AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ.

303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
ಗಣಪತಿ ಶರ್ಮಾ
|

Updated on: Dec 23, 2023 | 8:06 AM

Share

ಪ್ಯಾರಿಸ್, ಡಿಸೆಂಬರ್ 23: ಕೇಂದ್ರ ಅಮೆರಿಕದ ನಿಕರಾಗುವಾಗೆ (Nicaragua) ತೆರಳುತ್ತಿದ್ದ 303 ಮಂದಿ ಭಾರತೀಯರಿದ್ದ (Indians) ವಿಮಾನವೊಂದನ್ನು ಫ್ರಾನ್ಸ್​ನ ಅಧಿಕಾರಿಗಳು ಮಾನವ ಕಳ್ಳಸಾಗಣೆ ಶಂಕೆಯ ಮೇಲೆ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ. ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯ ಪ್ರಕಾರ, 303 ಭಾರತೀಯ ಪ್ರಯಾಣಿಕರನ್ನು ಹೊತ್ತ ವಿಮಾನವು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಟೇಕಾಫ್ ಆಗಿತ್ತು.

ರೊಮೇನಿಯನ್ ಕಂಪನಿ ಲೆಜೆಂಡ್ ಏರ್‌ಲೈನ್ಸ್‌ನ A340 ವಿಮಾನವು ಇಂಧನ ತುಂಬಲು ಲ್ಯಾಂಡ್ ಆಗಿತ್ತು. ಲ್ಯಾಂಡಿಂಗ್ ನಂತರ ಮಾನವ ಕಳ್ಳಸಾಗಣೆ ಅನುಮಾನದ ಮೇಲೆ ತನಿಖೆಗಾಗಿ ವಿಮಾನವನ್ನು ವ್ಯಾಟ್ರಿ ವಿಮಾನ ನಿಲ್ದಾಣದಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ಫ್ರಾನ್ಸ್​​ನ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಭಾರತೀಯ ರಾಯಭಾರ ಕಚೇರಿಯಿಂದಲೂ ತನಿಖೆ

ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ತನಿಖೆಯನ್ನು ಪ್ರಾರಂಭಿಸಿದೆ. ಜತೆಗೆ, ವಿಮಾನದಲ್ಲಿರುವ ಭಾರತೀಯರ ನೆರವಿಗೆ ಮುಂದಾಗಿದೆ. ಯುಎಇಯಿಂದ ನಿಕರಾಗುವಾಗೆ ತೆರಳುವ ವಿಮಾನದಲ್ಲಿ 303 ಜನರು, ಹೆಚ್ಚಿನಂಶ ಭಾರತೀಯ ಮೂಲದವರು ಇರುವುದಾಗಿ ಫ್ರಾನ್ಸ್​ನ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಮಾನವ ಕಳ್ಳಸಾಗಣೆಯ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ತಂಡ ಅಲ್ಲಿಗೆ ತಲುಪಿದೆ ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ