AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಾನೂನಿಗೆ ವಿಧೇಯನಾಗಿರುವ ನಾಗರಿಕ..ಆಂಟಿಗುವಾಕ್ಕೆ ಹೋಗಲು ಅವಕಾಶ ಕೊಡಿ’-ಡೊಮಿನಿಕಾ ಹೈಕೋರ್ಟ್​​ಗೆ ಚೋಕ್ಸಿ ಮನವಿ

2018ರವರೆಗೂ ಭಾರತದಲ್ಲಿ ತನಿಖಾದಳಗಳು ನನ್ನ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. 2018ರಲ್ಲಿ ನಾನು ವೈದ್ಯಕೀಯ ಚಿಕಿತ್ಸೆಗಾಗಿ ಭಾರತದಿಂದ ಅಮೆರಿಕಕ್ಕೆ ಹೋದೆ ಎಂದು ಮೆಹುಲ್​ ಚೋಕ್ಸಿ ಅಫಿಡವಿಟ್​​ನಲ್ಲಿ ಹೇಳಿಕೊಂಡಿದ್ದಾರೆ.

‘ನಾನು ಕಾನೂನಿಗೆ ವಿಧೇಯನಾಗಿರುವ ನಾಗರಿಕ..ಆಂಟಿಗುವಾಕ್ಕೆ ಹೋಗಲು ಅವಕಾಶ ಕೊಡಿ’-ಡೊಮಿನಿಕಾ ಹೈಕೋರ್ಟ್​​ಗೆ ಚೋಕ್ಸಿ ಮನವಿ
ಮೆಹುಲ್ ಚೋಕ್ಸಿ
TV9 Web
| Edited By: |

Updated on: Jun 07, 2021 | 9:13 AM

Share

ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಯಾಗಿರುವ ಮೆಹುಲ್​ ಚೋಕ್ಸಿ ಡೊಮಿನಿಕಾ ಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದ್ದು, ನಾನು ಡೊಮಿನಿಕಾದಿಂದ ಎಲ್ಲಿಯೂ ತಪ್ಪಿಸಿಕೊಂಡು ಹೋಗುವುದಿಲ್ಲ. ನಾನು ಕಾನೂನನ್ನು ಸರಿಯಾಗಿ ಪರಿಪಾಲನೆ ಮಾಡುವ ನಾಗರಿಕ ಎಂದು ಹೇಳಿದ್ದಾರೆ. ಹಾಗೇ, ತಮಗೆ ಆಂಟಿಗುವಾಕ್ಕೆ ಹೋಗಲು ಅನುಮತಿ ನೀಡಬೇಕು ಎಂದು ಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಮೆಹುಲ್​ ಚೋಕ್ಸಿ ಓರ್ವ ವಜ್ರದ ವ್ಯಾಪಾರಿ. ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದ ಬಳಿಕ ಭಾರತದಿಂದ ಬಂದು ಆಂಟಿಗುವಾದಲ್ಲೇ ವಾಸವಾಗಿದ್ದರು. ಇಲ್ಲಿನ ಪೌರತ್ವವನ್ನೂ ಪಡೆದಿದ್ದರು. ಆದರೆ ಕೆಲವೇ ದಿನಗಳ ಹಿಂದೆ ಡೊಮಿನಿಕಾವನ್ನು ಪ್ರವೇಶಿಸಿ, ಅಲ್ಲಿ ಅರೆಸ್ಟ್​ ಆಗಿದ್ದರು. ಡೊಮಿನಿಕಾವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಇಲ್ಲಿನ ಆಡಳಿತ ಹೇಳುತ್ತಿದೆ. ಆದರೆ ಮೆಹುಲ್​ ಚೋಕ್ಸಿ, ತಾನು ಅಕ್ರಮವಾಗಿ ಪ್ರವೇಶಿಸಿದ್ದಲ್ಲ, ನನ್ನನ್ನು ಕಿಡ್ನ್ಯಾಪ್​ ಮಾಡಲಾಗಿದೆ ಎಂದು ಕೋರ್ಟ್​ಗೆ ಹೇಳಿದ್ದಾರೆ. ಇದೊಂದು ಹನಿಟ್ರ್ಯಾಪ್​ ಎಂದು ಚೋಕ್ಸಿ ಪರ ವಕೀಲರು ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಡೊಮಿನಿಕಾ ಮ್ಯಾಜಿಸ್ಟ್ರೇಟ್​ ಕೋರ್ಟ್​​ ಚೋಕ್ಸಿಯವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಪ್ರಕರಣ ಅಲ್ಲಿನ ಹೈಕೋರ್ಟ್​ ಮೆಟ್ಟಿಲೇರಿದೆ. ಹೈಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದ ಚೋಕ್ಸಿ, ತಮಗೆ ಆಂಟಿಗುವಾಕ್ಕೆ ಹೋಗಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಪಿಎನ್​​ಬಿ ಹಗರಣದ ಬಗ್ಗೆ ನನ್ನನ್ನು ವಿಚಾರಣೆ ಮಾಡಲು ಭಾರತದ ತನಿಖಾ ದಳಗಳನ್ನು ಇಲ್ಲಿಗೇ ಆಹ್ವಾನಿಸಿದ್ದೇನೆ ಎಂದೂ ಹೇಳಿಕೊಂಡಿದ್ದರು.

2018ರವರೆಗೂ ಭಾರತದಲ್ಲಿ ತನಿಖಾದಳಗಳು ನನ್ನ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. 2018ರಲ್ಲಿ ನಾನು ವೈದ್ಯಕೀಯ ಚಿಕಿತ್ಸೆಗಾಗಿ ಭಾರತದಿಂದ ಅಮೆರಿಕಕ್ಕೆ ಹೋದೆ ಎಂದು ಅಫಿಡವಿಟ್​​ನಲ್ಲಿ ಹೇಳಿಕೊಂಡಿದ್ದಾರೆ. 2018ರ ಮೇ ತಿಂಗಳಲ್ಲಿ ಚೋಕ್ಸಿ ಯುಎಸ್​​ನಿಂದ ಆಂಟಿಗುವಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇಷ್ಟೆಲ್ಲ ಆದ ಬಳಿಕವಷ್ಟೇ ಸಿಬಿಐ ಮೆಹುಲ್​ ಚೋಕ್ಸಿ ವಿರುದ್ಧ ಕೇಸ್​ ದಾಖಲಿಸಿದ್ದು. ಅದಾದ ಬಳಿಕ 2019ರಲ್ಲಿ ಚೋಕ್ಸಿ ಬಾಂಬೆ ಹೈಕೋರ್ಟ್​​ಗೆ ಕೂಡ ಅಫಿಡವಿಟ್​ ಸಲ್ಲಿಸಿದ್ದರು. ಈಗ ಡೊಮಿನಿಕಾ ಹೈಕೋರ್ಟ್​​ಗೆ ಸಲ್ಲಿಸಿರುವ ಅಫಿಡವಿಟ್​​​ನಲ್ಲಿರುವ ಅಂಶಗಳೇ ಅದರಲ್ಲೂ ಇವೆ.

ಇದನ್ನೂ ಓದಿ: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

I am Law abiding citizen told by Fugitive tycoon Mehul Choksi to Dominica High court

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್