ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ

ಚಿತ್ತಗಾಂಗ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ

ಬಾಂಗ್ಲಾದೇಶ: ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಅಗ್ನಿ ದುರಂತ; ಸಾವಿನ ಸಂಖ್ಯೆ 49ಕ್ಕೆ ಏರಿಕೆ
ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ ಬೆಂಕಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jun 05, 2022 | 8:28 PM

ಢಾಕಾ: ಬಾಂಗ್ಲಾದೇಶದ (Bangladesh) ಚಿತ್ತಗಾಂಗ್‌ನಲ್ಲಿರುವ ಶಿಪ್ಪಿಂಗ್ ಕಂಟೇನರ್ ಡಿಪೋದಲ್ಲಿ(shipping container depot) ಶನಿವಾರ ರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 49 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸೀತಾಕುಂದಾ ಪ್ರದೇಶದ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 300 ಜನರು ಗಾಯಗೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ತಗಾಂಗ್ (Chittagong )ಮೆಡಿಕಲ್ ಕಾಲೇಜು ಆಸ್ಪತ್ರೆಯ ಪೊಲೀಸ್ ಔಟ್ ಪೋಸ್ಟ್​​ನಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿ ನೂರುಲ್ ಅಲಾಂ ಅವರ ಪ್ರಕಾರ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಂಕಿ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಾತ್ರಿ 9ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಮಧ್ಯರಾತ್ರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಸ್ಫೋಟದ ನಂತರ ಬೆಂಕಿ ವ್ಯಾಪಕವಾಗಿ ಹರಡಿದೆ.”ಈ ಘಟನೆಯಲ್ಲಿ 450 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು” ಎಂದು ರೆಡ್ ಕ್ರೆಸೆಂಟ್ ಯೂತ್ ಚಿತ್ತಗಾಂಗ್‌ನ ಆರೋಗ್ಯ ಮತ್ತು ಸೇವಾ ವಿಭಾಗದ ಮುಖ್ಯಸ್ಥ ಇಸ್ತಾಕುಲ್ ಇಸ್ಲಾಂ ಹೇಳಿದ್ದಾರೆ. ಮೂಲಗಳ ಪ್ರಕಾರ, ಸ್ಫೋಟದಿಂದಾಗಿ ಸಮೀಪದ ಮನೆಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.

“ಸುಮಾರು 19 ಅಗ್ನಿಶಾಮಕ ಘಟಕಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿವೆ ಮತ್ತು ಆರು ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ ಎಂದು ಚಿತ್ತಗಾಂಗ್ ಅಗ್ನಿಶಾಮಕ ಸೇವೆ ಮತ್ತು ಸಿವಿಲ್ ಡಿಫೆನ್ಸ್ ಸಹಾಯಕ ನಿರ್ದೇಶಕ ಎಂಡಿ ಫಾರುಕ್ ಹೊಸೈನ್ ಸಿಕ್ದರ್ ಹೇಳಿದ್ದಾರೆ. ಕಂಟೇನರ್ ಡಿಪೋ ಮೇ 2011 ರಿಂದ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಬಾಂಗ್ಲಾದೇಶ: ಹೊತ್ತಿ ಉರಿದ ಕಂಟೈನರ್ ಡಿಪೋ, 16 ಮಂದಿ ಸಾವು, 450 ಮಂದಿಗೆ ಗಂಭೀರ ಗಾಯ
Image
ಪ್ರಿಯಕರನಿಗಾಗಿ ಹುಲಿಗಳಿಗೆ ಅಂಜದೆ ಗಂಟೆಗಟ್ಟಲೆ ನದಿ ಈಜಿ ಬಾಂಗ್ಲಾ ಗಡಿ ದಾಟಿ ಯುವತಿ: ಸದ್ಯಕ್ಕೆ ಪೊಲೀಸರ ಅತಿಥಿ

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು