AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು
ನರ್ಸ್​Image Credit source: NDTV
ನಯನಾ ರಾಜೀವ್
|

Updated on: Aug 19, 2023 | 8:01 AM

Share

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಇದೀಗ ನರ್ಸ್​ ಅನ್ನು ತಪ್ಪಿತಸ್ಥೆ ಎಂದಿರುವ ನ್ಯಾಯಾಲಯ ಆಗಸ್ಟ್​ 21 ರಂದು ಮ್ಯಾಂಚೆಸ್ಟರ್ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ. ನರ್ಸ್​ ಲೂಸಿ ಲೆಟ್ಟಿ 33 ವರ್ಷ ವಯಸ್ಸಿನವರು, ಕಳೆದ ಅಕ್ಟೋಬರ್​ನಿಂದ ಈ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿದೆ, ಆಕೆಯಿಂದ ಮೃತಪಟ್ಟ ಮಕ್ಕಳಲ್ಲಿ ಹೆಚ್ಚಿನವು ಅನಾರೋಗ್ಯದಿಂದ ಬಳಲುತ್ತಿದ್ದವು, ಕೆಲವು ಅಕಾಲಿಕವಾಗಿ ಜನಿಸಿದಂಥದ್ದಾಗಿದ್ದವು.

ಜೂನ್ 2015 ಮತ್ತು ಜೂನ್ 2016 ರ ನಡುವೆ ವಾಯುವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಹತ್ಯೆ ಮಾಡಿದ್ದಳು. ಈ ಪ್ರಕರಣದಲ್ಲಿ ಜುಲೈ 2018 ಮತ್ತು ನವೆಂಬರ್ 2020 ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಲಾಗಿತ್ತು. ಎರಡು ಬಾರಿ ಬಿಡುಗಡೆಗೊಂಡಿದ್ದಳು.

ಮತ್ತಷ್ಟು ಓದಿ: ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ದುರ್ಬಲ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿಯನ್ನು ಈ ನರ್ಸ್​ಗೆ ವಹಿಸಲಾಗಿತ್ತು, ಲೂಸಿ ಶಿಫ್ಟ್​ನಲ್ಲಿದ್ದಾಗ ಮಕ್ಕಳು ಮೃತಪಟ್ಟಿದ್ದಾರೆ, ಆದರೆ ಲೂಸಿ ಮಕ್ಕಳು ಸಹಜವಾಗಿ ಸಾವನ್ನಪ್ಪಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳುತ್ತಿದ್ದಾಳೆ. ಆಕೆಯ ಮನೆಯಲ್ಲಿ ಸಿಕ್ಕ ಪತ್ರವೊಂದರಲ್ಲಿ ನಾನು ದುಷ್ಟೆ, ನಾನೇ ಎಲ್ಲಾ ತಪ್ಪನ್ನು ಮಾಡಿದ್ದೇನೆ ಎಂದು ಬರೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್