AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಚಿತ್ತಗಾಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ

ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ
ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಬೆಂಕಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 05, 2022 | 8:28 PM

ಢಾಕಾ: ಬಾಂಗ್ಲಾದೇಶದ (Bangladesh) ಚಿತ್ತಗಾಂಗ್‌ನಲ್ಲಿರುವ ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ(shipping container depot) ಶನಿವಾರ ರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 49 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸೀತಾಕುಂದಾ ಪ್ರದೇಶದ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 300 ಜನರು ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ತಗಾಂಗ್ (Chittagong )ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಾತ್ರಿ 9ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸ್ಫೋಟದ ನಂತರ ಬೆಂಕಿ ವ್ಯಾಪಕವಾಗಿ ಹರಡಿದೆ.”ಈ ಘಟನೆಯಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು” ಎಂದು ರೆಡ್ ಕ್ರೆಸೆಂಟ್ ಯೂತ್ ಚಿತ್ತಗಾಂಗ್‌ನ ಆರೋಗ್ಯ ಮತ್ತು ಸೇವಾ ವಿಭಾಗದ ಮುಖ್ಯಸ್ಥ ಇಸ್ತಾಕುಲ್ ಇಸ್ಲಾಂ ಹೇಳಿದ್ದಾರೆ. ಮೂಲಗಳ ಪ್ರಕಾರ, ಸ್ಫೋಟದಿಂದಾಗಿ ಸಮೀಪದ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

“ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿವೆ ಮತ್ತು ಆರು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ ಎಂದು ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಹೇಳಿದ್ದಾರೆ. ಕಂಟೇನರ್ ಡಿಪೋ ಮೇ 2011 ರಿಂದ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಬಾಂಗ್ಲಾದೇಶ: ಹೊತ್ತಿ ಉರಿದ ಕಂಟೈನರ್ ಡಿಪೋ, 16 ಮಂದಿ ಸಾವು, 450 ಮಂದಿಗೆ ಗಂಭೀರ ಗಾಯ
Image
ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!