AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀವೆಲ್ಲ ಸಾಯುತ್ತೀರಿ; ಬೀದಿಬೀದಿಯಲ್ಲಿ ನಿಂತ ರಷ್ಯಾ ಸೈನಿಕರಿಗೆ ಉಕ್ರೇನ್​ ನಾಗರಿಕರಿಂದ ಬೈಗುಳ

ರಷ್ಯಾ ಉಕ್ರೇನ್​ ಮೇಲೆ ದಾಳಿ ಮಾಡಿ ಇಂದು 6ನೇ ದಿನ. ರಷ್ಯಾದ ಆಕ್ರಮಣ ತಡೆಯಲು ಉಕ್ರೇನ್​ನ ನಾಗರಿಕರು ಅನೇಕರು ತಮ್ಮ ಕೈಯ್ಯಲ್ಲಾದ ಪ್ರಯತ್ನ ಮಾಡುತ್ತಲೇ ಇದ್ದಾರೆ.

Video: ನೀವೆಲ್ಲ ಸಾಯುತ್ತೀರಿ; ಬೀದಿಬೀದಿಯಲ್ಲಿ ನಿಂತ ರಷ್ಯಾ ಸೈನಿಕರಿಗೆ ಉಕ್ರೇನ್​ ನಾಗರಿಕರಿಂದ ಬೈಗುಳ
ರಷ್ಯಾ ಯೋಧರೊಂದಿಗೆ ಉಕ್ರೇನ್​ ನಾಗರಿಕನ ಸಂಭಾಷಣೆ
TV9 Web
| Updated By: Lakshmi Hegde|

Updated on: Mar 01, 2022 | 11:31 AM

Share

ಉಕ್ರೇನ್​​ನಿಂದ ವಾಪಸ್​ ತೆರಳುವಂತೆ ಜಗತ್ತಿನ ಹಲವು ದೇಶಗಳು ರಷ್ಯಾಕ್ಕೆ (Russia) ಆಗ್ರಹ ಮಾಡುತ್ತಿದ್ದರೂ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ, ಕಿವಿಗೊಡದೆ ಯುದ್ಧವನ್ನು ಮುಂದುವರಿಸುತ್ತಲೇ ಇದೆ ಆ ದೇಶ. ಈ ಮಧ್ಯೆ ಬೀದಿಬೀದಿಯಲ್ಲಿ ನಿಂತಿರುವ ರಷ್ಯಾ ಸೈನಿಕರನ್ನು ಉಕ್ರೇನ್​ ನಾಗರಿಕರು ಮಾತನಾಡಿಸುತ್ತಿದ್ದಾರೆ. ಇಲ್ಲೇಕೆ ಬಂದಿರಿ? ನಿಮ್ಮದೇಶದಲ್ಲಿ ನಿಮಗೆ ಮಾಡಲು ಕೆಲಸವಿಲ್ಲವಾ? ಎಂಬಿತ್ಯಾದಿ ವ್ಯಂಗ್ಯ, ಆಕ್ರೋಶ ಭರಿತ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೀಗೆ ಉಕ್ರೇನ್​ ನಾಗರಿಕರು ರಷ್ಯಾ ಸೈನಿಕರನ್ನು ಮಾತನಾಡಿಸುವ ಹಲವು ದೃಶ್ಯಗಳನ್ನು ಒಳಗೊಂಡ ವಿಡಿಯೋವೊಂದನ್ನು ಉಕ್ರೇನಿಯನ್​ ವಿದೇಶಾಂಗ ವ್ಯವಹಾರಗಳ ಇಲಾಖೆ ಶೇರ್​ ಮಾಡಿಕೊಂಡಿದೆ.

ರಷ್ಯಾ ತನ್ನ ಸೈನಿಕರನ್ನು ಉಕ್ರೇನ್​ಗೆ ಕಳಿಸುವಾಗ ಅವರಿಗೆ, ನಿಮ್ಮನ್ನು ಉಕ್ರೇನ್​​ನಲ್ಲಿ ನಾಗರಿಕರು ಹೂವುಕೊಟ್ಟು ಸ್ವಾಗತಿಸುತ್ತಾರೆ ಎಂಬ ಭರವಸೆ ನೀಡಿತ್ತು. ಉಕ್ರೇನ್​ ಸರ್ಕಾರ ಅಲ್ಲಿನ ಅನೇಕ ಜನರನ್ನು ಹಲವು ವರ್ಷಗಳಿಂದಲೂ ಸೆರೆಯಲ್ಲಿ ಇಟ್ಟಿದೆ. ಹಾಗಾಗಿ ನಾಗರಿಕರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂಬ ಸುಳ್ಳನ್ನು ಅನೇಕ ವರ್ಷಗಳಿಂದ ಹೇಳಿಕೊಂಡು ಬಂದಿದೆ. ಆದರೆ ವಾಸ್ತವವನ್ನು ಈ ವಿಡಿಯೋದಲ್ಲಿ ನೋಡಬಹುದು. ಉಕ್ರೇನ್​ ಜನರು ಖಾಲಿ ಕೈಯಲ್ಲಿಯೇ ರಷ್ಯಾದ ಸೈನಿಕರು ಮತ್ತು ಯುದ್ಧ ಟ್ಯಾಂಕ್​ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಉಕ್ರೇನ್​ ಸಚಿವಾಲಯ ಕ್ಯಾಪ್ಷನ್​ ಬರೆದಿದೆ.

ಉಕ್ರೇನ್​ನ ರಸ್ತೆ ಬದಿಗಳಲ್ಲಿ ಯುದ್ಧ ಟ್ಯಾಂಕ್​ಗಳು, ಸಾಮಗ್ರಿಗಳೊಂದಿಗೆ ನಿಂತ ರಷ್ಯಾ ಸೈನಿಕರೊಂದಿಗೆ ಉಕ್ರೇನ್​ ನಾಗರಿಕರು ನಡೆಸಿದ ಮಾತುಕತೆ, ಅವರನ್ನು ವಿರೋಧಿಸಿದ ರೀತಿಯ ಹಲವು ತುಣುಕುಗಳನ್ನು ವಿಡಿಯೋ ಒಳಗೊಂಡಿದೆ. ಅದರಲ್ಲಿ ಉಕ್ರೇನಿಯನ್​ ಪ್ರಜೆಯೊಬ್ಬ ರಷ್ಯಾದ ಯುದ್ಧ ಟ್ಯಾಂಕ್​​ನ್ನು ತನ್ನ ಕೈಯಲ್ಲೇ ಹಿಡಿದಿಡಲು ಪ್ರಯತ್ನ ಪಟ್ಟಿದ್ದನ್ನು ನೋಡಬಹುದು. ಟ್ಯಾಂಕ್​ ಮುಂದೆ ಚಲಿಸದಂತೆ ನಿಲ್ಲಿಸಲು ಆತ ತನ್ನ ದೇಹವನ್ನೇ ಅಡ್ಡಕೊಟ್ಟಿದ್ದಾನೆ.  ಹಾಗೇ, ಇನ್ನೊಬ್ಬಳು ಮಹಿಳೆ ರಷ್ಯಾದ ಸೈನಿಕನ ಎದುರು ನಿಂತು ಆತನಿಗೆ ರಷ್ಯಾದ ರಾಷ್ಟ್ರೀಯ ಹೂವಾದ ಸೂರ್ಯಕಾಂತಿ ಬೀಜಗಳನ್ನು ನೀಡಿ, ನೀವು ಅತಿಕ್ರಮಣದಾರರು, ನೀವು ಫ್ಯಾಸಿಸ್ಟರು. ನಮ್ಮ ನೆಲದಲ್ಲಿ ನೀವೇನು ಮಾಡುತ್ತಿದ್ದೀರಿ ಎಂದು ದೈರ್ಯವಾಗಿ ಪ್ರಶ್ನಿಸಿದ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಅಷ್ಟೇ ಅಲ್ಲ, ಸೂರ್ಯಕಾಂತಿ ಬೀಜಗಳನ್ನು ಕೊಟ್ಟು, ನೀವಿದನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ. ಈ ಯುದ್ಧದಲ್ಲಿ ನೀವೆಲ್ಲ ಸತ್ತು ಭೂಮಿಯೊಳಗೆ ಸೇರಿದಾಗ ಅಲ್ಲಿ ಸೂರ್ಯಕಾಂತಿ ಗಿಡವಾದರೂ ಹುಟ್ಟಿಕೊಳ್ಳಲಿ ಎಂದು ಹೇಳಿದ್ದಾರೆ.  ಇಂಥ ಹತ್ತು ಹಲವು ತುಣುಕುಗಳನ್ನೊಳಗೊಂಡ ವಿಡಿಯೋವನ್ನು ಉಕ್ರೇನ್​ ಸಚಿವಾಲಯ ಶೇರ್ ಮಾಡಿಕೊಂಡಿದೆ.

ರಷ್ಯಾ ಉಕ್ರೇನ್​ ಮೇಲೆ ದಾಳಿ ಮಾಡಿ ಇಂದು 6ನೇ ದಿನ. ರಷ್ಯಾದ ಆಕ್ರಮಣ ತಡೆಯಲು ಉಕ್ರೇನ್​ನ ನಾಗರಿಕರು ಅನೇಕರು ತಮ್ಮ ಕೈಯ್ಯಲ್ಲಾದ ಪ್ರಯತ್ನ ಮಾಡುತ್ತಲೇ ಇದ್ದಾರೆ. ಖಂಡಿತ ಉಕ್ರೇನ್​​ ಗೆಲ್ಲುತ್ತದೆ, ನೀವೆಲ್ಲ ಸಾಯುತ್ತೀರಿ ಎಂದು ರಷ್ಯಾದ ಸೈನಿಕರ ಎದುರು ನಿಂತು ಧೈರ್ಯವಾಗಿ, ಕೂಗಿ ಹೇಳುತ್ತಿದ್ದಾರೆ. ಇಂದು ಕಾರ್ಖೀವ್​​ನಲ್ಲಿ ವಿಪರೀತ ಬಾಂಬ್​, ಗುಂಡಿನ ದಾಳಿಯ ಶಬ್ದ ಕೇಳಿಬರುತ್ತಿದೆ. ಈಗಾಗಲೇ ಬೆಲಾರಸ್​​ನಲ್ಲಿ ರಷ್ಯಾ ಮತ್ತು ಉಕ್ರೇನ್​ ನಡುವೆ ಮಾತುಕತೆಯೂ ನಡೆದಿದೆ. ಈ ಮಧ್ಯೆ ರಷ್ಯಾ ಉಕ್ರೇನ್​​ನಲ್ಲಿ ಆಕ್ರಮಣ ತೀವ್ರತೆಯನ್ನು ಕಡಿಮೆ ಮಾಡಿದ ಎಂಬ ವರದಿಯೂ ಬಂದಿತ್ತು. ಆದರೆ ಸ್ಥಳೀಯ ಮಾಧ್ಯಮಗಳು ಅದನ್ನು ಅಲ್ಲಗಳೆದಿವೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ; ಯುದ್ಧ ಪರಿಸ್ಥಿತಿ ತನಿಖೆ ಶೀಘ್ರವೇ ಪ್ರಾರಂಭಿಸುತ್ತೇವೆ ಎಂದ ಅಂತಾರಾಷ್ಟ್ರೀಯ ಕ್ರಿಮಿನಲ್​ ಕೋರ್ಟ್​

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ