AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ.

303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
303 ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್​: ಮಾನವ ಕಳ್ಳಸಾಗಣೆ ಶಂಕೆ
ಗಣಪತಿ ಶರ್ಮಾ
|

Updated on: Dec 23, 2023 | 8:06 AM

Share

ಪ್ಯಾರಿಸ್, ಡಿಸೆಂಬರ್ 23: ಕೇಂದ್ರ ಅಮೆರಿಕದ ನಿಕರಾಗುವಾಗೆ (Nicaragua) ತೆರಳುತ್ತಿದ್ದ 303 ಮಂದಿ ಭಾರತೀಯರಿದ್ದ (Indians) ವಿಮಾನವೊಂದನ್ನು ಫ್ರಾನ್ಸ್​ನ ಅಧಿಕಾರಿಗಳು ಮಾನವ ಕಳ್ಳಸಾಗಣೆ ಶಂಕೆಯ ಮೇಲೆ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ. ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯ ಪ್ರಕಾರ, 303 ಭಾರತೀಯ ಪ್ರಯಾಣಿಕರನ್ನು ಹೊತ್ತ ವಿಮಾನವು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಟೇಕಾಫ್ ಆಗಿತ್ತು.

ರೊಮೇನಿಯನ್ ಕಂಪನಿ ಲೆಜೆಂಡ್ ಏರ್‌ಲೈನ್ಸ್‌ನ A340 ವಿಮಾನವು ಇಂಧನ ತುಂಬಲು ಲ್ಯಾಂಡ್ ಆಗಿತ್ತು. ಲ್ಯಾಂಡಿಂಗ್ ನಂತರ ಮಾನವ ಕಳ್ಳಸಾಗಣೆ ಅನುಮಾನದ ಮೇಲೆ ತನಿಖೆಗಾಗಿ ವಿಮಾನವನ್ನು ವ್ಯಾಟ್ರಿ ವಿಮಾನ ನಿಲ್ದಾಣದಲ್ಲೇ ಉಳಿಸಿಕೊಳ್ಳಲಾಗಿದೆ ಎಂದು ಫ್ರಾನ್ಸ್​​ನ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕವು (JUNALCO) ತನಿಖೆಯನ್ನು ಕೈಗೆತ್ತಿಕೊಂಡಿದೆ. ವಿಮಾನದಲ್ಲಿರುವವರು ಭಾರತೀಯ ಮೂಲದವರಾಗಿದ್ದು, ಕೇಂದ್ರ ಅಮೆರಿಕಕ್ಕೆ ತೆರಳಿ ಅಲ್ಲಿಂದ ಯುನೈಟೆಡ್ ಸ್ಟೇಟ್ಸ್ ಅಥವಾ ಕೆನಡಾಗೆ ಅಕ್ರಮವಾಗಿ ನುಸುಳಲು ತೆರಳುತ್ತಿರುವ ಶಂಕೆ ವ್ಯಕ್ತವಾಗಿದೆ ಎಂದು ‘ಎಎಫ್​ಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಫ್ರಾನ್ಸ್​ನ ಸಂಘಟಿತ ಅಪರಾಧಗಳ ತಡೆ ಘಟಕದ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪ್ಯಾರಿಸ್ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಭಾರತೀಯ ರಾಯಭಾರ ಕಚೇರಿಯಿಂದಲೂ ತನಿಖೆ

ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ತನಿಖೆಯನ್ನು ಪ್ರಾರಂಭಿಸಿದೆ. ಜತೆಗೆ, ವಿಮಾನದಲ್ಲಿರುವ ಭಾರತೀಯರ ನೆರವಿಗೆ ಮುಂದಾಗಿದೆ. ಯುಎಇಯಿಂದ ನಿಕರಾಗುವಾಗೆ ತೆರಳುವ ವಿಮಾನದಲ್ಲಿ 303 ಜನರು, ಹೆಚ್ಚಿನಂಶ ಭಾರತೀಯ ಮೂಲದವರು ಇರುವುದಾಗಿ ಫ್ರಾನ್ಸ್​ನ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಮಾನವ ಕಳ್ಳಸಾಗಣೆಯ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ತಂಡ ಅಲ್ಲಿಗೆ ತಲುಪಿದೆ ಎಂದು ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ