AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಮೇಲೆ ದುಷ್ಕರ್ಮಿಗಳ ದಾಳಿ; ನೂರಾರು ವಿದ್ಯಾರ್ಥಿಗಳು ನಾಪತ್ತೆ, ಆತಂಕದಲ್ಲಿ ಪಾಲಕರು

ಬಂದೂಕುಧಾರಿಗಳು AK-47 ಹಿಡಿದು ಉತ್ತರ ನೈಜೀರಿಯಾದಲ್ಲಿನ ಕಂಕರದಲ್ಲಿರುವ ಸರಕಾರಿ ವಿಜ್ಞಾನ ಶಾಲೆಯ ಮೇಲೆ ದಾಳಿ ನಡೆಸಿದರು. ಈ ವೇಳೆ 200 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರೆಂದು ಪೊಲೀಸರು ತಳಿಸಿದ್ದಾರೆ.

shruti hegde
| Edited By: |

Updated on: Dec 13, 2020 | 7:20 PM

Share

ಅಬುಜ: ಉತ್ತರ ನೈಜೀರಿಯಾದ ಕಸ್ಟಿನಾ ಶಾಲೆಯ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ ನಂತರ ನೂರಾರು ವಿದ್ಯಾರ್ಥಿಗಳು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂದೂಕುಧಾರಿಗಳು AK-47 ಹಿಡಿದು ಉತ್ತರ ನೈಜೀರಿಯಾದ ಕಂಕರದಲ್ಲಿರುವ ಸರಕಾರಿ ವಿಜ್ಞಾನ ಶಾಲೆಯ ಮೇಲೆ ಶುಕ್ರವಾರ ದಾಳಿ ನಡೆಸಿದ್ದರು ಎಂದು ಪೊಲೀಸ್ ವಕ್ತಾರ ಗ್ಯಾಂಬೊ ಇಸಾಹ್ ಹೇಳಿದ್ದಾರೆ.

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಹುಡುಕಲು ಪೊಲೀಸರು ಕಾರ್ಯಾಚರಣೆ ಅರಂಭಿಸಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಸುಮಾರು 200 ವಿದ್ಯಾರ್ಥಿಗಳಿಗೆ ಅವರ ಸುರಕ್ಷತೆ ದೃಷ್ಟಿಯಿಂದ ಓಡಿಹೋಗಲು ಅವಕಾಶ ಮಾಡಿಕೊಡಲಾಗಿತ್ತು. ಓರ್ವ ಪೊಲೀಸ್​ ಅಧಿಕಾರಿಯೂ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಶಾಲೆಯ ಮೇಲೆ ದಾಳಿ ಮಾಡಿದವರನ್ನು, ನೈಜೀರಿಯಾ ಸೇನೆ ವಾಯುಪಡೆಯ ನೆರವಿನೊಂದಿಗೆ ಕಾಡಿನಲ್ಲಿ ಪತ್ತೆಹಚ್ಚಿದೆ. ಆಗಲೂ ಸಹ ಗುಂಡಿನ ಚಕಮಕಿ ನಡೆದಿದೆ ಎಂದು ನೈಜೀರಿಯಾ ಅಧ್ಯಕ್ಷ ಮುಹಮ್ಮದ್ ಬುಹಾರಿ ಹೇಳಿದ್ದಾರೆ.

ಇನ್ನು ಶಾಲೆಯ ಅರ್ಧದಷ್ಟು ವಿದ್ಯಾರ್ಥಿಗಳು ಅಂದರೆ ಸುಮಾರು 800 ಮಕ್ಕಳು ಕಾಣೆಯಾಗಿದ್ದಾರೆಂದು ಪಾಲಕರು, ಶಾಲಾ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ನಿಜಕ್ಕೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂದು ಪತ್ತೆ ಹಚ್ಚಿ, ಅವರನ್ನೆಲ್ಲ ರಕ್ಷಿಸುವ ಕಾರ್ಯ ಆರಂಭವಾಗಿದೆ ಎಂದು ಸರ್ಕಾರ ಹೇಳಿದೆ.

ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿನಿ ಇನ್ನೂ ವಾಪಸ್ ಬಂದಿಲ್ಲ

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ