AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಾನೂನಿಗೆ ವಿಧೇಯನಾಗಿರುವ ನಾಗರಿಕ..ಆಂಟಿಗುವಾಕ್ಕೆ ಹೋಗಲು ಅವಕಾಶ ಕೊಡಿ’-ಡೊಮಿನಿಕಾ ಹೈಕೋರ್ಟ್​​ಗೆ ಚೋಕ್ಸಿ ಮನವಿ

2018ರವರೆಗೂ ಭಾರತದಲ್ಲಿ ತನಿಖಾದಳಗಳು ನನ್ನ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. 2018ರಲ್ಲಿ ನಾನು ವೈದ್ಯಕೀಯ ಚಿಕಿತ್ಸೆಗಾಗಿ ಭಾರತದಿಂದ ಅಮೆರಿಕಕ್ಕೆ ಹೋದೆ ಎಂದು ಮೆಹುಲ್​ ಚೋಕ್ಸಿ ಅಫಿಡವಿಟ್​​ನಲ್ಲಿ ಹೇಳಿಕೊಂಡಿದ್ದಾರೆ.

‘ನಾನು ಕಾನೂನಿಗೆ ವಿಧೇಯನಾಗಿರುವ ನಾಗರಿಕ..ಆಂಟಿಗುವಾಕ್ಕೆ ಹೋಗಲು ಅವಕಾಶ ಕೊಡಿ’-ಡೊಮಿನಿಕಾ ಹೈಕೋರ್ಟ್​​ಗೆ ಚೋಕ್ಸಿ ಮನವಿ
ಮೆಹುಲ್ ಚೋಕ್ಸಿ
TV9 Web
| Edited By: |

Updated on: Jun 07, 2021 | 9:13 AM

Share

ಪಂಜಾಬ್ ನ್ಯಾಷನಲ್​ ಬ್ಯಾಂಕ್​ ಹಗರಣದಲ್ಲಿ ಆರೋಪಿಯಾಗಿರುವ ಮೆಹುಲ್​ ಚೋಕ್ಸಿ ಡೊಮಿನಿಕಾ ಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದ್ದು, ನಾನು ಡೊಮಿನಿಕಾದಿಂದ ಎಲ್ಲಿಯೂ ತಪ್ಪಿಸಿಕೊಂಡು ಹೋಗುವುದಿಲ್ಲ. ನಾನು ಕಾನೂನನ್ನು ಸರಿಯಾಗಿ ಪರಿಪಾಲನೆ ಮಾಡುವ ನಾಗರಿಕ ಎಂದು ಹೇಳಿದ್ದಾರೆ. ಹಾಗೇ, ತಮಗೆ ಆಂಟಿಗುವಾಕ್ಕೆ ಹೋಗಲು ಅನುಮತಿ ನೀಡಬೇಕು ಎಂದು ಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಮೆಹುಲ್​ ಚೋಕ್ಸಿ ಓರ್ವ ವಜ್ರದ ವ್ಯಾಪಾರಿ. ಪಂಜಾಬ್​ ನ್ಯಾಷನಲ್​ ಬ್ಯಾಂಕ್​ ಹಗರಣದ ಬಳಿಕ ಭಾರತದಿಂದ ಬಂದು ಆಂಟಿಗುವಾದಲ್ಲೇ ವಾಸವಾಗಿದ್ದರು. ಇಲ್ಲಿನ ಪೌರತ್ವವನ್ನೂ ಪಡೆದಿದ್ದರು. ಆದರೆ ಕೆಲವೇ ದಿನಗಳ ಹಿಂದೆ ಡೊಮಿನಿಕಾವನ್ನು ಪ್ರವೇಶಿಸಿ, ಅಲ್ಲಿ ಅರೆಸ್ಟ್​ ಆಗಿದ್ದರು. ಡೊಮಿನಿಕಾವನ್ನು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಇಲ್ಲಿನ ಆಡಳಿತ ಹೇಳುತ್ತಿದೆ. ಆದರೆ ಮೆಹುಲ್​ ಚೋಕ್ಸಿ, ತಾನು ಅಕ್ರಮವಾಗಿ ಪ್ರವೇಶಿಸಿದ್ದಲ್ಲ, ನನ್ನನ್ನು ಕಿಡ್ನ್ಯಾಪ್​ ಮಾಡಲಾಗಿದೆ ಎಂದು ಕೋರ್ಟ್​ಗೆ ಹೇಳಿದ್ದಾರೆ. ಇದೊಂದು ಹನಿಟ್ರ್ಯಾಪ್​ ಎಂದು ಚೋಕ್ಸಿ ಪರ ವಕೀಲರು ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಡೊಮಿನಿಕಾ ಮ್ಯಾಜಿಸ್ಟ್ರೇಟ್​ ಕೋರ್ಟ್​​ ಚೋಕ್ಸಿಯವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಪ್ರಕರಣ ಅಲ್ಲಿನ ಹೈಕೋರ್ಟ್​ ಮೆಟ್ಟಿಲೇರಿದೆ. ಹೈಕೋರ್ಟ್​​ಗೆ ಅಫಿಡವಿಟ್​ ಸಲ್ಲಿಸಿದ ಚೋಕ್ಸಿ, ತಮಗೆ ಆಂಟಿಗುವಾಕ್ಕೆ ಹೋಗಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಪಿಎನ್​​ಬಿ ಹಗರಣದ ಬಗ್ಗೆ ನನ್ನನ್ನು ವಿಚಾರಣೆ ಮಾಡಲು ಭಾರತದ ತನಿಖಾ ದಳಗಳನ್ನು ಇಲ್ಲಿಗೇ ಆಹ್ವಾನಿಸಿದ್ದೇನೆ ಎಂದೂ ಹೇಳಿಕೊಂಡಿದ್ದರು.

2018ರವರೆಗೂ ಭಾರತದಲ್ಲಿ ತನಿಖಾದಳಗಳು ನನ್ನ ವಿರುದ್ಧ ಪ್ರಕರಣ ದಾಖಲಿಸಲಿಲ್ಲ. 2018ರಲ್ಲಿ ನಾನು ವೈದ್ಯಕೀಯ ಚಿಕಿತ್ಸೆಗಾಗಿ ಭಾರತದಿಂದ ಅಮೆರಿಕಕ್ಕೆ ಹೋದೆ ಎಂದು ಅಫಿಡವಿಟ್​​ನಲ್ಲಿ ಹೇಳಿಕೊಂಡಿದ್ದಾರೆ. 2018ರ ಮೇ ತಿಂಗಳಲ್ಲಿ ಚೋಕ್ಸಿ ಯುಎಸ್​​ನಿಂದ ಆಂಟಿಗುವಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇಷ್ಟೆಲ್ಲ ಆದ ಬಳಿಕವಷ್ಟೇ ಸಿಬಿಐ ಮೆಹುಲ್​ ಚೋಕ್ಸಿ ವಿರುದ್ಧ ಕೇಸ್​ ದಾಖಲಿಸಿದ್ದು. ಅದಾದ ಬಳಿಕ 2019ರಲ್ಲಿ ಚೋಕ್ಸಿ ಬಾಂಬೆ ಹೈಕೋರ್ಟ್​​ಗೆ ಕೂಡ ಅಫಿಡವಿಟ್​ ಸಲ್ಲಿಸಿದ್ದರು. ಈಗ ಡೊಮಿನಿಕಾ ಹೈಕೋರ್ಟ್​​ಗೆ ಸಲ್ಲಿಸಿರುವ ಅಫಿಡವಿಟ್​​​ನಲ್ಲಿರುವ ಅಂಶಗಳೇ ಅದರಲ್ಲೂ ಇವೆ.

ಇದನ್ನೂ ಓದಿ: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

I am Law abiding citizen told by Fugitive tycoon Mehul Choksi to Dominica High court

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್