಕ ಜನರನ್ನು ಹಲವು ವರ್ಷಗಳಿಂದಲೂ ಸೆರೆಯಲ್ಲಿ ಇಟ್ಟಿದೆ. ಹಾಗಾಗಿ ನಾಗರಿಕರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂಬ ಸುಳ್ಳನ್ನು ಅನೇಕ ವರ್ಷಗಳಿಂದ ಹೇಳಿಕೊಂಡು ಬಂದಿದೆ. ಆದರೆ ವಾಸ್ತವವನ್ನು ಈ ವಿಡಿಯೋದಲ್ಲಿ ನೋಡಬಹುದು. ಉಕ್ರೇನ್​ ಜನರು ಖಾಲಿ ಕೈಯಲ್ಲಿಯೇ ರಷ್ಯಾದ ಸೈನಿಕರು ಮತ್ತು ಯುದ್ಧ ಟ್ಯಾಂಕ್​ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಉಕ್ರೇನ್​ ಸಚಿವಾಲಯ ಕ್ಯಾಪ್ಷನ್​ ಬರೆದಿದೆ.

ಉಕ್ರೇನ್​ನ ರಸ್ತೆ ಬದಿಗಳಲ್ಲಿ ಯುದ್ಧ ಟ್ಯಾಂಕ್​ಗಳು, ಸಾಮಗ್ರಿಗಳೊಂದಿಗೆ ನಿಂತ ರಷ್ಯಾ ಸೈನಿಕರೊಂದಿಗೆ ಉಕ್ರೇನ್​ ನಾಗರಿಕರು ನಡೆಸಿದ ಮಾತುಕತೆ, ಅವರನ್ನು ವಿರೋಧಿಸಿದ ರೀತಿಯ ಹಲವು ತುಣುಕುಗಳನ್ನು ವಿಡಿಯೋ ಒಳಗೊಂಡಿದೆ. ಅದರಲ್ಲಿ ಉಕ್ರೇನಿಯನ್​ ಪ್ರಜೆಯೊಬ್ಬ ರಷ್ಯಾದ ಯುದ್ಧ ಟ್ಯಾಂಕ್​​ನ್ನು ತನ್ನ ಕೈಯಲ್ಲೇ ಹಿಡಿದಿಡಲು ಪ್ರಯತ್ನ ಪಟ್ಟಿದ್ದನ್ನು ನೋಡಬಹುದು. ಟ್ಯಾಂಕ್​ ಮುಂದೆ ಚಲಿಸದಂತೆ ನಿಲ್ಲಿಸಲು ಆತ ತನ್ನ ದೇಹವನ್ನೇ ಅಡ್ಡಕೊಟ್ಟಿದ್ದಾನೆ.  ಹಾಗೇ, ಇನ್ನೊಬ್ಬಳು ಮಹಿಳೆ ರಷ್ಯಾದ ಸೈನಿಕನ ಎದುರು ನಿಂತು ಆತನಿಗೆ ರಷ್ಯಾದ ರಾಷ್ಟ್ರೀಯ ಹೂವಾದ ಸೂರ್ಯಕಾಂತಿ ಬೀಜಗಳನ್ನು ನೀಡಿ, ನೀವು ಅತಿಕ್ರಮಣದಾರರು, ನೀವು ಫ್ಯಾಸಿಸ್ಟರು. ನಮ್ಮ ನೆಲದಲ್ಲಿ ನೀವೇನು ಮಾಡುತ್ತಿದ್ದೀರಿ ಎಂದು ದೈರ್ಯವಾಗಿ ಪ್ರಶ್ನಿಸಿದ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಅಷ್ಟೇ ಅಲ್ಲ, ಸೂರ್ಯಕಾಂತಿ ಬೀಜಗಳನ್ನು ಕೊಟ್ಟು, ನೀವಿದನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ. ಈ ಯುದ್ಧದಲ್ಲಿ ನೀವೆಲ್ಲ ಸತ್ತು ಭೂಮಿಯೊಳಗೆ ಸೇರಿದಾಗ ಅಲ್ಲಿ ಸೂರ್ಯಕಾಂತಿ ಗಿಡವಾದರೂ ಹುಟ್ಟಿಕೊಳ್ಳಲಿ ಎಂದು ಹೇಳಿದ್ದಾರೆ.  ಇಂಥ ಹತ್ತು ಹಲವು ತುಣುಕುಗಳನ್ನೊಳಗೊಂಡ ವಿಡಿಯೋವನ್ನು ಉಕ್ರೇನ್​ ಸಚಿವಾಲಯ ಶೇರ್ ಮಾಡಿಕೊಂಡಿದೆ.

ರಷ್ಯಾ ಉಕ್ರೇನ್​ ಮೇಲೆ ದಾಳಿ ಮಾಡಿ ಇಂದು 6ನೇ ದಿನ. ರಷ್ಯಾದ ಆಕ್ರಮಣ ತಡೆಯಲು ಉಕ್ರೇನ್​ನ ನಾಗರಿಕರು ಅನೇಕರು ತಮ್ಮ ಕೈಯ್ಯಲ್ಲಾದ ಪ್ರಯತ್ನ ಮಾಡುತ್ತಲೇ ಇದ್ದಾರೆ. ಖಂಡಿತ ಉಕ್ರೇನ್​​ ಗೆಲ್ಲುತ್ತದೆ, ನೀವೆಲ್ಲ ಸಾಯುತ್ತೀರಿ ಎಂದು ರಷ್ಯಾದ ಸೈನಿಕರ ಎದುರು ನಿಂತು ಧೈರ್ಯವಾಗಿ, ಕೂಗಿ ಹೇಳುತ್ತಿದ್ದಾರೆ. ಇಂದು ಕಾರ್ಖೀವ್​​ನಲ್ಲಿ ವಿಪರೀತ ಬಾಂಬ್​, ಗುಂಡಿನ ದಾಳಿಯ ಶಬ್ದ ಕೇಳಿಬರುತ್ತಿದೆ. ಈಗಾಗಲೇ ಬೆಲಾರಸ್​​ನಲ್ಲಿ ರಷ್ಯಾ ಮತ್ತು ಉಕ್ರೇನ್​ ನಡುವೆ ಮಾತುಕತೆಯೂ ನಡೆದಿದೆ. ಈ ಮಧ್ಯೆ ರಷ್ಯಾ ಉಕ್ರೇನ್​​ನಲ್ಲಿ ಆಕ್ರಮಣ ತೀವ್ರತೆಯನ್ನು ಕಡಿಮೆ ಮಾಡಿದ ಎಂಬ ವರದಿಯೂ ಬಂದಿತ್ತು. ಆದರೆ ಸ್ಥಳೀಯ ಮಾಧ್ಯಮಗಳು ಅದನ್ನು ಅಲ್ಲಗಳೆದಿವೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!