AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು
ನರ್ಸ್​Image Credit source: NDTV
ನಯನಾ ರಾಜೀವ್
|

Updated on: Aug 19, 2023 | 8:01 AM

Share

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಇದೀಗ ನರ್ಸ್​ ಅನ್ನು ತಪ್ಪಿತಸ್ಥೆ ಎಂದಿರುವ ನ್ಯಾಯಾಲಯ ಆಗಸ್ಟ್​ 21 ರಂದು ಮ್ಯಾಂಚೆಸ್ಟರ್ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ. ನರ್ಸ್​ ಲೂಸಿ ಲೆಟ್ಟಿ 33 ವರ್ಷ ವಯಸ್ಸಿನವರು, ಕಳೆದ ಅಕ್ಟೋಬರ್​ನಿಂದ ಈ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿದೆ, ಆಕೆಯಿಂದ ಮೃತಪಟ್ಟ ಮಕ್ಕಳಲ್ಲಿ ಹೆಚ್ಚಿನವು ಅನಾರೋಗ್ಯದಿಂದ ಬಳಲುತ್ತಿದ್ದವು, ಕೆಲವು ಅಕಾಲಿಕವಾಗಿ ಜನಿಸಿದಂಥದ್ದಾಗಿದ್ದವು.

ಜೂನ್ 2015 ಮತ್ತು ಜೂನ್ 2016 ರ ನಡುವೆ ವಾಯುವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಹತ್ಯೆ ಮಾಡಿದ್ದಳು. ಈ ಪ್ರಕರಣದಲ್ಲಿ ಜುಲೈ 2018 ಮತ್ತು ನವೆಂಬರ್ 2020 ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಲಾಗಿತ್ತು. ಎರಡು ಬಾರಿ ಬಿಡುಗಡೆಗೊಂಡಿದ್ದಳು.

ಮತ್ತಷ್ಟು ಓದಿ: ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ದುರ್ಬಲ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿಯನ್ನು ಈ ನರ್ಸ್​ಗೆ ವಹಿಸಲಾಗಿತ್ತು, ಲೂಸಿ ಶಿಫ್ಟ್​ನಲ್ಲಿದ್ದಾಗ ಮಕ್ಕಳು ಮೃತಪಟ್ಟಿದ್ದಾರೆ, ಆದರೆ ಲೂಸಿ ಮಕ್ಕಳು ಸಹಜವಾಗಿ ಸಾವನ್ನಪ್ಪಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳುತ್ತಿದ್ದಾಳೆ. ಆಕೆಯ ಮನೆಯಲ್ಲಿ ಸಿಕ್ಕ ಪತ್ರವೊಂದರಲ್ಲಿ ನಾನು ದುಷ್ಟೆ, ನಾನೇ ಎಲ್ಲಾ ತಪ್ಪನ್ನು ಮಾಡಿದ್ದೇನೆ ಎಂದು ಬರೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ