1 ಕೋಟಿ 1 ಲಕ್ಷ ಹಣ ದರೋಡೆ: ಅರ್ಧಗಂಟೆಯಲ್ಲೇ ಖದೀಮರು ಲಾಕ್, ಇದು ಪೊಲೀಸ್ ಖದರ್

Updated on: Sep 28, 2025 | 5:16 PM

ಒಂದು ಕೋಟಿ ಒಂದು ಲಕ್ಷ ರೂ ದೋಚಿದ್ದ ಗ್ಯಾಂಗ್ ಅನ್ನು ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸರು, ಖದೀಮರನ್ನು ಹಿಡಿದು ಒಂದು ಕೋಟಿ ಒಂದು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಹೇಮಂತ್ ಎಂಬಾತ ಅಡಿಕೆ ಮಂಡಿಗೆ ನೀಡಬೇಕಿದ್ದ ಒಂದು ಕೋಟಿ ಒಂದು ಲಕ್ಷ ನಗದು ಹಣ ಪಡೆಯಲು ಹುಳಿಮಾವು ಬಳಿ ಅಕ್ಷಯ ನಗರಕ್ಕೆ ಬಂದಿದ್ದ. ಈ ವೇಳೆ ನರಸಿಂಹ ಮತ್ತು ಜೀವನ್ ಗ್ಯಾಂಗ್ ಅಡ್ಡಗಟ್ಟಿದ್ದರು. ನಂತರ ಬೆದರಿಸಿ ಹಲ್ಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿತ್ತು.

ಬೆಂಗಳೂರು, ಸೆಪ್ಟೆಂಬರ್ 28): ಒಂದು ಕೋಟಿ ಒಂದು ಲಕ್ಷ ರೂ ದೋಚಿದ್ದ ಗ್ಯಾಂಗ್ ಅನ್ನು ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸರು, ಖದೀಮರನ್ನು ಹಿಡಿದು ಒಂದು ಕೋಟಿ ಒಂದು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಹೇಮಂತ್ ಎಂಬಾತ ಅಡಿಕೆ ಮಂಡಿಗೆ ನೀಡಬೇಕಿದ್ದ ಒಂದು ಕೋಟಿ ಒಂದು ಲಕ್ಷ ನಗದು ಹಣ ಪಡೆಯಲು ಹುಳಿಮಾವು ಬಳಿ ಅಕ್ಷಯ ನಗರಕ್ಕೆ ಬಂದಿದ್ದ. ಈ ವೇಳೆ ನರಸಿಂಹ ಮತ್ತು ಜೀವನ್ ಗ್ಯಾಂಗ್ ಅಡ್ಡಗಟ್ಟಿದ್ದರು. ನಂತರ ಬೆದರಿಸಿ ಹಲ್ಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿತ್ತು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಹುಳಿಮಾವು ಇನ್ಸ್​ ಪೆಕ್ಟರ್ ಕುಮಾರಸ್ವಾಮಿ ತಂಡ ಕಾರ್ಯಚರಣೆ ನಡೆಸಿ ಕೃತ್ಯ ನಡೆದ ಅರ್ಧ ಗಂಟೆಯಲ್ಲೇ ಗ್ಯಾಂಗ್​ ನನ್ನು ಎಡೆಮುರಿಕಟ್ಟಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More