AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಕೊಲ್ಲುವ ಸೀರಿಯಲ್ ಕಿಲ್ಲರ್ ನರ್ಸ್​, ಇಲ್ಲಿಯವರೆಗೆ 7 ಹಸುಳೆಗಳು ಸಾವು
ನರ್ಸ್​Image Credit source: NDTV
Follow us
ನಯನಾ ರಾಜೀವ್
|

Updated on: Aug 19, 2023 | 8:01 AM

ಆಸ್ಪತ್ರೆಯಲ್ಲಿ ವೈದ್ಯರಷ್ಟೇ ನರ್ಸ್​ಗಳ ಮೇಲೂ ನಂಬಿಕೆ ಇರುತ್ತದೆ. ವೈದ್ಯರು ಇವರಿಗೆ ಇಂತಿಂಥ ಚಿಕಿತ್ಸೆ ನೀಡಬೇಕೆಂದು ಹೇಳಿ ಹೋಗುತ್ತಾರೆ, ಆದರೆ ಚಿಕಿತ್ಸೆ ನೀಡುವುದು ನರ್ಸ್​ಗಳೇ ಹಾಗಾಗಿ ತುಸು ನಂಬಿಕೆ ಹೆಚ್ಚು. ಆದರೆ ಯುಕೆಯ ಈ ನರ್ಸ್​ ಸೀರಿಯಲ್ ಕಿಲ್ಲರ್ ಆಗಿ ಮಾರ್ಪಾಟಾಗಿದ್ದಾಳೆ, ಇದುವರೆಗೆ 7 ನವಜಾತ ಶಿಶುಗಳನ್ನು ಹತ್ಯೆ ಮಾಡಿದ್ದು, ಇನ್ನೂ 6 ಶಿಶುಗಳನ್ನು ಕೊಲ್ಲಲ್ಲು ಪ್ರಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಇದೀಗ ನರ್ಸ್​ ಅನ್ನು ತಪ್ಪಿತಸ್ಥೆ ಎಂದಿರುವ ನ್ಯಾಯಾಲಯ ಆಗಸ್ಟ್​ 21 ರಂದು ಮ್ಯಾಂಚೆಸ್ಟರ್ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ. ನರ್ಸ್​ ಲೂಸಿ ಲೆಟ್ಟಿ 33 ವರ್ಷ ವಯಸ್ಸಿನವರು, ಕಳೆದ ಅಕ್ಟೋಬರ್​ನಿಂದ ಈ ಪ್ರಕರಣ ಕುರಿತು ವಿಚಾರಣೆ ನಡೆಯುತ್ತಿದೆ, ಆಕೆಯಿಂದ ಮೃತಪಟ್ಟ ಮಕ್ಕಳಲ್ಲಿ ಹೆಚ್ಚಿನವು ಅನಾರೋಗ್ಯದಿಂದ ಬಳಲುತ್ತಿದ್ದವು, ಕೆಲವು ಅಕಾಲಿಕವಾಗಿ ಜನಿಸಿದಂಥದ್ದಾಗಿದ್ದವು.

ಜೂನ್ 2015 ಮತ್ತು ಜೂನ್ 2016 ರ ನಡುವೆ ವಾಯುವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಹತ್ಯೆ ಮಾಡಿದ್ದಳು. ಈ ಪ್ರಕರಣದಲ್ಲಿ ಜುಲೈ 2018 ಮತ್ತು ನವೆಂಬರ್ 2020 ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಲಾಗಿತ್ತು. ಎರಡು ಬಾರಿ ಬಿಡುಗಡೆಗೊಂಡಿದ್ದಳು.

ಮತ್ತಷ್ಟು ಓದಿ: ಬೆಳಗಾವಿ: ಪತಿಗೆ ವಿಷ ಕೊಟ್ಟು ಕೊಲೆಗೆ ಯತ್ನಿಸಿದ ಪತ್ನಿ; ವಿಷ ಬರೆಸಿದ್ದ ಉಪ್ಪಿಟ್ಟು ತಿಂದ ಬೆಕ್ಕು, ನಾಯಿ ಸಾವು!

ದುರ್ಬಲ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿಯನ್ನು ಈ ನರ್ಸ್​ಗೆ ವಹಿಸಲಾಗಿತ್ತು, ಲೂಸಿ ಶಿಫ್ಟ್​ನಲ್ಲಿದ್ದಾಗ ಮಕ್ಕಳು ಮೃತಪಟ್ಟಿದ್ದಾರೆ, ಆದರೆ ಲೂಸಿ ಮಕ್ಕಳು ಸಹಜವಾಗಿ ಸಾವನ್ನಪ್ಪಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳುತ್ತಿದ್ದಾಳೆ. ಆಕೆಯ ಮನೆಯಲ್ಲಿ ಸಿಕ್ಕ ಪತ್ರವೊಂದರಲ್ಲಿ ನಾನು ದುಷ್ಟೆ, ನಾನೇ ಎಲ್ಲಾ ತಪ್ಪನ್ನು ಮಾಡಿದ್ದೇನೆ ಎಂದು ಬರೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು