AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Donald Trump: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ; ಡೊನಾಲ್ಡ್​ ಟ್ರಂಪ್ ಘೋಷಣೆ

2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್​ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

Donald Trump: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ; ಡೊನಾಲ್ಡ್​ ಟ್ರಂಪ್ ಘೋಷಣೆ
ಡೊನಾಲ್ಡ್​ ಟ್ರಂಪ್
TV9 Web
| Edited By: |

Updated on:Nov 16, 2022 | 10:40 AM

Share

ಕ್ಯಾಲಿಫೋರ್ನಿಯಾ: ಕಳೆದ ವಾರ ಓಹಿಯೋದಲ್ಲಿ ಚುನಾವಣೆ ಪ್ರಚಾರ ಮಾಡುವಾಗ ಮುಂದಿನ ವಾರ ಬಹಳ ದೊಡ್ಡ ಘೋಷಣೆ ಮಾಡಲಿದ್ದೇನೆ ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದರು. ಆ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, ಡೊನಾಲ್ಡ್​ ಟ್ರಂಪ್ (Donald Trump) 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (US President Election 2024) ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 2020ರಲ್ಲಿ ಚುನಾವಣೆಯಲ್ಲಿ ಸೋತಿದ್ದ ಡೊನಾಲ್ಡ್​ ಟ್ರಂಪ್ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇದುವರೆಗೂ ಏನೂ ಹೇಳಿರಲಿಲ್ಲ. ಆದರೆ, ಇದೀಗ ತಾನು ಮತ್ತೆ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅಧ್ಯಕ್ಷೀಯ ಚುನಾವಣೆಗೆ US ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ; 2024ರ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಅಮೆರಿಕಾದ ಮಾಜಿ ಅಧ್ಯಕ್ಷ?

“ನಾನು ಇಂದು ರಾತ್ರಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ” ಎಂದು ಡೊನಾಲ್ಡ್​ ಟ್ರಂಪ್ ಹೇಳಿದ್ದರು. 2016ರ ಚುನಾವಣೆಯಲ್ಲಿ ವ್ಯಾಪಾರ ಉದ್ಯಮಿ ಮತ್ತು ರಿಯಾಲಿಟಿ ಟಿವಿ ತಾರೆ ಡೊನಾಲ್ಡ್​ ಟ್ರಂಪ್ ಅವರ ಗೆಲುವು ಜಗತ್ತನ್ನು ಬೆರಗುಗೊಳಿಸಿತ್ತು. ರಿಪಬ್ಲಿಕನ್ ನಾಯಕ ಇನ್ನೂ ತನ್ನ ಅನುಯಾಯಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದಾರೆ.

2024ರ ಬೇಸಿಗೆಯ ಸಮಯದಲ್ಲಿ ಅಮೆರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ದೀರ್ಘಾವಧಿಯ ಅಧ್ಯಕ್ಷೀಯ ಪ್ರಚಾರಗಳಿಗೆ ಹೆಸರುವಾಸಿಯಾಗಿರುವ ಅಮೆರಿಕ ದೇಶದಲ್ಲಿ ಟ್ರಂಪ್ ಅವರ ಈ ಘೋಷಣೆಯು ಸಾಮಾನ್ಯಕ್ಕಿಂತ ಮುಂಚೆಯೇ ಬಂದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 16 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು