AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಲಿಯನ್​ಗಳಿಂದ ಮನುಷ್ಯರ ಫ್ರೆಂಡ್​ಶಿಪ್: ಇದು ಇಸ್ರೇಲಿ ಬಾಹ್ಯಾಕಾಶ ವಿಜ್ಞಾನಿಯ ಖಚಿತ ನುಡಿ

ಇದೀಗ ಅಮೆರಿಕದಲ್ಲಿ ಅಧಿಕಾರ ಬದಲಾವಣೆಯ ಪ್ರಕ್ರಿಯೆ ಆರಂಭವಾಗಿರುವುದರಿಂದ, ನೂತನ ಅಧ್ಯಕ್ಷ ಜೋ ಬಿಡೆನ್ ಮೇಲೆ ಪ್ರಭಾವ ಬೀರಲು ಯೆಶೆದ್ ಈ ಹೇಳಿಕೆ ನೀಡಿರಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಏಲಿಯನ್​ಗಳಿಂದ ಮನುಷ್ಯರ ಫ್ರೆಂಡ್​ಶಿಪ್: ಇದು ಇಸ್ರೇಲಿ ಬಾಹ್ಯಾಕಾಶ ವಿಜ್ಞಾನಿಯ ಖಚಿತ ನುಡಿ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 08, 2020 | 2:50 PM

Share

ಜೆರುಸಲೆಂ: ಏಲಿಯನ್​ಗಳು (ಅನ್ಯಗ್ರಹ ಜೀವಿ) ಇರುವುದು ನಿಜ, ಕೆಲ ಸರ್ಕಾರಗಳು ರಹಸ್ಯವಾಗಿ ಅವುಗಳ ಜೊತೆಗೆ ವ್ಯವಹರಿಸುತ್ತಿವೆ. ಕಾಲ ಪಕ್ವವಾದಾಗ ಈ ವಿಷಯ ಬಹಿರಂಗಪಡಿಸುತ್ತವೆ ಎಂದು ಇಸ್ರೇಲ್​ ಸರ್ಕಾರದ ಬಾಹ್ಯಾಕಾಶ ರಕ್ಷಣಾ ಯೋಜನೆಯ ಮುಖ್ಯಸ್ಥರಾಗಿ 1981ರಿಂದ 2010ರವರೆಗೆ ಕಾರ್ಯ ನಿರ್ವಹಿಸುತ್ತಿದ್ದ 87ರ ಹರೆಯದ ವಿಜ್ಞಾನಿ ಹೈಮ್ ಯೆಶೆದ್ ಹೇಳಿಕೆ ನೀಡಿದ್ದಾರೆ.

ಇಸ್ರೇಲಿ ಪ್ರಕಾಶನ ಸಂಸ್ಥೆ ಯೆಡಿಯೊಟ್ ಅಹರೊನೊಟ್​ಗೆ ನೀಡಿದ ಸಂದರ್ಶನದಲ್ಲಿ ಹೈಮ್ ಯೆಶೆದ್ ಅನ್ಯಗ್ರಹ ಜೀವಿಗಳ ಉಪಸ್ಥಿತಿಯನ್ನು ಒಪ್ಪಿಕೊಂಡಿದ್ದಾರೆ. ಅವು ನಮ್ಮೊಂದಿಗೆ ಬಹುಕಾಲದಿಂದ ಇವೆ. ಗಲಕ್ಟಿಕ್ ಫೆಡರೇಶನ್ ಹೆಸರಿನಲ್ಲಿ ತಮ್ಮದೇ ಆದ ಸಂಘಟನೆಯನ್ನೂ ಹೊಂದಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈ ವಿಚಾರವನ್ನು ಜಗತ್ತಿಗೆ ಸಾರಿ ಹೇಳಲು ಮುಂದಾಗಿದ್ದರು. ಆದರೆ, ಈ ಸತ್ಯ ತಿಳಿಯಲು ಜನರಿನ್ನೂ ಸಿದ್ಧರಿಲ್ಲ ಎಂಬ ಕಾರಣಕ್ಕೆ ಸುಮ್ಮನಾದರು ಎಂದು ಯೆಶೆದ್ ಹೇಳಿದ್ದಾರೆ.

ಭೂಮಿಯ ಮೇಲೆ ಸಂಶೋಧನೆ ನಡೆಸಲು ಅನ್ಯಗ್ರಹ ಜೀವಿಗಳು ಅಮೆರಿಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ವಿಶ್ವದ ಅಸ್ತಿತ್ವಕ್ಕೆ ಕಾರಣವಾಗಿರುವ ಅಂಶಗಳನ್ನು ಅರ್ಥ ಮಾಡಿಕೊಳ್ಳಲು ಅವೂ ಪ್ರಯತ್ನಿಸುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ಸಹಾಯಬೇಕು ಎಂದು ಅಪೇಕ್ಷಿಸುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಗಳ ಗ್ರಹದಲ್ಲಿರುವ ಭೂಗತ ಬಾಹ್ಯಾಕಾಶ ಕೇಂದ್ರದಲ್ಲಿ ಅನ್ಯಗ್ರಹ ಜೀವಿಗಳು ಮನುಷ್ಯರ ಜೊತೆಗೂಡಿ ಸಂಶೋಧನೆ ನಡೆಸುತ್ತಿವೆ. ಪರಸ್ಪರ ವಿಶ್ವಾಸ ವೃದ್ಧಿಗೆ ಎರಡೂ ಕಡೆಯಿಂದ ಶ್ರಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈಗೇಕೆ ಈ ಹೇಳಿಕೆ?

ಈ ಹಿಂದೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸಹ ಅನ್ಯಗ್ರಹ ಜೀವಿಗಳ ಅಸ್ತಿತ್ವ ಒಪ್ಪಿಕೊಂಡಿದ್ದರು. ಆದರೆ ಹೆಚ್ಚೇನೂ ವಿವರ ನೀಡಿರಲಿಲ್ಲ. ಅಮೆರಿಕದ ಈಗಿನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಬಾಹ್ಯಾಕಾಶ ಪಡೆಯನ್ನು ವಿಸರ್ಜಿಸಲು ಮುಂದಾಗಿದ್ದರು.

ಇದೀಗ ಅಮೆರಿಕದಲ್ಲಿ ಅಧಿಕಾರ ಬದಲಾವಣೆಯ ಪ್ರಕ್ರಿಯೆ ಆರಂಭವಾಗಿರುವುದರಿಂದ, ನೂತನ ಅಧ್ಯಕ್ಷ ಜೋ ಬಿಡೆನ್ ಮೇಲೆ ಪ್ರಭಾವ ಬೀರಲು ಯೆಶೆದ್ ಈ ಹೇಳಿಕೆ ನೀಡಿರಬಹುದು. ಈ ಮೂಲಕ ಬಾಹ್ಯಾಕಾಶ ಸಂಶೋಧನೆಗೆ ಹರಿದುಬರುತ್ತಿರುವ ಅನುದಾನ ಉಳಿಸಿಕೊಳ್ಳಲು ವಿಜ್ಞಾನಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಬಾಹ್ಯಾಕಾಶ ಪ್ರವೇಶಿಸಲು ಖಾಸಗಿ ವಲಯಕ್ಕೆ ಅನುಮತಿ! ಪ್ರತ್ಯೇಕ ಏಜೆನ್ಸಿ ಅಸ್ತಿತ್ವಕ್ಕೆ

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

Published On - 2:48 pm, Tue, 8 December 20

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?